ಬ್ರೇಕಿಂಗ್ ನ್ಯೂಸ್
12-03-25 03:51 pm HK News Desk ಕರ್ನಾಟಕ
ಶಿವಮೊಗ್ಗ, ಮಾ.12 : ನನಗೆ ಫೆ. 28 ರಂದು ಲವ್ ಜಿಹಾದ್ ಪುಸ್ತಕ ಬಿಡುಗಡೆಗೆ ತಡೆ ಒಡ್ಡಲಾಯಿತು. ಇಲ್ಲಿನ ಎಸ್ಪಿ ನನಗೆ ಶಿವಮೊಗ್ಗ ಬರದಂತೆ ತಡೆ ಒಡ್ಡಿದರು. ಆದರೆ ಹೈಕೋರ್ಟ್ ಅನುಮತಿ ಪಡೆದು ಬಂದಿದ್ದೇನೆ. ಲವ್ ಜಿಹಾದ್ ಜನಸಂಖ್ಯೆ ಹೆಚ್ಚಾಗಿಸುವ ಒಂದು ಭಾಗ. ಈ ಮೂಲಕ ಷಡ್ಯಂತ್ರ, ಕುತಂತ್ರ, ಜಾಲ ನಡೆಯುತ್ತಿದೆ. ಇದರಲ್ಲಿ ನಿಜವಾದ ಪ್ರೀತಿ ಇಲ್ಲ ಎಂಬುದನ್ನು ಹೇಳುವುದಕ್ಕಾಗಿ ಎಲ್ಲ ಕಡೆಯೂ ಈ ಪುಸ್ತಕ ಬಿಡುಗಡೆ ಮಾಡುತ್ತಿದ್ದೇವೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಮುಸ್ಲಿಂ ಹುಡುಗರು ತಮ್ಮ ಹೆಸರೇಕೆ ಬದಲಾವಣೆ ಮಾಡಿಕೊಂಡು ಪ್ರೀತಿ ಮಾಡ್ತಿರಾ. ಇಸ್ಲಾಮಿಗೆ ಮತಾಂತರ ಮಾಡೋದು ಇಸ್ಲಾಮೀಕರಣಕ್ಕೆ ಪುಷ್ಟಿ ನೀಡುವ ಯೋಜನೆಯಾಗಿದೆ. ಶೇ. 88 ರಷ್ಟು ಪ್ರಕರಣಗಳಲ್ಲಿ ಹೆಸರು ಬದಲಾವಣೆ ಮಾಡಿ ಪ್ರೀತಿಸಿ ವಂಚನೆ ಮಾಡಿರುವುದು ಕಂಡುಬಂದಿದೆ. ಇವೆಲ್ಲವೂ ದಾಖಲೆ ಸಹಿತ ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ. ಹಿಂದೂ ಹೆಣ್ಣು ಮಕ್ಕಳನ್ನು ಈ ಮೂಲಕ ಶೋಷಣೆ ಮಾಡಲಾಗುತ್ತಿದೆ.
ಹಿಂದುಗಳ ನೈತಿಕತೆ ಕುಸಿಯಲು ಇಸ್ಲಾಂಗೆ ಮತಾಂತರಿಸಲಾಗುತ್ತಿದೆ. ಹಿಂದೂ ಹೆಣ್ಣು ಮಕ್ಕಳಿಗೆ ಏನು ಬೇಕಾದರೂ ಮಾಡಬಹುದೆಂದು ತಿಳಿದಿದ್ದಾರೆ. ವೇಶ್ಯಾವಾಟಿಕೆ, ಭಯೋತ್ಪಾದನೆ, ಕಳ್ಳತನಕ್ಕಾಗಿ ಹೆಣ್ಣು ಮಕ್ಕಳನ್ನು ಬಳಸಿಕೊಳ್ಳಲಾಗುತ್ತಿದೆ. ಹಿಂದೂ ಹೆಣ್ಣು ಮಕ್ಕಳನ್ನು ಎಚ್ಚರಿಸುವ ಕೆಲಸ ಈ ಪುಸ್ತಕದ ಮೂಲಕ ಮಾಡಲಾಗುತ್ತಿದೆ. ಕಳೆದೆರೆಡು ವರ್ಷದಲ್ಲಿ ದೇಶದಲ್ಲಿ 13 ಲಕ್ಷ ಲವ್ ಜಿಹಾದ್ ಪ್ರಕರಣಗಳು ದಾಖಲಾಗಿವೆ. ಹಂಪಿಯಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ.
