ಬ್ರೇಕಿಂಗ್ ನ್ಯೂಸ್
07-03-25 07:54 pm HK News Desk ಕರ್ನಾಟಕ
ಗಂಗಾವತಿ, ಮಾ 07: ಅನಾರೋಗ್ಯ ಪೀಡಿತ ಮಗುವಿಗೆ ಅಗರಬತ್ತಿಯಿಂದ ಸುಟ್ಟರೆ, ಕಾಯಿಲೆ ವಾಸಿಯಾಗುತ್ತದೆ ಎಂಬ ನಂಬಿಕೆಯಿಂದ ತಾಯಿಯೊಬ್ಬಳು ಮಾಡಿದ ಕೈ ಚಿಕಿತ್ಸೆಯ ಪರಿಣಾಮ ಮಗು ಮೃತಪಟ್ಟಿರುವ ವರದಿಯಾಗಿದೆ. ಮಗು ಮೃತಪಟ್ಟಿರುವ ಹಿನ್ನೆಲೆ ಇದೀಗ ತಾಯಿಯ ಮೇಲೆ ಕೇಸ್ ದಾಖಲಾಗಿದೆ.
ಕನಕಗಿರಿ ತಾಲೂಕಿನ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ. ಏಳು ತಿಂಗಳ ಮಗು ಮೃತಪಟ್ಟ ಹಿನ್ನೆಲೆಯಲ್ಲಿ ಆಕೆಯ ತಾಯಿಯ ವಿರುದ್ಧ ಇದೀಗ ಕನಕಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಗುವಿನ ಮರಣೋತ್ತರ ಶವ ಪರೀಕ್ಷೆ ನಡೆಸಿದ ವೇಳೆ, ಅಲ್ಲಿನ ವೈದ್ಯರು ಸುಟ್ಟಗಾಯಗಳಿಂದ ನಂಜಾಗಿ ಮಗು ಸಾವನ್ನಪ್ಪಿದೆ ಎಂಬುದನ್ನು ಕಂಡುಕೊಂಡಿದ್ದಾರೆ. ಈ ಬಗ್ಗೆ ಮರಣೋತ್ತರ ಪರೀಕ್ಷೆಯ ವರದಿಯನ್ನೂ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಪ್ರಶಾಂತ್ ಎಂಬುವವರು ನೀಡಿದ ದೂರಿನ ಮೆರೆಗೆ ಎಫ್ಐಆರ್ ದಾಖಲಾಗಿದೆ.
ಕಳೆದ ನವಂಬರ್ ಅಂದರೆ 2024ರಲ್ಲಿ ಗ್ರಾಮದ ಏಳು ತಿಂಗಳ ಮಗುವಿಗೆ ಅನಾರೋಗ್ಯ ಕಾಡಿತ್ತು. ಬೇರೆ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಕಾಯಿಲೆ ವಾಸಿಯಾಗಿರಲಿಲ್ಲ. ಹೀಗಾಗಿ ಮಗುವಿಗೆ ಅಗರಬತ್ತಿಯ ಬೆಂಕಿಯಿಂದ ಬಿಸಿ ಮಾಡಿದರೆ ವಾಸಿಯಾಗುತ್ತದೆ ಎಂದು ಯಾರೋ ಹೇಳಿದ್ದ ಮಾತನ್ನು ಆಲಿಸಿದ ತಾಯಿ, ಅದನ್ನು ಪ್ರಯೋಗ ಮಾಡಿದ್ದಾರೆ. ಹೀಗಾಗಿ ಮಗುವಿಗೆ ಸುಟ್ಟಗಾಯಗಳಿಂದ ನಂಜಾಗಿ ಸಾವನ್ನಪ್ಪಿದೆ ಎಂದು ಗೊತ್ತಾಗಿದೆ.
ಅಗರಬತ್ತಿಯಿಂದ ಸುಟ್ಟಿದ್ದಕ್ಕೆ ನಂಜಾಗಿ ಮಗು ಮೃತಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ. ಲಿಂಗರಾಜು ಮಕ್ಕಳ ರಕ್ಷಣಾ ಘಟಕದವರಿಗೆ ಮಾಹಿತಿ ನೀಡಿದ್ದರು. ಜಿಲ್ಲಾ ಮಟ್ಟದ ಶಿಶುಮರಣ ಪರಿಶೀಲನಾ ಸಭೆಯ ವೇಳೆ ಈ ವಿಷಯ ಗಮನಕ್ಕೆ ಬಂದ್ದು, ಇದೀಗ ತಾಯಿ ಮೇಲೆ ದೂರು ದಾಖಲಾಗಿದೆ.
Tragic Mistake Seven Month Old Baby Dies After Mother Accidentally Ignites Agarbatti, Case Filed in gangavathi in koppal
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am