ಬ್ರೇಕಿಂಗ್ ನ್ಯೂಸ್
03-03-25 09:22 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.3: ಹಿರಿಯ ಐಪಿಎಸ್ ಅಧಿಕಾರಿ ರೂಪಾ ಡಿ. ಮೌದ್ಗಿಲ್ ಅವರ ವಿರುದ್ಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತು ಡಿಜಿಪಿ ಅಲೋಕ್ ಮೋಹನ್ ಅವರಿಗೆ ಲಿಖಿತ ದೂರು ನೀಡಿದ್ದ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ಅವರನ್ನು ಸೋಮವಾರ ದಿಢೀರ್ ವರ್ಗಾವಣೆ ಮಾಡಲಾಗಿದೆ.
2010ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿರುವ ಕತಿಯಾರ್, ಆಂತರಿಕ ಭದ್ರತಾ ವಿಭಾಗದಲ್ಲಿ ಡಿಐಜಿ ಆಗಿದ್ದರು. ಅದೇ ವಿಭಾಗದಲ್ಲಿ ಹಿರಿಯ ಶ್ರೇಣಿಯ ಐಜಿಪಿ ಆಗಿರುವ ರೂಪಾ ಮೌದ್ಗಿಲ್ 2000ನೇ ಬ್ಯಾಚ್ ಐಪಿಎಸ್ ಅಧಿಕಾರಿ. ವಿಭಾಗದಲ್ಲಿ ಕತಿಯಾರ್ ಗೆ ರೂಪಾ ಅವರೇ ಬಾಸ್ ಆಗಿದ್ದರು. ಆದರೆ ಇವರ ವಿರುದ್ಧವೇ ದೂರು ಪತ್ರ ಬರೆದಿದ್ದು ಮತ್ತೆ ಜಡೆ ಜಗಳ ಚರ್ಚೆಯ ವಸ್ತುವಾಗಿತ್ತು. ಇದರ ಬೆನ್ನಲ್ಲೇ ಕಟಿಯಾರ್ ಅವರನ್ನು ಸಿವಿಲ್ ಡಿಫೆನ್ಸ್ ಮತ್ತು ಹೋಮ್ ಗಾರ್ಡ್ ವಿಭಾಗಕ್ಕೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರೂಪಾ ಅವರ ವಿರುದ್ಧ ದೂರು ನೀಡಿದ ಬೆನ್ನಲ್ಲೇ ವರ್ತಿಕಾ ಅವರನ್ನು ಹಲವು ಸಮಯದಿಂದ ಖಾಲಿಯಿದ್ದ ಗೃಹ ರಕ್ಷಕ ದಳದ ಡಿಐಜಿ ಮತ್ತು ಹೆಚ್ಚುವರಿ ಕಮಾಂಡೆಂಟ್ ಆಗಿ ವರ್ಗಾವಣೆ ಮಾಡಲಾಗಿದೆ. ಆಂತರಿಕ ಭದ್ರತಾ ವಿಭಾಗದಿಂದ ಮಹತ್ವ ಇಲ್ಲದ ಹುದ್ದೆಗೆ ವರ್ಗಾಯಿಸಿರುವುದು ಚರ್ಚೆಗೆ ಗ್ರಾಸವಾಗಿದೆ. ಆದಾಗ್ಯೂ, ಸರ್ಕಾರ ಹೊರಡಿಸಿದ ಆದೇಶದಲ್ಲಿ ವರ್ಗಾವಣೆಗೆ ಯಾವುದೇ ಕಾರಣವನ್ನು ನೀಡಿಲ್ಲ.
ಕಳೆದ ತಿಂಗಳು, ಕಟಿಯಾರ್ ಅವರು 2000 ಬ್ಯಾಚ್ನ ಐಪಿಎಸ್ ಅಧಿಕಾರಿ ರೂಪಾ ಡಿ ಮೌದ್ಗಿಲ್ ವಿರುದ್ಧ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಲಿಖಿತ ದೂರು ನೀಡಿದ್ದರು. ರೂಪಾ ಅವರು ತಮ್ಮ ಅನುಪಸ್ಥಿತಿಯಲ್ಲಿ ಇಬ್ಬರು ಕಿರಿಯ ಪೊಲೀಸ್ ಅಧಿಕಾರಿಗಳನ್ನು ಕಳಿಸಿಕೊಟ್ಟು ನಿಯಂತ್ರಣ ಕೊಠಡಿಯಿಂದ ಕೀ ತೆಗೆದು ತನ್ನ ಕಚೇರಿಯಲ್ಲಿದ್ದ ದಾಖಲೆ ಪತ್ರಗಳನ್ನು ಪಡೆದಿದ್ದಾರೆ. ಅದರ ಪ್ರತಿಯನ್ನು ವಾಟ್ಸಪ್ ನಲ್ಲಿ ಹಂಚಲಾಗಿದೆ. ಇದು ಅತಿರೇಕದ ಘಟನೆಯಾಗಿದ್ದು ಇದರಿಂದ ಏನಾದರೂ ತೊಂದರೆಯಾದರೆ ರೂಪಾ ಅವರೇ ಕಾರಣ. ಅಲ್ಲದೆ, ತನ್ನ ಬಗ್ಗೆ ನೆಗೆಟಿವ್ ರಿಪೋರ್ಟ್ ಕೊಡುವುದಾಗಿ ಹೇಳಿದ್ದರು ಇತ್ಯಾದಿ ವಿಚಾರಗಳನ್ನು ಬರೆದಿದ್ದರು.
ರೂಪಾ ಮೌದ್ಗಿಲ್ ಅವರು 2025ರ ಜನವರಿ ವೇಳೆಗೆ ಎಡಿಜಿಪಿ ಹುದ್ದೆಗೆ ಭಡ್ತಿ ಪಡೆಯಬೇಕಿತ್ತು. ಎರಡು ವರ್ಷಗಳಿಂದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಜೊತೆಗೆ ಕಾನೂನು ಸಮರ ನಡೆಸುತ್ತಿದ್ದು ಇದರ ಕಾರಣದಿಂದ ಸಾರ್ವಜನಿಕರ ಗಮನ ಸೆಳೆದಿದ್ದಾರೆ.
A day after IPS officer Vartika Katiyar accused her immediate boss and IGP D Roopa Moudgil of using police personnel to plant confidential documents related to other departments in her chamber, the Karnataka government Monday shunted Katiyar from the Internal Security Division, where she was posted as a DIG.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am