ಆದರೆ ಹುಬ್ಬಳ್ಳಿಯ ನೇಹಾ ಹಿರೇಮಠ್ ಪ್ರಕರಣದ ಬಗ್ಗೆ ಮಾತನಾಡುತ್ತಿಲ್ಲ. ಮುಸಲ್ಮಾನ್ ಪರವಾಗಿ ಈ ರಾಜ್ಯ ಸರ್ಕಾರ ನಿಂತಿದೆ. ಮುಸ್ಲಿಂ ಓಟ್ ಬ್ಯಾಂಕ್ ಗಾಗಿ ಕಾಂಗ್ರೆಸ್ ಹಾತೊರೆಯುತ್ತಿದೆ. ಮುಸಲ್ಮಾನರ ಪರ ಮಾತನಾಡುತ್ತ ನಮ್ಮ ಬ್ರದರ್ಸ್ ಎನ್ನುತ್ತಿದ್ದಾರೆ. ಹೀಗಾಗಿ ಹಿಂದುಗಳಿಗೆ ಸ್ವಯಂ ರಕ್ಷಣೆಗಾಗಿ ತ್ರಿಶೂಲ ದೀಕ್ಷಾ ಕಾರ್ಯಕ್ರಮ ಮಾಡಲಿದ್ದೇವೆ. ರಾಜ್ಯದ ನೂರು ಸ್ಥಳಗಳಲ್ಲಿ ತ್ರಿಶೂಲ್ ದೀಕ್ಷಾ ಸಮಾರಂಭ ಮಾಡುತ್ತಿದ್ದೆವೆ. ಹೆಣ್ಣುಮಕ್ಕಳಿಗೆ ಧೈರ್ಯದಿಂದ ಮಾರುಕಟ್ಟೆಯಲ್ಲಿ ಓಡಾಡಲು ತ್ರಿಶೂಲ ಕೊಡಿಸುತ್ತಿದ್ದೇವೆ. ನಮ್ಮ ಪುಸ್ತಕವನ್ನೇ ನೋಡದ ಡಿಸಿ, ಎಸ್.ಪಿ. ನನ್ನನ್ನು ಶಿವಮೊಗ್ಗಕ್ಕೆ ಬರಲು ತಡೆದರು.
ಹೀಗಾಗಿ,ನೀವು ಯಾರ ಪರವಾಗಿ ಇಲ್ಲಿ ಅಧಿಕಾರ ಮಾಡುತ್ತಿದ್ದಿರಾ ? ಯಾರ ಬಾಲ ಬಡುಕರಾಗಿ ಕೆಲಸ ಮಾಡುತ್ತಿದ್ದಿರಾ. ಅಲ್ಲಿ ಯಾರೂ ಇಲ್ಲದ ಸಮಯದಲ್ಲಿ ನನಗೆ ಪೊಲೀಸರು ಹೆದರಿಸಿಬಿಟ್ಟರು. ನಾನೇನು ರೇಪಿಸ್ಟಾ !?ದರೋಡೆಕೋರನಾ !? ಡಿಸಿ, ಎಸ್.ಪಿ. ಯವರೇ ನಿಮ್ಮ ಮನೆಯಲ್ಲೂ ಹೆಣ್ಣುಮಕ್ಕಳಿದ್ದಾರೆ. ಇದನ್ನು ಪೊಲೀಸರು ನೆನಪಿನಲ್ಲಿಟ್ಟುಕೊಳ್ಳಬೇಕು. ನನಗೆ ತಡೆಯುವ ಉದ್ದೇಶವಾದರೂ ಏನಿತ್ತು ಎಂದು ಸಮಾಜಕ್ಕೆ ಹೇಳಬೇಕು ಎಂದು ಹೇಳಿದರು.
ಹಿಂದೂ ಹುಡುಗರು ಮುಸ್ಲಿಂ ಹುಡುಗಿಯರಿಗೆ ಪ್ರೀತಿ ಮಾಡಿದರೆ ತಪ್ಪಿಲ್ಲ. ನಮ್ಮ ಹುಡುಗರು ದೇಶದ್ರೋಹ ಮಾಡಲ್ಲ. ಎಲ್ಲಿಯೂ ಆ ಹೆಣ್ಣು ಮಕ್ಕಳಿಗೆ ಸೂಟ್ ಕೇಸ್ ನಲ್ಲಿ ತುಂಬಲ್ಲ. ನಮ್ಮ ಹಿಂದೂ ಹುಡುಗರು ನಿಜವಾದ ಪ್ರೀತಿ ಮಾಡುತ್ತಾರೆ. ಹೀಗಾಗಿ ಚಕ್ರವರ್ತಿ ಸೂಲಿಬೆಲೆ ಹೇಳಿಕೆಯನ್ನು ನಾನು ಬೆಂಬಲಿಸುತ್ತೇನೆ ಎಂದು ಸೂಲಿಬೆಲೆ ನೀಡಿದ್ದ ಹೇಳಿಕೆಯನ್ನು ಸಮರ್ಥಿಸಿದರು.
Hindu Girls at Risk, Pramod Muthalik Highlights Trafficking Concerns Amid Alarming Love jihad Marriage Statistics.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am