ಬ್ರೇಕಿಂಗ್ ನ್ಯೂಸ್
11-03-25 06:19 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.11 : ಹಿಂದು ಯುವಕರು ಹೆಣ್ಣು ಸಿಗುತ್ತಿಲ್ಲ ಎಂದು ಕೊರಗಬೇಡಿ, ಇತರ ಧರ್ಮೀಯ ಹೆಣ್ಣು ಮಕ್ಕಳನ್ನು ಮದುವೆಯಾಗಿ ಎಂದು ಹೇಳಿಕೆ ನೀಡಿರುವ ಹಿಂದು ಪರ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಚಿತ್ರನಟ ಪ್ರಕಾಶ್ ರಾಜ್ ಟೀಕಿಸಿದ್ದಾರೆ. ಇಂಥ ಕಾಮುಕ ಢೋಂಗಿಗಳು ಯಾವ ಧರ್ಮಕ್ಕೂ ಸೇರಿದವರಲ್ಲ ಎಂದು ಟೀಕಿಸಿ ಟ್ವೀಟ್ ಮಾಡಿದ್ದಾರೆ.
ಮದುವೆಯಾಗಲು ಹುಡುಗಿ ಸಿಗದೆ ಇರುವ ಹಿಂದೂ ಯುವಕರು ಅನ್ಯಧರ್ಮೀಯ ಹುಡುಗಿಯರನ್ನು ಪ್ರೀತಿಸಿ ಮದುವೆಯಾಗಿ ಅಂತ ಚಕ್ರವರ್ತಿ ಸೂಲಿಬೆಲೆ ಮಂಗಳೂರಿನ ಕಾರ್ಯಕ್ರಮದಲ್ಲಿ ಹೇಳಿರುವ ಮಾಧ್ಯಮ ವರದಿಯನ್ನು ಉಲ್ಲೇಖಿಸಿ ಪ್ರಕಾಶ್ ರಾಜ್ ಟೀಕೆ ಮಾಡಿದ್ದಾರೆ.
ಚಕ್ರವರ್ತಿ ವಿಡಿಯೋವನ್ನು ಹಂಚಿಕೊಂಡಿರುವ ಪ್ರಕಾಶ್ ರಾಜ್, ಈ ತನಾತನಿಯ ಆಯುಧವೆಲ್ಲ ಸೊಂಟದ ಕೆಳಗೇ.... ಛಿ.. ಛೀ .. ಇಂಥಾ ವಿಕೃತ .. ಕಾಮುಕ ಢೋಂಗಿಗಳು ಯಾವ ಧರ್ಮಕ್ಕೂ ಸೇರಿದವರಲ್ಲ ... ಎಚ್ಚರದಿಂದಿರಿ 🙏🙏🙏 #justasking ಎಂದು ಟ್ವೀಟ್ ಮಾಡಿದ್ದಾರೆ.
ಇದೇ ವೇಳೆ ಚಕ್ರವರ್ತಿ ಸೂಲಿಬೆಲೆ ಮಾಡಿರುವ ಭಾಷಣದ ವಿಡಿಯೋ ವೈರಲ್ ಆಗಿದೆ. ಮತಾಂತರ ಬಗ್ಗೆ ಎಷ್ಟು ದಿನಗಳಿಂದ ಹೇಳುತ್ತ ಬರ್ತೀರಿ. ಎಷ್ಟು ದಿನ ಅಂತ ಇದನ್ನೆಲ್ಲ ಸಹಿಸಿಕೊಳ್ಳಬೇಕು. ನಮ್ಮ ಯುವಕರು ಬೇರೆ ಸಮಾಜದ ಹೆಣ್ಮಕ್ಕಳತ್ತ ನೋಡಬೇಕು. ನಮ್ಮ ಹುಡುಗಿಯರನ್ನೇ ಎಷ್ಟು ಅಂತ ನೋಡ್ತೀರಿ. ಬೇರೆ ಧರ್ಮದ ಹುಡುಗಿಯರನ್ನೂ ನೋಡಿ ಅಂತ ಹೇಳಬೇಕಾಗಿದೆ. ಕ್ರಿಯೆಗೆ ಪ್ರತಿಕ್ರಿಯೆ ಆಗಬೇಕಲ್ವಾ ಎಂಬ ಧಾಟಿಯಲ್ಲಿ ಮಾತನಾಡಿದ್ದರು. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು ಪ್ರಕಾಶ್ ರಾಜ್ ಕಟು ಶಬ್ದಗಳಲ್ಲಿ ರಿಯಾಕ್ಟ್ ಮಾಡಿದ್ದಾರೆ.
Talk about ghar wapsi bhai Chakravarti Sulibele sparks controversy, actor Prakash Raj Slams hindu activist, call him Womanizer and cheater.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am