ಬ್ರೇಕಿಂಗ್ ನ್ಯೂಸ್
09-03-25 09:51 pm HK News Desk ಕರ್ನಾಟಕ
ಚಿತ್ರದುರ್ಗ, ಮಾ.9 : ಜಗತ್ತು ಹಲವು ರೀತಿಯ ವಿಸ್ಮಯಗಳಿಗೆ ಸಾಕ್ಷಿಯಾಗಿದ್ದಿದೆ. ಪ್ರತಿ ಬಾರಿಯೂ ಜನರೂ ಅಷ್ಟೇ ಅಚ್ಚರಿ ಪಟ್ಟುಕೊಂಡದ್ದೂ ಇದೆ. ಕರು ಹಾಕಿದ ಕೂಡಲೇ ಹಸು ಹಾಲು ನೀಡುವುದನ್ನು ನಾವೆಲ್ಲ ನೋಡಿದ್ದೇವೆ. ಆದರೆ, ಇಲ್ಲೊಂದು ಕರು ಜನಿಸಿದ ಮೂರೇ ದಿನದಲ್ಲಿ ತನ್ನ ಕೆಚ್ಚಲಿನಿಂದ ಹಾಲು ಇಳಿಸಿದೆ. ಹಾಲು ಕುಡಿಯುವುದಕ್ಕೇ ಪರದಾಡಬೇಕಾದ ಹೊತ್ತಿನಲ್ಲಿ ರೈತ ಹಾಲು ಕರೆಯುವಾಗ ಸ್ವತಃ ಹಾಲು ಇಳಿಸಿ ಜನರನ್ನು ಅಚ್ಚರಿಗೊಳಿಸಿದೆ.
ಹೀಗಾಗಿ, ಇದೇನೋ ಪವಾಡ ಘಟಿಸಿದೆ ಎಂದು ಸ್ಥಳೀಯರು ಕರುವಿಗೆ ಶ್ರದ್ಧಾ ಭಕ್ತಿಯಿಂದ ಪೂಜೆ ಮಾಡಿದ್ದಾರೆ. ಇದೇ ವೇಳೆ, ಈ ವಿಶಿಷ್ಟ ಕರುವನ್ನು ನೋಡಲು ಜನ ಮುಗಿಬೀಳುತ್ತಿದ್ದಾರೆ. ಚಿತ್ರದುರ್ಗ ತಾಲೂಕಿನ ಅನ್ನೇಹಾಳ ಗ್ರಾಮದಲ್ಲಿ ಇಂಥದ್ದೊಂದು ಪವಾಡ ನಡೆದಿದ್ದು ಅಚ್ಚರಿ ಸೃಷ್ಟಿಸಿದೆ. ಅನ್ನೇಹಾಳ ಗ್ರಾಮದ ನಿರಂಜನ ಮೂರ್ತಿ ಎಂಬವರ ಮನೆಯಲ್ಲಿ ಡೈರಿ ಹಸು ಮರಿ ಹಾಕಿದ್ದು ಆ ಕರು ಜನಿಸಿದ ಮೂರೇ ದಿನಕ್ಕೆ ಹಾಲು ಕೊಡಲು ಪ್ರಾರಂಭಿಸಿದೆ. ಕರುವಿನ ಕೆಚ್ಚಲಿನಿಂದ ಹಾಲು ಸುರಿಯುತ್ತಿದ್ದುದನ್ನ ಕಂಡ ನಿರಂಜನ ಮೂರ್ತಿ ಕುಟುಂಬಸ್ಥರು ಅಚ್ಚರಿಗೊಂಡಿದ್ದಾರೆ. ತಾಯಿ ಹಸುವಿನ ಹಾಲು ಕುಡಿದು ಸುತ್ತಾಡಿಕೊಂಡಿರಬೇಕಾದ ಕರು 31 ದಿನಗಳಿಂದ ಸ್ವತಃ ಹಾಲು ಕೊಡ್ತಿರೋದು ಅಚ್ಚರಿಗೆ ಕಾರಣವಾಗಿದೆ.




ನಿರಂಜನ ಮೂರ್ತಿ 6 ತಿಂಗಳ ಹಿಂದೆ ಹಸು ಖರೀದಿಸಿದ್ದರು. ಈಗಾಗಲೇ ಆ ಹಸು ಮೂರು ಹೆಣ್ಣು ಕರುಗಳಿಗೆ ಜನ್ಮ ನೀಡಿದೆ. ಆದ್ರೆ ಆ ಎರಡೂ ಹೆಣ್ಣು ಕರುಗಳು ಸಹಜವಾಗಿದ್ದವು. ಆದ್ರೆ ಈ ಮೂರನೇಯದ್ದು ಮಾತ್ರ ಕಾಮಧೇನುವಿನಂತೆ ಹುಟ್ಟಿದ ಮೂರೇ ದಿನಕ್ಕೆ ಹಾಲು ನೀಡುತ್ತಿದೆ. ದಿನಕ್ಕೆ ಅರ್ಧ ಲೀಟರ್ಗೂ ಹೆಚ್ಚು ಹಾಲು ಕರೆಯುವ ಕರುವನ್ನು ಗ್ರಾಮಸ್ಥರು ಕಾಮಧೇನು ಅಂತ ಪೂಜೆ ಮಾಡುತ್ತಿದ್ದಾರೆ.
ಹಸು ಗರ್ಭ ಧರಿಸಿ ಕರು ಹಾಕಿದರೆ ಮಾತ್ರ ಹಾಲು ನೀಡುತ್ತವೆ. ಅದರಲ್ಲೂ ಕರುವನ್ನೇ ಮೊದಲು ಜಗಿಯುವಂತೆ ಮಾಡಿ ಕೆಚ್ಚಲಿನಲ್ಲಿ ಹಾಲು ಇಳಿಸಬೇಕಾದ ಪದ್ಧತಿ ಇದೆ. ಈಗೆಲ್ಲ ಹೈಬ್ರೀಡ್ ದನಗಳು ಬಂದಿದ್ದು ಹಾಲಿನ ಉದ್ದೇಶಕ್ಕಾಗಿಯೇ ಸಾಕುತ್ತಾರೆ. ಆದರೆ, ಇದ್ಯಾವುದೂ ಇಲ್ಲದೆ ಕರುವೊಂದು ಹಾಲು ಕೊಡುವುದು ಜಗದ ಸೋಜಿಗಕ್ಕೆ ಸಾಕ್ಷಿಯಾಗಿದೆ.
A calf has begun producing milk just three days after its birth, captivating the hearts and minds of residents in Chitradurga. The miraculous occurrence has drawn crowds of curious locals eager to witness this extraordinary phenomenon.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am