ಬ್ರೇಕಿಂಗ್ ನ್ಯೂಸ್
07-03-25 07:54 pm HK News Desk ಕರ್ನಾಟಕ
ಗಂಗಾವತಿ, ಮಾ 07: ಅನಾರೋಗ್ಯ ಪೀಡಿತ ಮಗುವಿಗೆ ಅಗರಬತ್ತಿಯಿಂದ ಸುಟ್ಟರೆ, ಕಾಯಿಲೆ ವಾಸಿಯಾಗುತ್ತದೆ ಎಂಬ ನಂಬಿಕೆಯಿಂದ ತಾಯಿಯೊಬ್ಬಳು ಮಾಡಿದ ಕೈ ಚಿಕಿತ್ಸೆಯ ಪರಿಣಾಮ ಮಗು ಮೃತಪಟ್ಟಿರುವ ವರದಿಯಾಗಿದೆ. ಮಗು ಮೃತಪಟ್ಟಿರುವ ಹಿನ್ನೆಲೆ ಇದೀಗ ತಾಯಿಯ ಮೇಲೆ ಕೇಸ್ ದಾಖಲಾಗಿದೆ.
ಕನಕಗಿರಿ ತಾಲೂಕಿನ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ. ಏಳು ತಿಂಗಳ ಮಗು ಮೃತಪಟ್ಟ ಹಿನ್ನೆಲೆಯಲ್ಲಿ ಆಕೆಯ ತಾಯಿಯ ವಿರುದ್ಧ ಇದೀಗ ಕನಕಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಗುವಿನ ಮರಣೋತ್ತರ ಶವ ಪರೀಕ್ಷೆ ನಡೆಸಿದ ವೇಳೆ, ಅಲ್ಲಿನ ವೈದ್ಯರು ಸುಟ್ಟಗಾಯಗಳಿಂದ ನಂಜಾಗಿ ಮಗು ಸಾವನ್ನಪ್ಪಿದೆ ಎಂಬುದನ್ನು ಕಂಡುಕೊಂಡಿದ್ದಾರೆ. ಈ ಬಗ್ಗೆ ಮರಣೋತ್ತರ ಪರೀಕ್ಷೆಯ ವರದಿಯನ್ನೂ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಪ್ರಶಾಂತ್ ಎಂಬುವವರು ನೀಡಿದ ದೂರಿನ ಮೆರೆಗೆ ಎಫ್ಐಆರ್ ದಾಖಲಾಗಿದೆ.
ಕಳೆದ ನವಂಬರ್ ಅಂದರೆ 2024ರಲ್ಲಿ ಗ್ರಾಮದ ಏಳು ತಿಂಗಳ ಮಗುವಿಗೆ ಅನಾರೋಗ್ಯ ಕಾಡಿತ್ತು. ಬೇರೆ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಕಾಯಿಲೆ ವಾಸಿಯಾಗಿರಲಿಲ್ಲ. ಹೀಗಾಗಿ ಮಗುವಿಗೆ ಅಗರಬತ್ತಿಯ ಬೆಂಕಿಯಿಂದ ಬಿಸಿ ಮಾಡಿದರೆ ವಾಸಿಯಾಗುತ್ತದೆ ಎಂದು ಯಾರೋ ಹೇಳಿದ್ದ ಮಾತನ್ನು ಆಲಿಸಿದ ತಾಯಿ, ಅದನ್ನು ಪ್ರಯೋಗ ಮಾಡಿದ್ದಾರೆ. ಹೀಗಾಗಿ ಮಗುವಿಗೆ ಸುಟ್ಟಗಾಯಗಳಿಂದ ನಂಜಾಗಿ ಸಾವನ್ನಪ್ಪಿದೆ ಎಂದು ಗೊತ್ತಾಗಿದೆ.
ಅಗರಬತ್ತಿಯಿಂದ ಸುಟ್ಟಿದ್ದಕ್ಕೆ ನಂಜಾಗಿ ಮಗು ಮೃತಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ. ಲಿಂಗರಾಜು ಮಕ್ಕಳ ರಕ್ಷಣಾ ಘಟಕದವರಿಗೆ ಮಾಹಿತಿ ನೀಡಿದ್ದರು. ಜಿಲ್ಲಾ ಮಟ್ಟದ ಶಿಶುಮರಣ ಪರಿಶೀಲನಾ ಸಭೆಯ ವೇಳೆ ಈ ವಿಷಯ ಗಮನಕ್ಕೆ ಬಂದ್ದು, ಇದೀಗ ತಾಯಿ ಮೇಲೆ ದೂರು ದಾಖಲಾಗಿದೆ.
Tragic Mistake Seven Month Old Baby Dies After Mother Accidentally Ignites Agarbatti, Case Filed in gangavathi in koppal
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am