ಬ್ರೇಕಿಂಗ್ ನ್ಯೂಸ್
05-03-25 01:58 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.5 : ಮಾಜಿ ಸಿಎಂ ಯಡಿಯೂರಪ್ಪ ಲಿಂಗಾಯತರೇ ಅಲ್ಲ. ಅವರು ಬಳೆಗಾರ ಶೆಟ್ಟರು. ಅವರ ಹುಟ್ಟೂರಾದ ಮಂಡ್ಯದ ಬೂಕನಕೆರೆಗೆ ಹೋಗಿ ಕೇಳಿದರೆ, ನಿಜ ಗೊತ್ತಾಗುತ್ತದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಮತ್ತೆ ಕಾಲು ಕೆರೆದಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ವೀರೇಂದ್ರ ಪಾಟೀಲ, ಜೆ.ಎಚ್.ಪಟೇಲ್ ನಂತರ ಸಮುದಾಯದಲ್ಲಿ ಯಾರೂ ನಾಯಕರು ಇರಲಿಲ್ಲ. ಜನರು ಅನಿವಾರ್ಯವಾಗಿ ಯಡಿಯೂರಪ್ಪ ಅವರನ್ನು ಒಪ್ಪಿದ್ದರು. ಆದರೆ ಅವರು ವೀರಶೈವರು ಮತ್ತು ಪಂಚಮಸಾಲಿಗಳಿಗೆ ಮೀಸಲಾತಿ ನೀಡದೆ, ಮೋಸ ಮಾಡಿದರು ಎಂದರು.
ಯಡಿಯೂರಪ್ಪ ಲಿಂಗಾಯತರ ಹೆಸರಿನಲ್ಲಿ ಬಿಜೆಪಿಯನ್ನು ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ. ಶಾಮನೂರು ಶಿವಶಂಕರಪ್ಪ ಕಾಂಗ್ರೆಸ್ ಅನ್ನು ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ. ನಮ್ಮ ಆಕ್ಷೇಪ ಇರುವುದು ಕುಟುಂಬ ರಾಜಕಾರಣದ ಬಗ್ಗೆ ಮಾತ್ರ. ನರೇಂದ್ರ ಮೋದಿ ಸಹ ಕುಟುಂಬ ರಾಜಕಾರಣ ಒಪ್ಪುವುದಿಲ್ಲ ಎಂದರು.
ರೇಣುಕಾಚಾರ್ಯ ಅವರು ತಮ್ಮನ್ನು ನಾಯಿ ನರಿ ಎಂದಿದ್ದರ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾಯಿಗಳಿಗೆ ನಿಯತ್ತು ಇದೆ. ಆದರೆ ಹಂದಿಗಳಿಗೆ ನಿಯತ್ತು ಇಲ್ಲ. ಯಡಿಯೂರಪ್ಪ ಮತ್ತು ವಿಜಯೇಂದ್ರ ಪರ ರೇಣುಕಾಚಾರ್ಯ ಇಂದು ಮಾತನಾಡುತ್ತಿದ್ದಾರೆ. ಆದರೆ, ಅಂದು ಅವರನ್ನು ಅಧಿಕಾರದಿಂದ ಕೆಳಗೆ ಇಳಿಸಲು ಗೋವಾಗೆ ಹೋಗಿ ಸಂಚು ಮಾಡಿದ್ದು ಇದೇ ರೇಣುಕಾಚಾರ್ಯ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಯ್ಕೆ ವಿಚಾರಕ್ಕೆ ಹೈಕಮಾಂಡ್ ಯಥಾಸ್ಥಿತಿ ಕಾಪಾಡಲು ತೀರ್ಮಾನಿಸಿದೆ. ಇದು ನಮ್ಮ ಶ್ರಮದ ಫಲ ಅಲ್ಲವೇ? ನಮ್ಮಲ್ಲಿ ಜನಪರ ವಿಚಾರಗಳಲ್ಲಿ ಭಿನ್ನಮತ ಇಲ್ಲ. ಕುಟುಂಬ ರಾಜಕಾರಣ, ಭ್ರಷ್ಟಾಚಾರದ ಕುಟುಂಬವನ್ನು ದೂರ ಇಡುವುದಷ್ಟೇ ನಮ್ಮ ಭಿನ್ನಮತಕ್ಕೆ ಕಾರಣ. ಕೆಪಿಎಸ್ಸಿ ವಿಚಾರದಲ್ಲಿ ನಾವು ಒಟ್ಟಾಗಿ ಹೋರಾಟ ಮಾಡುತ್ತಿದ್ದೇವೆ ಎಂದರು.
BJP leader Basanagaouda Patil Yatnal claimed that Yediyurappa did not belong to the Lingayat community, but to the Balegara Shettaru community, a minuscule OBC community in the state.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm