ಬ್ರೇಕಿಂಗ್ ನ್ಯೂಸ್
12-03-25 03:51 pm HK News Desk ಕರ್ನಾಟಕ
ಶಿವಮೊಗ್ಗ, ಮಾ.12 : ನನಗೆ ಫೆ. 28 ರಂದು ಲವ್ ಜಿಹಾದ್ ಪುಸ್ತಕ ಬಿಡುಗಡೆಗೆ ತಡೆ ಒಡ್ಡಲಾಯಿತು. ಇಲ್ಲಿನ ಎಸ್ಪಿ ನನಗೆ ಶಿವಮೊಗ್ಗ ಬರದಂತೆ ತಡೆ ಒಡ್ಡಿದರು. ಆದರೆ ಹೈಕೋರ್ಟ್ ಅನುಮತಿ ಪಡೆದು ಬಂದಿದ್ದೇನೆ. ಲವ್ ಜಿಹಾದ್ ಜನಸಂಖ್ಯೆ ಹೆಚ್ಚಾಗಿಸುವ ಒಂದು ಭಾಗ. ಈ ಮೂಲಕ ಷಡ್ಯಂತ್ರ, ಕುತಂತ್ರ, ಜಾಲ ನಡೆಯುತ್ತಿದೆ. ಇದರಲ್ಲಿ ನಿಜವಾದ ಪ್ರೀತಿ ಇಲ್ಲ ಎಂಬುದನ್ನು ಹೇಳುವುದಕ್ಕಾಗಿ ಎಲ್ಲ ಕಡೆಯೂ ಈ ಪುಸ್ತಕ ಬಿಡುಗಡೆ ಮಾಡುತ್ತಿದ್ದೇವೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಮುಸ್ಲಿಂ ಹುಡುಗರು ತಮ್ಮ ಹೆಸರೇಕೆ ಬದಲಾವಣೆ ಮಾಡಿಕೊಂಡು ಪ್ರೀತಿ ಮಾಡ್ತಿರಾ. ಇಸ್ಲಾಮಿಗೆ ಮತಾಂತರ ಮಾಡೋದು ಇಸ್ಲಾಮೀಕರಣಕ್ಕೆ ಪುಷ್ಟಿ ನೀಡುವ ಯೋಜನೆಯಾಗಿದೆ. ಶೇ. 88 ರಷ್ಟು ಪ್ರಕರಣಗಳಲ್ಲಿ ಹೆಸರು ಬದಲಾವಣೆ ಮಾಡಿ ಪ್ರೀತಿಸಿ ವಂಚನೆ ಮಾಡಿರುವುದು ಕಂಡುಬಂದಿದೆ. ಇವೆಲ್ಲವೂ ದಾಖಲೆ ಸಹಿತ ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ. ಹಿಂದೂ ಹೆಣ್ಣು ಮಕ್ಕಳನ್ನು ಈ ಮೂಲಕ ಶೋಷಣೆ ಮಾಡಲಾಗುತ್ತಿದೆ.
ಹಿಂದುಗಳ ನೈತಿಕತೆ ಕುಸಿಯಲು ಇಸ್ಲಾಂಗೆ ಮತಾಂತರಿಸಲಾಗುತ್ತಿದೆ. ಹಿಂದೂ ಹೆಣ್ಣು ಮಕ್ಕಳಿಗೆ ಏನು ಬೇಕಾದರೂ ಮಾಡಬಹುದೆಂದು ತಿಳಿದಿದ್ದಾರೆ. ವೇಶ್ಯಾವಾಟಿಕೆ, ಭಯೋತ್ಪಾದನೆ, ಕಳ್ಳತನಕ್ಕಾಗಿ ಹೆಣ್ಣು ಮಕ್ಕಳನ್ನು ಬಳಸಿಕೊಳ್ಳಲಾಗುತ್ತಿದೆ. ಹಿಂದೂ ಹೆಣ್ಣು ಮಕ್ಕಳನ್ನು ಎಚ್ಚರಿಸುವ ಕೆಲಸ ಈ ಪುಸ್ತಕದ ಮೂಲಕ ಮಾಡಲಾಗುತ್ತಿದೆ. ಕಳೆದೆರೆಡು ವರ್ಷದಲ್ಲಿ ದೇಶದಲ್ಲಿ 13 ಲಕ್ಷ ಲವ್ ಜಿಹಾದ್ ಪ್ರಕರಣಗಳು ದಾಖಲಾಗಿವೆ. ಹಂಪಿಯಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ.
ಆದರೆ ಹುಬ್ಬಳ್ಳಿಯ ನೇಹಾ ಹಿರೇಮಠ್ ಪ್ರಕರಣದ ಬಗ್ಗೆ ಮಾತನಾಡುತ್ತಿಲ್ಲ. ಮುಸಲ್ಮಾನ್ ಪರವಾಗಿ ಈ ರಾಜ್ಯ ಸರ್ಕಾರ ನಿಂತಿದೆ. ಮುಸ್ಲಿಂ ಓಟ್ ಬ್ಯಾಂಕ್ ಗಾಗಿ ಕಾಂಗ್ರೆಸ್ ಹಾತೊರೆಯುತ್ತಿದೆ. ಮುಸಲ್ಮಾನರ ಪರ ಮಾತನಾಡುತ್ತ ನಮ್ಮ ಬ್ರದರ್ಸ್ ಎನ್ನುತ್ತಿದ್ದಾರೆ. ಹೀಗಾಗಿ ಹಿಂದುಗಳಿಗೆ ಸ್ವಯಂ ರಕ್ಷಣೆಗಾಗಿ ತ್ರಿಶೂಲ ದೀಕ್ಷಾ ಕಾರ್ಯಕ್ರಮ ಮಾಡಲಿದ್ದೇವೆ. ರಾಜ್ಯದ ನೂರು ಸ್ಥಳಗಳಲ್ಲಿ ತ್ರಿಶೂಲ್ ದೀಕ್ಷಾ ಸಮಾರಂಭ ಮಾಡುತ್ತಿದ್ದೆವೆ. ಹೆಣ್ಣುಮಕ್ಕಳಿಗೆ ಧೈರ್ಯದಿಂದ ಮಾರುಕಟ್ಟೆಯಲ್ಲಿ ಓಡಾಡಲು ತ್ರಿಶೂಲ ಕೊಡಿಸುತ್ತಿದ್ದೇವೆ. ನಮ್ಮ ಪುಸ್ತಕವನ್ನೇ ನೋಡದ ಡಿಸಿ, ಎಸ್.ಪಿ. ನನ್ನನ್ನು ಶಿವಮೊಗ್ಗಕ್ಕೆ ಬರಲು ತಡೆದರು.
ಹೀಗಾಗಿ,ನೀವು ಯಾರ ಪರವಾಗಿ ಇಲ್ಲಿ ಅಧಿಕಾರ ಮಾಡುತ್ತಿದ್ದಿರಾ ? ಯಾರ ಬಾಲ ಬಡುಕರಾಗಿ ಕೆಲಸ ಮಾಡುತ್ತಿದ್ದಿರಾ. ಅಲ್ಲಿ ಯಾರೂ ಇಲ್ಲದ ಸಮಯದಲ್ಲಿ ನನಗೆ ಪೊಲೀಸರು ಹೆದರಿಸಿಬಿಟ್ಟರು. ನಾನೇನು ರೇಪಿಸ್ಟಾ !?ದರೋಡೆಕೋರನಾ !? ಡಿಸಿ, ಎಸ್.ಪಿ. ಯವರೇ ನಿಮ್ಮ ಮನೆಯಲ್ಲೂ ಹೆಣ್ಣುಮಕ್ಕಳಿದ್ದಾರೆ. ಇದನ್ನು ಪೊಲೀಸರು ನೆನಪಿನಲ್ಲಿಟ್ಟುಕೊಳ್ಳಬೇಕು. ನನಗೆ ತಡೆಯುವ ಉದ್ದೇಶವಾದರೂ ಏನಿತ್ತು ಎಂದು ಸಮಾಜಕ್ಕೆ ಹೇಳಬೇಕು ಎಂದು ಹೇಳಿದರು.
ಹಿಂದೂ ಹುಡುಗರು ಮುಸ್ಲಿಂ ಹುಡುಗಿಯರಿಗೆ ಪ್ರೀತಿ ಮಾಡಿದರೆ ತಪ್ಪಿಲ್ಲ. ನಮ್ಮ ಹುಡುಗರು ದೇಶದ್ರೋಹ ಮಾಡಲ್ಲ. ಎಲ್ಲಿಯೂ ಆ ಹೆಣ್ಣು ಮಕ್ಕಳಿಗೆ ಸೂಟ್ ಕೇಸ್ ನಲ್ಲಿ ತುಂಬಲ್ಲ. ನಮ್ಮ ಹಿಂದೂ ಹುಡುಗರು ನಿಜವಾದ ಪ್ರೀತಿ ಮಾಡುತ್ತಾರೆ. ಹೀಗಾಗಿ ಚಕ್ರವರ್ತಿ ಸೂಲಿಬೆಲೆ ಹೇಳಿಕೆಯನ್ನು ನಾನು ಬೆಂಬಲಿಸುತ್ತೇನೆ ಎಂದು ಸೂಲಿಬೆಲೆ ನೀಡಿದ್ದ ಹೇಳಿಕೆಯನ್ನು ಸಮರ್ಥಿಸಿದರು.
Hindu Girls at Risk, Pramod Muthalik Highlights Trafficking Concerns Amid Alarming Love jihad Marriage Statistics.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm