ಬ್ರೇಕಿಂಗ್ ನ್ಯೂಸ್
05-03-25 01:58 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.5 : ಮಾಜಿ ಸಿಎಂ ಯಡಿಯೂರಪ್ಪ ಲಿಂಗಾಯತರೇ ಅಲ್ಲ. ಅವರು ಬಳೆಗಾರ ಶೆಟ್ಟರು. ಅವರ ಹುಟ್ಟೂರಾದ ಮಂಡ್ಯದ ಬೂಕನಕೆರೆಗೆ ಹೋಗಿ ಕೇಳಿದರೆ, ನಿಜ ಗೊತ್ತಾಗುತ್ತದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಮತ್ತೆ ಕಾಲು ಕೆರೆದಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ವೀರೇಂದ್ರ ಪಾಟೀಲ, ಜೆ.ಎಚ್.ಪಟೇಲ್ ನಂತರ ಸಮುದಾಯದಲ್ಲಿ ಯಾರೂ ನಾಯಕರು ಇರಲಿಲ್ಲ. ಜನರು ಅನಿವಾರ್ಯವಾಗಿ ಯಡಿಯೂರಪ್ಪ ಅವರನ್ನು ಒಪ್ಪಿದ್ದರು. ಆದರೆ ಅವರು ವೀರಶೈವರು ಮತ್ತು ಪಂಚಮಸಾಲಿಗಳಿಗೆ ಮೀಸಲಾತಿ ನೀಡದೆ, ಮೋಸ ಮಾಡಿದರು ಎಂದರು.
ಯಡಿಯೂರಪ್ಪ ಲಿಂಗಾಯತರ ಹೆಸರಿನಲ್ಲಿ ಬಿಜೆಪಿಯನ್ನು ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ. ಶಾಮನೂರು ಶಿವಶಂಕರಪ್ಪ ಕಾಂಗ್ರೆಸ್ ಅನ್ನು ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ. ನಮ್ಮ ಆಕ್ಷೇಪ ಇರುವುದು ಕುಟುಂಬ ರಾಜಕಾರಣದ ಬಗ್ಗೆ ಮಾತ್ರ. ನರೇಂದ್ರ ಮೋದಿ ಸಹ ಕುಟುಂಬ ರಾಜಕಾರಣ ಒಪ್ಪುವುದಿಲ್ಲ ಎಂದರು.
ರೇಣುಕಾಚಾರ್ಯ ಅವರು ತಮ್ಮನ್ನು ನಾಯಿ ನರಿ ಎಂದಿದ್ದರ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾಯಿಗಳಿಗೆ ನಿಯತ್ತು ಇದೆ. ಆದರೆ ಹಂದಿಗಳಿಗೆ ನಿಯತ್ತು ಇಲ್ಲ. ಯಡಿಯೂರಪ್ಪ ಮತ್ತು ವಿಜಯೇಂದ್ರ ಪರ ರೇಣುಕಾಚಾರ್ಯ ಇಂದು ಮಾತನಾಡುತ್ತಿದ್ದಾರೆ. ಆದರೆ, ಅಂದು ಅವರನ್ನು ಅಧಿಕಾರದಿಂದ ಕೆಳಗೆ ಇಳಿಸಲು ಗೋವಾಗೆ ಹೋಗಿ ಸಂಚು ಮಾಡಿದ್ದು ಇದೇ ರೇಣುಕಾಚಾರ್ಯ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಯ್ಕೆ ವಿಚಾರಕ್ಕೆ ಹೈಕಮಾಂಡ್ ಯಥಾಸ್ಥಿತಿ ಕಾಪಾಡಲು ತೀರ್ಮಾನಿಸಿದೆ. ಇದು ನಮ್ಮ ಶ್ರಮದ ಫಲ ಅಲ್ಲವೇ? ನಮ್ಮಲ್ಲಿ ಜನಪರ ವಿಚಾರಗಳಲ್ಲಿ ಭಿನ್ನಮತ ಇಲ್ಲ. ಕುಟುಂಬ ರಾಜಕಾರಣ, ಭ್ರಷ್ಟಾಚಾರದ ಕುಟುಂಬವನ್ನು ದೂರ ಇಡುವುದಷ್ಟೇ ನಮ್ಮ ಭಿನ್ನಮತಕ್ಕೆ ಕಾರಣ. ಕೆಪಿಎಸ್ಸಿ ವಿಚಾರದಲ್ಲಿ ನಾವು ಒಟ್ಟಾಗಿ ಹೋರಾಟ ಮಾಡುತ್ತಿದ್ದೇವೆ ಎಂದರು.
BJP leader Basanagaouda Patil Yatnal claimed that Yediyurappa did not belong to the Lingayat community, but to the Balegara Shettaru community, a minuscule OBC community in the state.
05-03-25 01:58 pm
Bangalore Correspondent
BJP MLAs Assembly adjourned: ಸದನ ಕಲಾಪ ನೇರ ಪ್ರ...
05-03-25 01:47 pm
DK Shivakumar, Mangalore Night life, Cabinet:...
04-03-25 07:20 pm
Kasaragod, Manjeshwar Accident: ಮಂಜೇಶ್ವರ ; ಹೆ...
04-03-25 01:37 pm
Bird Flu, Eggs: ಹಕ್ಕಿಜ್ವರ ಪೀಡಿತ ಕೋಳಿ, ಮೊಟ್ಟೆ...
04-03-25 12:14 pm
05-03-25 05:38 pm
HK News Desk
14ನೇ ಮಗುವಿಗೆ ತಂದೆಯಾದ ಉದ್ಯಮಿ ಎಲಾನ್ ಮಸ್ಕ್ ! ನಾಲ...
01-03-25 10:39 pm
Trump Vs Zelenskyy, Talk fight: ಶ್ವೇತ ಭವನದಲ್ಲ...
01-03-25 05:35 pm
Pope Francis: ಪೋಪ್ ಫ್ರಾನ್ಸಿಸ್ ಆರೋಗ್ಯ ಸ್ಥಿತಿ ಗ...
01-03-25 01:20 pm
ಟ್ರಂಪ್ ಸುಂಕ ಬರೆಗೆ ನಲುಗಿದ ಷೇರುಪೇಟೆ ; NIFTY ಇತಿ...
28-02-25 08:11 pm
05-03-25 10:58 pm
Mangalore Correspondent
Diganth Missing case, Assembly: ಸದನದಲ್ಲಿ ಪ್ರತ...
05-03-25 09:30 pm
Mangalore Jail, Food Poisoning: ಮಂಗಳೂರಿನ ಜೈಲಿ...
05-03-25 07:44 pm
Mangalore Director Vijay Kumar Kodialbail, Sh...
05-03-25 03:05 pm
Vitla blast, Mangalore, SP: ವಿಟ್ಲ ಬಳಿಯ ಕಲ್ಲಿನ...
04-03-25 10:58 pm
05-03-25 10:24 am
HK News Desk
ಆನ್ಲೈನ್ ಗೇಮ್ ಚಟ ; ಆಡದಂತೆ ವಿರೋಧಿಸಿದ್ದಕ್ಕೆ ತಂದ...
04-03-25 03:12 pm
ಹರ್ಯಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತೆ ಕೊಲೆಗೈದು ಸೂಟ...
03-03-25 01:51 pm
Bangalore Falcon Ponzi scheme, Fraud: ಇನ್ ವಾಯ...
02-03-25 06:37 pm
Bangalore KR Puram Police, Bike Robbery, Crim...
01-03-25 05:54 pm