ಬ್ರೇಕಿಂಗ್ ನ್ಯೂಸ್
09-03-25 04:54 pm Headline Karnataka Staff ಕರ್ನಾಟಕ
ಚಿತ್ರದುರ್ಗ, ಮಾ 09: ರಸ್ತೆ ಬದಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಇನ್ನೋವಾ ಕಾರೊಂದು ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಐವರು ಮೃತಪಟ್ಟ ಘಟನೆ ಚಿತ್ರದುರ್ಗ ತಾಲೂಕಿನ ತಮಟಕಲ್ಲು ಗ್ರಾಮದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು ಸಂಭವಿಸಿದೆ.
ಮೃತರೆಲ್ಲರೂ ಬೆಂಗಳೂರು ನಗರ ಮೂಲದವರಾಗಿದ್ದಾರೆ. ಘಟನೆಯಲ್ಲಿ ರುದ್ರಸ್ವಾಮಿ (60), ಮಲ್ಲಿಕಾರ್ಜುನ (50), ಶಾಂತಮೂರ್ತಿ (55) ಹಾಗೂ ಚಿದಂಬರಾಚಾರ್ (52) ಹಾಗೂ ಮತ್ತೋರ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ದು, ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಘಟನಾ ಸ್ಥಳಕ್ಕೆ ಎಸ್ಪಿ ರಂಜಿತ್ ಕುಮಾರ್ ಬಂಡಾರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ''ಮೃತರೆಲ್ಲರೂ ಬೆಂಗಳೂರು ಮೂಲದವರಾಗಿದ್ದು, ಬೆಳಗಾವಿಯಿಂದ ಬೆಂಗಳೂರಿಗೆ ತೆರಳುವ ಮಾರ್ಗ ಮಧ್ಯೆ ಘಟನೆ ಸಂಭವಿಸಿದೆ. ಘಟನೆಗೆ ಮೂಲ ಕಾರಣ ಏನೆಂದು ಪರಿಶೀಲಿಸಿದಾಗ, ಇನ್ನೋವಾ ಕಾರು ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ'' ಎಂದು ಮಾಹಿತಿ ನೀಡಿದರು
''ಮೃತರೆಲ್ಲರೂ ಬೆಳಗಾವಿಯ ಸವದತ್ತಿ ದೇವಸ್ಥಾನಕ್ಕೆ ಹೋಗಿದ್ದರು ಎಂಬ ಮಾಹಿತಿ ಸಿಕ್ಕಿದೆ. ಅವರು ಸಂಚರಿಸುತ್ತಿದ್ದ ಕಾರಿನಲ್ಲಿ ಸವದತ್ತಿ ಯಲ್ಲಮ್ಮ ದೇವಾಲಯದ ಪ್ರಸಾದ ಕಂಡುಬಂದಿದೆ. ಹೀಗಾಗಿ, ದೇವಸ್ಥಾನಕ್ಕೆ ಹೋಗಿರುವ ಸಾಧ್ಯತೆ ಇದೆ. ಘಟನೆ ಬಗ್ಗೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ'' ಎಂದು ಎಸ್ಪಿ ತಿಳಿಸಿದರು.
Five people were killed in a head-on collision between a car and a truck on the outskirts of the district headquarter town of Chitradurga on Sunday.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am