ಬ್ರೇಕಿಂಗ್ ನ್ಯೂಸ್
03-03-25 08:11 pm HK News Desk ಕರ್ನಾಟಕ
ಕೊಪ್ಪಳ, ಮಾ 03: ರಾಜ್ಯ ಸರ್ಕಾರದಲ್ಲಿ ಸಿಎಂ ಬದಲಾವಣೆ ವಿಚಾರ ಭಾರೀ ಚರ್ಚೆಯಾಗುತ್ತಿದೆ. ಇತ್ತೀಚೆಗೆ ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಡಿಸಿಎಂ ಡಿಕೆ ದೆಹಲಿಗೆ ಹೋಗಿ ಬಂದ ಬಳಿಕ ನೀಡಿದ ಹೇಳಿಕೆಗಳು ಮತ್ತೊಂದು ಸಿಎಂ ಸಿದ್ದರಾಮಯ್ಯ ಆಪ್ತ ಬಣದಲ್ಲಿ ನಡುಕ ಹುಟ್ಟಿಸಿದೆ. ಅಷ್ಟೇ ಅಲ್ಲದೇ ಸಿಎಂ ಸ್ಥಾನ ನೀಡದಿದ್ರೆ ಬಿಜೆಪಿ ಸೇರುವ ಎಚ್ಚರಿಕೆಯ ಸಂದೇಶವನ್ನೂ ಡಿಕೆ ಶಿವಕುಮಾರ್ ನೀಡಿದ್ದಾರೆ ಎನ್ನಲಾಗಿದೆ.
ರಾಜ್ಯ ಕಾಂಗ್ರೆಸ್ನಲ್ಲಿ ಸಿಎಂ ಸಿದ್ದರಾಮಯ್ಯ ಆಪ್ತರು ಸಿದ್ದರಾಮಯ್ಯ ಪರವಾಗಿ ಬ್ಯಾಟಿಂಗ್ ಮಾಡುತ್ತಿದ್ದರೆ, ಡಿಕೆಶಿ ಪರವಾಗಿ ಬೆರಳೆಣಿಕೆಯಷ್ಟು ಜನರು ಮಾತ್ರ ಮಾತನಾಡುತ್ತಿದ್ದಾರೆ. ಈ ನಡುವೆ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಡಿಕೆ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ.
ಸಿದ್ದರಾಮಯ್ಯನವರಿಗೆ ವಯಸ್ಸಾಗಿದೆ, ಅವರಿಗೆ ಆರೋಗ್ಯದ ಸಮಸ್ಯೆ ಕೂಡ ಇದೆ ಹಾಗಾಗಿ ಅವರು ಸಿಎಂ ಸ್ಥಾನ ಬಿಟ್ಟು ಕೊಡಬಹುದು ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೇ ಡಿಕೆ ಶಿವಕುಮಾರ್ ಅವರು ತಾವು ಹಿಂದೂ ಎನ್ನುವ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ರೆಡ್ಡಿ, ಡಿಕೆ ಹಿಂದೂವಾಗಿ ಹುಟ್ಟಿದ್ದಾರೆ. ಹಿಂದೂವಾಗಿಯೇ ಮುಂದುವರಿಯುತ್ತಾರೆ. ಅವರು ಮಾಡುತ್ತಿರುವ ಪೂಜೆ, ಹಿಂದೂ ಸಂಸ್ಕೃತಿ ಆಚರಣೆಯಾಗಿದೆ. ಅದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ. ಅವರ ರಾಜಕೀಯ ಏನೇ ಆಗಿರಲಿ, ಅವರು ಸಾರ್ವಜನಿಕವಾಗಿ ಪೂಜೆ ಪುನಸ್ಕಾರ ಮಾಡುತ್ತಿರುವುದು ಇದೇ ಮೊದಲಲ್ಲ ಎಂದು ಹೇಳಿದ್ದಾರೆ.
ಇನ್ನು ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ದಿವಾಳಿ ಆಗಿದೆ. ಹಿಂದುಳಿದ ವರ್ಗಗಳ, ಎಸ್ಸಿಪಿ ಟಿಎಸ್ಪಿ ಹಣ ದುರ್ಬಳಕೆ ಮಾಲಾಗುತ್ತಿದೆ. ಪ್ರಾರಂಭಿಕ 6 ಪಂಚ ವಾರ್ಷಿಕ ಯೋಜನೆಗಳಲ್ಲಿ ಎಸ್ಸಿಪಿ, ಟಿಎಸ್ಪಿ ಯೋಜನೆ ತರಲಿಲ್ಲ ಎಂದು ಬಿಜೆಪಿ ಆರೋಪ ಮಾಡುತ್ತಿದೆ. ಇದರ ನಡುವೆ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ವಿಜಯಪುರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ರಮೇಶ ಜಿಗಜಿಣಗಿ ಅವರು, ದಲಿತರಿಗೆ ಅನ್ಯಾಯ ಮಾಡಿ ಅಹಿಂದ ನಾಯಕ ಅಂತ ಹೇಳ್ತೀರಲ್ಲ, ನಿಮಗೆ ನಾಚಿಕೆ ಆಗೋದಿಲ್ವಾ? ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ
ಖರ್ಗೆ ಅವರೇ, ನೀವಾದರೂ ಸಿದ್ದರಾಮಯ್ಯಗೆ ಬುದ್ದಿ ಹೇಳಬೇಕಿತ್ತು. ಖರ್ಗೆ ಅವರ ದಲಿತರ ವಿಚಾರದಲ್ಲಿ ಸುಮ್ಮನಾಗಿದ್ದಾರೆ. ಕಾಂಗ್ರೆಸ್ ಪಕ್ಷ ದಲಿತರಿಗೆ ಅನ್ಯಾಯ ಮಾಡಿದೆ, ಅದರೂ ದಲಿತ ನಾಯಕರು ಯಾರು ಅದನ್ನು ಕೇಳುತ್ತಿಲ್ಲ ಯಾಕೆ? ಎಂದು ಅವರು ಪ್ರಶ್ನೆ ಮಾಡಿದರು.
Siddaramaiah should resign due to health issues says Janardhana Reddy, indirectly supports DK Shivakumar. Karnataka Chief Minister Siddaramaiah is likely to step down from his position due to personal and health issues, which may lead to the collapse of the Congress government in the state, claimed Gangavathi MLA Gali Janardhan Reddy.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am