ಬ್ರೇಕಿಂಗ್ ನ್ಯೂಸ್
04-03-25 07:20 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.4: ಕರಾವಳಿಯಲ್ಲಿ ಎಲ್ಲ ರೀತಿಯ ಪ್ರವಾಸೋದ್ಯಮಕ್ಕೂ ಅವಕಾಶ ಇದೆ. ಆದರೆ ಕರಾವಳಿ ಭಾಗದಲ್ಲಿ ಏಳು ಗಂಟೆ ವೇಳೆಗೆ ಎಂಟೈರ್ ಡೆಡ್ ಆಗುತ್ತೆ. ಇದ್ಯಾಕೆ ಆಗುತ್ತದೆ ಎಂದು ಎಲ್ಲ ಶಾಸಕರು ಸೇರಿ ಚರ್ಚೆ ಮಾಡಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕರಾವಳಿಯಲ್ಲಿ ಕುಕ್ಕೆ, ಧರ್ಮಸ್ಥಳಕ್ಕೆ ಬರುವ ಜನರು ಫಾಲ್ಸ್ ಇನ್ನಿತರ ಪ್ರದೇಶಕ್ಕೂ ಹೋಗುವಂತೆ ವ್ಯವಸ್ಥೆ ಆಗಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರಸ್ತಾಪಕ್ಕೆ, ಸಚಿವ ಸಿಸಿ ಪಾಟೀಲ್ ಪ್ರತಿಕ್ರಿಯೆಗೂ ಮುನ್ನ ಡಿಸಿಎಂ ಮಾತನಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದಕ್ಕೆ ಕಡಿಮೆ ಇದೆ. ಅತಿ ಹೆಚ್ಚು ಪ್ರತಿಭಾವಂತರು ಇದ್ದಾರೆ. ಆದರೆ ಅವರೆಲ್ಲ ಬೆಂಗಳೂರು, ಮುಂಬೈ ಅಥವಾ ದುಬೈಗೆ ಹೋಗುತ್ತಾರೆ. ಎರಡು ವರ್ಷಗಳಿಂದ ಇಂಜಿನಿಯರಿಂಗ್, ಮೆಡಿಕಲ್ ಕಾಲೇಜಿಗೂ ಪ್ರವೇಶ ಕಡಿಮೆಯಾಗಿದೆ. ಇದೆಲ್ಲ ಯಾಕೆ ಆಗುತ್ತಿದೆ ಎಂದು ಚಿಂತನೆ ಮಾಡಬೇಕು.
ಸಂಜೆಯಾದ ಕೂಡಲೇ ಸಿಟಿ ಡೆಡ್ ಆಗುವ ಪ್ರದೇಶಕ್ಕೆ ಐಟಿ- ಬಿಟಿಯವರು ಬರುತ್ತಾರೆಯೇ ಎಂದು ಕೇಳಿದ ಶಿವಕುಮಾರ್, ಅತಿ ಹೆಚ್ಚು ಇಂಜಿನಿಯರಿಂಗ್, ಮೆಡಿಕಲ್ ಕಾಲೇಜು ಇರೋದು ಅಲ್ಲೇ.. ಯುವಕರಿಗೆ ಸಂತೋಷವಾಗಿರಲು ವ್ಯವಸ್ಥೆ ಇಲ್ಲಾಂದ್ರೆ ಜನರು ಬರಲ್ಲ. ಐಟಿಯವರು ಬರಲ್ಲ, ಇದಕ್ಕಾಗಿ ನೀವೊಮ್ಮೆ ಕುಳಿತು ಚಿಂತಿಸಿ ಹೇಳಿ ಎಂದರು. ಇದಕ್ಕುತ್ತರಿಸಿದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿ, ಮರವಂತೆ ಬೀಚ್ ನಲ್ಲಿ ಅದೇ ರೀತಿಯಾಗಿದೆ, ಒಂದು ಲೈಟಿಂಗ್ಸ್ ಹಾಕಿ ಎಂದರೆ ಅಧಿಕಾರಿಗಳು ಮುಂದೆ ಬರಲ್ಲ ಎಂದರು. ಅದಕ್ಕೆ ಸ್ಪೀಕರ್ ಆಕ್ಷೇಪಿಸಿದ್ದರಿಂದ ಗಂಟಿಹೊಳೆ ಕುಳಿತುಬಿಟ್ಟರು.
ಡಿಕೆಶಿ ಮಾತಿಗೆ ಉತ್ತರಿಸಿದ ಹರೀಶ್ ಪೂಂಜ, ಮಾನ್ಯ ಡಿಸಿಎಂ ಅವರೇ ನೀವು ಹೇಳಿದ ಮಾತಿಗೆ ಪೂರ್ಣ ಬೆಂಬಲ ಇದೆ. ಅತಿ ಹೆಚ್ಚು ಯುವ ಸಮುದಾಯ ನಮ್ಮಲ್ಲಿದೆ, ಅವರಿಗೆ ಉದ್ಯೋಗ ಇನ್ನಿತರ ವ್ಯವಸ್ಥೆ ಆಗಬೇಕು. ನೀವು ಏನು ಹೇಳುತ್ತೀರೋ ಅದಕ್ಕೆ ನಮ್ಮ ಬೆಂಬಲ ಇದೆ ಎಂದು ಹೇಳಿದರು. ಡಿಸಿಎಂ ಉತ್ತರಿಸಿ ಆ ಬಗ್ಗೆ ನಾವೊಮ್ಮೆ ಕುಳಿತು ಮೀಟಿಂಗ್ ಮಾಡೋಣ ಎಂದರು.
Managalore is a dead city after 7pm, need to discuss to improve night life says DK Shivakumar in cabinet assembly session.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm