ಬ್ರೇಕಿಂಗ್ ನ್ಯೂಸ್
07-03-25 07:54 pm HK News Desk ಕರ್ನಾಟಕ
ಗಂಗಾವತಿ, ಮಾ 07: ಅನಾರೋಗ್ಯ ಪೀಡಿತ ಮಗುವಿಗೆ ಅಗರಬತ್ತಿಯಿಂದ ಸುಟ್ಟರೆ, ಕಾಯಿಲೆ ವಾಸಿಯಾಗುತ್ತದೆ ಎಂಬ ನಂಬಿಕೆಯಿಂದ ತಾಯಿಯೊಬ್ಬಳು ಮಾಡಿದ ಕೈ ಚಿಕಿತ್ಸೆಯ ಪರಿಣಾಮ ಮಗು ಮೃತಪಟ್ಟಿರುವ ವರದಿಯಾಗಿದೆ. ಮಗು ಮೃತಪಟ್ಟಿರುವ ಹಿನ್ನೆಲೆ ಇದೀಗ ತಾಯಿಯ ಮೇಲೆ ಕೇಸ್ ದಾಖಲಾಗಿದೆ.
ಕನಕಗಿರಿ ತಾಲೂಕಿನ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ. ಏಳು ತಿಂಗಳ ಮಗು ಮೃತಪಟ್ಟ ಹಿನ್ನೆಲೆಯಲ್ಲಿ ಆಕೆಯ ತಾಯಿಯ ವಿರುದ್ಧ ಇದೀಗ ಕನಕಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಗುವಿನ ಮರಣೋತ್ತರ ಶವ ಪರೀಕ್ಷೆ ನಡೆಸಿದ ವೇಳೆ, ಅಲ್ಲಿನ ವೈದ್ಯರು ಸುಟ್ಟಗಾಯಗಳಿಂದ ನಂಜಾಗಿ ಮಗು ಸಾವನ್ನಪ್ಪಿದೆ ಎಂಬುದನ್ನು ಕಂಡುಕೊಂಡಿದ್ದಾರೆ. ಈ ಬಗ್ಗೆ ಮರಣೋತ್ತರ ಪರೀಕ್ಷೆಯ ವರದಿಯನ್ನೂ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಪ್ರಶಾಂತ್ ಎಂಬುವವರು ನೀಡಿದ ದೂರಿನ ಮೆರೆಗೆ ಎಫ್ಐಆರ್ ದಾಖಲಾಗಿದೆ.
ಕಳೆದ ನವಂಬರ್ ಅಂದರೆ 2024ರಲ್ಲಿ ಗ್ರಾಮದ ಏಳು ತಿಂಗಳ ಮಗುವಿಗೆ ಅನಾರೋಗ್ಯ ಕಾಡಿತ್ತು. ಬೇರೆ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಕಾಯಿಲೆ ವಾಸಿಯಾಗಿರಲಿಲ್ಲ. ಹೀಗಾಗಿ ಮಗುವಿಗೆ ಅಗರಬತ್ತಿಯ ಬೆಂಕಿಯಿಂದ ಬಿಸಿ ಮಾಡಿದರೆ ವಾಸಿಯಾಗುತ್ತದೆ ಎಂದು ಯಾರೋ ಹೇಳಿದ್ದ ಮಾತನ್ನು ಆಲಿಸಿದ ತಾಯಿ, ಅದನ್ನು ಪ್ರಯೋಗ ಮಾಡಿದ್ದಾರೆ. ಹೀಗಾಗಿ ಮಗುವಿಗೆ ಸುಟ್ಟಗಾಯಗಳಿಂದ ನಂಜಾಗಿ ಸಾವನ್ನಪ್ಪಿದೆ ಎಂದು ಗೊತ್ತಾಗಿದೆ.
ಅಗರಬತ್ತಿಯಿಂದ ಸುಟ್ಟಿದ್ದಕ್ಕೆ ನಂಜಾಗಿ ಮಗು ಮೃತಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ. ಲಿಂಗರಾಜು ಮಕ್ಕಳ ರಕ್ಷಣಾ ಘಟಕದವರಿಗೆ ಮಾಹಿತಿ ನೀಡಿದ್ದರು. ಜಿಲ್ಲಾ ಮಟ್ಟದ ಶಿಶುಮರಣ ಪರಿಶೀಲನಾ ಸಭೆಯ ವೇಳೆ ಈ ವಿಷಯ ಗಮನಕ್ಕೆ ಬಂದ್ದು, ಇದೀಗ ತಾಯಿ ಮೇಲೆ ದೂರು ದಾಖಲಾಗಿದೆ.
Tragic Mistake Seven Month Old Baby Dies After Mother Accidentally Ignites Agarbatti, Case Filed in gangavathi in koppal
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm