ಬ್ರೇಕಿಂಗ್ ನ್ಯೂಸ್
05-03-25 01:58 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.5 : ಮಾಜಿ ಸಿಎಂ ಯಡಿಯೂರಪ್ಪ ಲಿಂಗಾಯತರೇ ಅಲ್ಲ. ಅವರು ಬಳೆಗಾರ ಶೆಟ್ಟರು. ಅವರ ಹುಟ್ಟೂರಾದ ಮಂಡ್ಯದ ಬೂಕನಕೆರೆಗೆ ಹೋಗಿ ಕೇಳಿದರೆ, ನಿಜ ಗೊತ್ತಾಗುತ್ತದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಮತ್ತೆ ಕಾಲು ಕೆರೆದಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ವೀರೇಂದ್ರ ಪಾಟೀಲ, ಜೆ.ಎಚ್.ಪಟೇಲ್ ನಂತರ ಸಮುದಾಯದಲ್ಲಿ ಯಾರೂ ನಾಯಕರು ಇರಲಿಲ್ಲ. ಜನರು ಅನಿವಾರ್ಯವಾಗಿ ಯಡಿಯೂರಪ್ಪ ಅವರನ್ನು ಒಪ್ಪಿದ್ದರು. ಆದರೆ ಅವರು ವೀರಶೈವರು ಮತ್ತು ಪಂಚಮಸಾಲಿಗಳಿಗೆ ಮೀಸಲಾತಿ ನೀಡದೆ, ಮೋಸ ಮಾಡಿದರು ಎಂದರು.
ಯಡಿಯೂರಪ್ಪ ಲಿಂಗಾಯತರ ಹೆಸರಿನಲ್ಲಿ ಬಿಜೆಪಿಯನ್ನು ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ. ಶಾಮನೂರು ಶಿವಶಂಕರಪ್ಪ ಕಾಂಗ್ರೆಸ್ ಅನ್ನು ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ. ನಮ್ಮ ಆಕ್ಷೇಪ ಇರುವುದು ಕುಟುಂಬ ರಾಜಕಾರಣದ ಬಗ್ಗೆ ಮಾತ್ರ. ನರೇಂದ್ರ ಮೋದಿ ಸಹ ಕುಟುಂಬ ರಾಜಕಾರಣ ಒಪ್ಪುವುದಿಲ್ಲ ಎಂದರು.
ರೇಣುಕಾಚಾರ್ಯ ಅವರು ತಮ್ಮನ್ನು ನಾಯಿ ನರಿ ಎಂದಿದ್ದರ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾಯಿಗಳಿಗೆ ನಿಯತ್ತು ಇದೆ. ಆದರೆ ಹಂದಿಗಳಿಗೆ ನಿಯತ್ತು ಇಲ್ಲ. ಯಡಿಯೂರಪ್ಪ ಮತ್ತು ವಿಜಯೇಂದ್ರ ಪರ ರೇಣುಕಾಚಾರ್ಯ ಇಂದು ಮಾತನಾಡುತ್ತಿದ್ದಾರೆ. ಆದರೆ, ಅಂದು ಅವರನ್ನು ಅಧಿಕಾರದಿಂದ ಕೆಳಗೆ ಇಳಿಸಲು ಗೋವಾಗೆ ಹೋಗಿ ಸಂಚು ಮಾಡಿದ್ದು ಇದೇ ರೇಣುಕಾಚಾರ್ಯ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಯ್ಕೆ ವಿಚಾರಕ್ಕೆ ಹೈಕಮಾಂಡ್ ಯಥಾಸ್ಥಿತಿ ಕಾಪಾಡಲು ತೀರ್ಮಾನಿಸಿದೆ. ಇದು ನಮ್ಮ ಶ್ರಮದ ಫಲ ಅಲ್ಲವೇ? ನಮ್ಮಲ್ಲಿ ಜನಪರ ವಿಚಾರಗಳಲ್ಲಿ ಭಿನ್ನಮತ ಇಲ್ಲ. ಕುಟುಂಬ ರಾಜಕಾರಣ, ಭ್ರಷ್ಟಾಚಾರದ ಕುಟುಂಬವನ್ನು ದೂರ ಇಡುವುದಷ್ಟೇ ನಮ್ಮ ಭಿನ್ನಮತಕ್ಕೆ ಕಾರಣ. ಕೆಪಿಎಸ್ಸಿ ವಿಚಾರದಲ್ಲಿ ನಾವು ಒಟ್ಟಾಗಿ ಹೋರಾಟ ಮಾಡುತ್ತಿದ್ದೇವೆ ಎಂದರು.
BJP leader Basanagaouda Patil Yatnal claimed that Yediyurappa did not belong to the Lingayat community, but to the Balegara Shettaru community, a minuscule OBC community in the state.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm