ಬ್ರೇಕಿಂಗ್ ನ್ಯೂಸ್
07-03-25 07:54 pm HK News Desk ಕರ್ನಾಟಕ
ಗಂಗಾವತಿ, ಮಾ 07: ಅನಾರೋಗ್ಯ ಪೀಡಿತ ಮಗುವಿಗೆ ಅಗರಬತ್ತಿಯಿಂದ ಸುಟ್ಟರೆ, ಕಾಯಿಲೆ ವಾಸಿಯಾಗುತ್ತದೆ ಎಂಬ ನಂಬಿಕೆಯಿಂದ ತಾಯಿಯೊಬ್ಬಳು ಮಾಡಿದ ಕೈ ಚಿಕಿತ್ಸೆಯ ಪರಿಣಾಮ ಮಗು ಮೃತಪಟ್ಟಿರುವ ವರದಿಯಾಗಿದೆ. ಮಗು ಮೃತಪಟ್ಟಿರುವ ಹಿನ್ನೆಲೆ ಇದೀಗ ತಾಯಿಯ ಮೇಲೆ ಕೇಸ್ ದಾಖಲಾಗಿದೆ.
ಕನಕಗಿರಿ ತಾಲೂಕಿನ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ. ಏಳು ತಿಂಗಳ ಮಗು ಮೃತಪಟ್ಟ ಹಿನ್ನೆಲೆಯಲ್ಲಿ ಆಕೆಯ ತಾಯಿಯ ವಿರುದ್ಧ ಇದೀಗ ಕನಕಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಗುವಿನ ಮರಣೋತ್ತರ ಶವ ಪರೀಕ್ಷೆ ನಡೆಸಿದ ವೇಳೆ, ಅಲ್ಲಿನ ವೈದ್ಯರು ಸುಟ್ಟಗಾಯಗಳಿಂದ ನಂಜಾಗಿ ಮಗು ಸಾವನ್ನಪ್ಪಿದೆ ಎಂಬುದನ್ನು ಕಂಡುಕೊಂಡಿದ್ದಾರೆ. ಈ ಬಗ್ಗೆ ಮರಣೋತ್ತರ ಪರೀಕ್ಷೆಯ ವರದಿಯನ್ನೂ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಪ್ರಶಾಂತ್ ಎಂಬುವವರು ನೀಡಿದ ದೂರಿನ ಮೆರೆಗೆ ಎಫ್ಐಆರ್ ದಾಖಲಾಗಿದೆ.
ಕಳೆದ ನವಂಬರ್ ಅಂದರೆ 2024ರಲ್ಲಿ ಗ್ರಾಮದ ಏಳು ತಿಂಗಳ ಮಗುವಿಗೆ ಅನಾರೋಗ್ಯ ಕಾಡಿತ್ತು. ಬೇರೆ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಕಾಯಿಲೆ ವಾಸಿಯಾಗಿರಲಿಲ್ಲ. ಹೀಗಾಗಿ ಮಗುವಿಗೆ ಅಗರಬತ್ತಿಯ ಬೆಂಕಿಯಿಂದ ಬಿಸಿ ಮಾಡಿದರೆ ವಾಸಿಯಾಗುತ್ತದೆ ಎಂದು ಯಾರೋ ಹೇಳಿದ್ದ ಮಾತನ್ನು ಆಲಿಸಿದ ತಾಯಿ, ಅದನ್ನು ಪ್ರಯೋಗ ಮಾಡಿದ್ದಾರೆ. ಹೀಗಾಗಿ ಮಗುವಿಗೆ ಸುಟ್ಟಗಾಯಗಳಿಂದ ನಂಜಾಗಿ ಸಾವನ್ನಪ್ಪಿದೆ ಎಂದು ಗೊತ್ತಾಗಿದೆ.
ಅಗರಬತ್ತಿಯಿಂದ ಸುಟ್ಟಿದ್ದಕ್ಕೆ ನಂಜಾಗಿ ಮಗು ಮೃತಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ. ಲಿಂಗರಾಜು ಮಕ್ಕಳ ರಕ್ಷಣಾ ಘಟಕದವರಿಗೆ ಮಾಹಿತಿ ನೀಡಿದ್ದರು. ಜಿಲ್ಲಾ ಮಟ್ಟದ ಶಿಶುಮರಣ ಪರಿಶೀಲನಾ ಸಭೆಯ ವೇಳೆ ಈ ವಿಷಯ ಗಮನಕ್ಕೆ ಬಂದ್ದು, ಇದೀಗ ತಾಯಿ ಮೇಲೆ ದೂರು ದಾಖಲಾಗಿದೆ.
Tragic Mistake Seven Month Old Baby Dies After Mother Accidentally Ignites Agarbatti, Case Filed in gangavathi in koppal
28-10-25 07:18 pm
Bangalore Correspondent
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm