ಬ್ರೇಕಿಂಗ್ ನ್ಯೂಸ್
09-03-25 09:51 pm HK News Desk ಕರ್ನಾಟಕ
ಚಿತ್ರದುರ್ಗ, ಮಾ.9 : ಜಗತ್ತು ಹಲವು ರೀತಿಯ ವಿಸ್ಮಯಗಳಿಗೆ ಸಾಕ್ಷಿಯಾಗಿದ್ದಿದೆ. ಪ್ರತಿ ಬಾರಿಯೂ ಜನರೂ ಅಷ್ಟೇ ಅಚ್ಚರಿ ಪಟ್ಟುಕೊಂಡದ್ದೂ ಇದೆ. ಕರು ಹಾಕಿದ ಕೂಡಲೇ ಹಸು ಹಾಲು ನೀಡುವುದನ್ನು ನಾವೆಲ್ಲ ನೋಡಿದ್ದೇವೆ. ಆದರೆ, ಇಲ್ಲೊಂದು ಕರು ಜನಿಸಿದ ಮೂರೇ ದಿನದಲ್ಲಿ ತನ್ನ ಕೆಚ್ಚಲಿನಿಂದ ಹಾಲು ಇಳಿಸಿದೆ. ಹಾಲು ಕುಡಿಯುವುದಕ್ಕೇ ಪರದಾಡಬೇಕಾದ ಹೊತ್ತಿನಲ್ಲಿ ರೈತ ಹಾಲು ಕರೆಯುವಾಗ ಸ್ವತಃ ಹಾಲು ಇಳಿಸಿ ಜನರನ್ನು ಅಚ್ಚರಿಗೊಳಿಸಿದೆ.
ಹೀಗಾಗಿ, ಇದೇನೋ ಪವಾಡ ಘಟಿಸಿದೆ ಎಂದು ಸ್ಥಳೀಯರು ಕರುವಿಗೆ ಶ್ರದ್ಧಾ ಭಕ್ತಿಯಿಂದ ಪೂಜೆ ಮಾಡಿದ್ದಾರೆ. ಇದೇ ವೇಳೆ, ಈ ವಿಶಿಷ್ಟ ಕರುವನ್ನು ನೋಡಲು ಜನ ಮುಗಿಬೀಳುತ್ತಿದ್ದಾರೆ. ಚಿತ್ರದುರ್ಗ ತಾಲೂಕಿನ ಅನ್ನೇಹಾಳ ಗ್ರಾಮದಲ್ಲಿ ಇಂಥದ್ದೊಂದು ಪವಾಡ ನಡೆದಿದ್ದು ಅಚ್ಚರಿ ಸೃಷ್ಟಿಸಿದೆ. ಅನ್ನೇಹಾಳ ಗ್ರಾಮದ ನಿರಂಜನ ಮೂರ್ತಿ ಎಂಬವರ ಮನೆಯಲ್ಲಿ ಡೈರಿ ಹಸು ಮರಿ ಹಾಕಿದ್ದು ಆ ಕರು ಜನಿಸಿದ ಮೂರೇ ದಿನಕ್ಕೆ ಹಾಲು ಕೊಡಲು ಪ್ರಾರಂಭಿಸಿದೆ. ಕರುವಿನ ಕೆಚ್ಚಲಿನಿಂದ ಹಾಲು ಸುರಿಯುತ್ತಿದ್ದುದನ್ನ ಕಂಡ ನಿರಂಜನ ಮೂರ್ತಿ ಕುಟುಂಬಸ್ಥರು ಅಚ್ಚರಿಗೊಂಡಿದ್ದಾರೆ. ತಾಯಿ ಹಸುವಿನ ಹಾಲು ಕುಡಿದು ಸುತ್ತಾಡಿಕೊಂಡಿರಬೇಕಾದ ಕರು 31 ದಿನಗಳಿಂದ ಸ್ವತಃ ಹಾಲು ಕೊಡ್ತಿರೋದು ಅಚ್ಚರಿಗೆ ಕಾರಣವಾಗಿದೆ.




ನಿರಂಜನ ಮೂರ್ತಿ 6 ತಿಂಗಳ ಹಿಂದೆ ಹಸು ಖರೀದಿಸಿದ್ದರು. ಈಗಾಗಲೇ ಆ ಹಸು ಮೂರು ಹೆಣ್ಣು ಕರುಗಳಿಗೆ ಜನ್ಮ ನೀಡಿದೆ. ಆದ್ರೆ ಆ ಎರಡೂ ಹೆಣ್ಣು ಕರುಗಳು ಸಹಜವಾಗಿದ್ದವು. ಆದ್ರೆ ಈ ಮೂರನೇಯದ್ದು ಮಾತ್ರ ಕಾಮಧೇನುವಿನಂತೆ ಹುಟ್ಟಿದ ಮೂರೇ ದಿನಕ್ಕೆ ಹಾಲು ನೀಡುತ್ತಿದೆ. ದಿನಕ್ಕೆ ಅರ್ಧ ಲೀಟರ್ಗೂ ಹೆಚ್ಚು ಹಾಲು ಕರೆಯುವ ಕರುವನ್ನು ಗ್ರಾಮಸ್ಥರು ಕಾಮಧೇನು ಅಂತ ಪೂಜೆ ಮಾಡುತ್ತಿದ್ದಾರೆ.
ಹಸು ಗರ್ಭ ಧರಿಸಿ ಕರು ಹಾಕಿದರೆ ಮಾತ್ರ ಹಾಲು ನೀಡುತ್ತವೆ. ಅದರಲ್ಲೂ ಕರುವನ್ನೇ ಮೊದಲು ಜಗಿಯುವಂತೆ ಮಾಡಿ ಕೆಚ್ಚಲಿನಲ್ಲಿ ಹಾಲು ಇಳಿಸಬೇಕಾದ ಪದ್ಧತಿ ಇದೆ. ಈಗೆಲ್ಲ ಹೈಬ್ರೀಡ್ ದನಗಳು ಬಂದಿದ್ದು ಹಾಲಿನ ಉದ್ದೇಶಕ್ಕಾಗಿಯೇ ಸಾಕುತ್ತಾರೆ. ಆದರೆ, ಇದ್ಯಾವುದೂ ಇಲ್ಲದೆ ಕರುವೊಂದು ಹಾಲು ಕೊಡುವುದು ಜಗದ ಸೋಜಿಗಕ್ಕೆ ಸಾಕ್ಷಿಯಾಗಿದೆ.
A calf has begun producing milk just three days after its birth, captivating the hearts and minds of residents in Chitradurga. The miraculous occurrence has drawn crowds of curious locals eager to witness this extraordinary phenomenon.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm