ಬ್ರೇಕಿಂಗ್ ನ್ಯೂಸ್
07-03-25 07:54 pm HK News Desk ಕರ್ನಾಟಕ
ಗಂಗಾವತಿ, ಮಾ 07: ಅನಾರೋಗ್ಯ ಪೀಡಿತ ಮಗುವಿಗೆ ಅಗರಬತ್ತಿಯಿಂದ ಸುಟ್ಟರೆ, ಕಾಯಿಲೆ ವಾಸಿಯಾಗುತ್ತದೆ ಎಂಬ ನಂಬಿಕೆಯಿಂದ ತಾಯಿಯೊಬ್ಬಳು ಮಾಡಿದ ಕೈ ಚಿಕಿತ್ಸೆಯ ಪರಿಣಾಮ ಮಗು ಮೃತಪಟ್ಟಿರುವ ವರದಿಯಾಗಿದೆ. ಮಗು ಮೃತಪಟ್ಟಿರುವ ಹಿನ್ನೆಲೆ ಇದೀಗ ತಾಯಿಯ ಮೇಲೆ ಕೇಸ್ ದಾಖಲಾಗಿದೆ.
ಕನಕಗಿರಿ ತಾಲೂಕಿನ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ. ಏಳು ತಿಂಗಳ ಮಗು ಮೃತಪಟ್ಟ ಹಿನ್ನೆಲೆಯಲ್ಲಿ ಆಕೆಯ ತಾಯಿಯ ವಿರುದ್ಧ ಇದೀಗ ಕನಕಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಗುವಿನ ಮರಣೋತ್ತರ ಶವ ಪರೀಕ್ಷೆ ನಡೆಸಿದ ವೇಳೆ, ಅಲ್ಲಿನ ವೈದ್ಯರು ಸುಟ್ಟಗಾಯಗಳಿಂದ ನಂಜಾಗಿ ಮಗು ಸಾವನ್ನಪ್ಪಿದೆ ಎಂಬುದನ್ನು ಕಂಡುಕೊಂಡಿದ್ದಾರೆ. ಈ ಬಗ್ಗೆ ಮರಣೋತ್ತರ ಪರೀಕ್ಷೆಯ ವರದಿಯನ್ನೂ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಪ್ರಶಾಂತ್ ಎಂಬುವವರು ನೀಡಿದ ದೂರಿನ ಮೆರೆಗೆ ಎಫ್ಐಆರ್ ದಾಖಲಾಗಿದೆ.
ಕಳೆದ ನವಂಬರ್ ಅಂದರೆ 2024ರಲ್ಲಿ ಗ್ರಾಮದ ಏಳು ತಿಂಗಳ ಮಗುವಿಗೆ ಅನಾರೋಗ್ಯ ಕಾಡಿತ್ತು. ಬೇರೆ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಕಾಯಿಲೆ ವಾಸಿಯಾಗಿರಲಿಲ್ಲ. ಹೀಗಾಗಿ ಮಗುವಿಗೆ ಅಗರಬತ್ತಿಯ ಬೆಂಕಿಯಿಂದ ಬಿಸಿ ಮಾಡಿದರೆ ವಾಸಿಯಾಗುತ್ತದೆ ಎಂದು ಯಾರೋ ಹೇಳಿದ್ದ ಮಾತನ್ನು ಆಲಿಸಿದ ತಾಯಿ, ಅದನ್ನು ಪ್ರಯೋಗ ಮಾಡಿದ್ದಾರೆ. ಹೀಗಾಗಿ ಮಗುವಿಗೆ ಸುಟ್ಟಗಾಯಗಳಿಂದ ನಂಜಾಗಿ ಸಾವನ್ನಪ್ಪಿದೆ ಎಂದು ಗೊತ್ತಾಗಿದೆ.
ಅಗರಬತ್ತಿಯಿಂದ ಸುಟ್ಟಿದ್ದಕ್ಕೆ ನಂಜಾಗಿ ಮಗು ಮೃತಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ. ಲಿಂಗರಾಜು ಮಕ್ಕಳ ರಕ್ಷಣಾ ಘಟಕದವರಿಗೆ ಮಾಹಿತಿ ನೀಡಿದ್ದರು. ಜಿಲ್ಲಾ ಮಟ್ಟದ ಶಿಶುಮರಣ ಪರಿಶೀಲನಾ ಸಭೆಯ ವೇಳೆ ಈ ವಿಷಯ ಗಮನಕ್ಕೆ ಬಂದ್ದು, ಇದೀಗ ತಾಯಿ ಮೇಲೆ ದೂರು ದಾಖಲಾಗಿದೆ.
Tragic Mistake Seven Month Old Baby Dies After Mother Accidentally Ignites Agarbatti, Case Filed in gangavathi in koppal
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
15-02-26 04:01 pm
HK Desk
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
15-02-26 08:52 pm
Mangalore Correspondent
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am