ಬ್ರೇಕಿಂಗ್ ನ್ಯೂಸ್
12-03-25 03:51 pm HK News Desk ಕರ್ನಾಟಕ
ಶಿವಮೊಗ್ಗ, ಮಾ.12 : ನನಗೆ ಫೆ. 28 ರಂದು ಲವ್ ಜಿಹಾದ್ ಪುಸ್ತಕ ಬಿಡುಗಡೆಗೆ ತಡೆ ಒಡ್ಡಲಾಯಿತು. ಇಲ್ಲಿನ ಎಸ್ಪಿ ನನಗೆ ಶಿವಮೊಗ್ಗ ಬರದಂತೆ ತಡೆ ಒಡ್ಡಿದರು. ಆದರೆ ಹೈಕೋರ್ಟ್ ಅನುಮತಿ ಪಡೆದು ಬಂದಿದ್ದೇನೆ. ಲವ್ ಜಿಹಾದ್ ಜನಸಂಖ್ಯೆ ಹೆಚ್ಚಾಗಿಸುವ ಒಂದು ಭಾಗ. ಈ ಮೂಲಕ ಷಡ್ಯಂತ್ರ, ಕುತಂತ್ರ, ಜಾಲ ನಡೆಯುತ್ತಿದೆ. ಇದರಲ್ಲಿ ನಿಜವಾದ ಪ್ರೀತಿ ಇಲ್ಲ ಎಂಬುದನ್ನು ಹೇಳುವುದಕ್ಕಾಗಿ ಎಲ್ಲ ಕಡೆಯೂ ಈ ಪುಸ್ತಕ ಬಿಡುಗಡೆ ಮಾಡುತ್ತಿದ್ದೇವೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಮುಸ್ಲಿಂ ಹುಡುಗರು ತಮ್ಮ ಹೆಸರೇಕೆ ಬದಲಾವಣೆ ಮಾಡಿಕೊಂಡು ಪ್ರೀತಿ ಮಾಡ್ತಿರಾ. ಇಸ್ಲಾಮಿಗೆ ಮತಾಂತರ ಮಾಡೋದು ಇಸ್ಲಾಮೀಕರಣಕ್ಕೆ ಪುಷ್ಟಿ ನೀಡುವ ಯೋಜನೆಯಾಗಿದೆ. ಶೇ. 88 ರಷ್ಟು ಪ್ರಕರಣಗಳಲ್ಲಿ ಹೆಸರು ಬದಲಾವಣೆ ಮಾಡಿ ಪ್ರೀತಿಸಿ ವಂಚನೆ ಮಾಡಿರುವುದು ಕಂಡುಬಂದಿದೆ. ಇವೆಲ್ಲವೂ ದಾಖಲೆ ಸಹಿತ ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ. ಹಿಂದೂ ಹೆಣ್ಣು ಮಕ್ಕಳನ್ನು ಈ ಮೂಲಕ ಶೋಷಣೆ ಮಾಡಲಾಗುತ್ತಿದೆ.
ಹಿಂದುಗಳ ನೈತಿಕತೆ ಕುಸಿಯಲು ಇಸ್ಲಾಂಗೆ ಮತಾಂತರಿಸಲಾಗುತ್ತಿದೆ. ಹಿಂದೂ ಹೆಣ್ಣು ಮಕ್ಕಳಿಗೆ ಏನು ಬೇಕಾದರೂ ಮಾಡಬಹುದೆಂದು ತಿಳಿದಿದ್ದಾರೆ. ವೇಶ್ಯಾವಾಟಿಕೆ, ಭಯೋತ್ಪಾದನೆ, ಕಳ್ಳತನಕ್ಕಾಗಿ ಹೆಣ್ಣು ಮಕ್ಕಳನ್ನು ಬಳಸಿಕೊಳ್ಳಲಾಗುತ್ತಿದೆ. ಹಿಂದೂ ಹೆಣ್ಣು ಮಕ್ಕಳನ್ನು ಎಚ್ಚರಿಸುವ ಕೆಲಸ ಈ ಪುಸ್ತಕದ ಮೂಲಕ ಮಾಡಲಾಗುತ್ತಿದೆ. ಕಳೆದೆರೆಡು ವರ್ಷದಲ್ಲಿ ದೇಶದಲ್ಲಿ 13 ಲಕ್ಷ ಲವ್ ಜಿಹಾದ್ ಪ್ರಕರಣಗಳು ದಾಖಲಾಗಿವೆ. ಹಂಪಿಯಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ.
ಆದರೆ ಹುಬ್ಬಳ್ಳಿಯ ನೇಹಾ ಹಿರೇಮಠ್ ಪ್ರಕರಣದ ಬಗ್ಗೆ ಮಾತನಾಡುತ್ತಿಲ್ಲ. ಮುಸಲ್ಮಾನ್ ಪರವಾಗಿ ಈ ರಾಜ್ಯ ಸರ್ಕಾರ ನಿಂತಿದೆ. ಮುಸ್ಲಿಂ ಓಟ್ ಬ್ಯಾಂಕ್ ಗಾಗಿ ಕಾಂಗ್ರೆಸ್ ಹಾತೊರೆಯುತ್ತಿದೆ. ಮುಸಲ್ಮಾನರ ಪರ ಮಾತನಾಡುತ್ತ ನಮ್ಮ ಬ್ರದರ್ಸ್ ಎನ್ನುತ್ತಿದ್ದಾರೆ. ಹೀಗಾಗಿ ಹಿಂದುಗಳಿಗೆ ಸ್ವಯಂ ರಕ್ಷಣೆಗಾಗಿ ತ್ರಿಶೂಲ ದೀಕ್ಷಾ ಕಾರ್ಯಕ್ರಮ ಮಾಡಲಿದ್ದೇವೆ. ರಾಜ್ಯದ ನೂರು ಸ್ಥಳಗಳಲ್ಲಿ ತ್ರಿಶೂಲ್ ದೀಕ್ಷಾ ಸಮಾರಂಭ ಮಾಡುತ್ತಿದ್ದೆವೆ. ಹೆಣ್ಣುಮಕ್ಕಳಿಗೆ ಧೈರ್ಯದಿಂದ ಮಾರುಕಟ್ಟೆಯಲ್ಲಿ ಓಡಾಡಲು ತ್ರಿಶೂಲ ಕೊಡಿಸುತ್ತಿದ್ದೇವೆ. ನಮ್ಮ ಪುಸ್ತಕವನ್ನೇ ನೋಡದ ಡಿಸಿ, ಎಸ್.ಪಿ. ನನ್ನನ್ನು ಶಿವಮೊಗ್ಗಕ್ಕೆ ಬರಲು ತಡೆದರು.
ಹೀಗಾಗಿ,ನೀವು ಯಾರ ಪರವಾಗಿ ಇಲ್ಲಿ ಅಧಿಕಾರ ಮಾಡುತ್ತಿದ್ದಿರಾ ? ಯಾರ ಬಾಲ ಬಡುಕರಾಗಿ ಕೆಲಸ ಮಾಡುತ್ತಿದ್ದಿರಾ. ಅಲ್ಲಿ ಯಾರೂ ಇಲ್ಲದ ಸಮಯದಲ್ಲಿ ನನಗೆ ಪೊಲೀಸರು ಹೆದರಿಸಿಬಿಟ್ಟರು. ನಾನೇನು ರೇಪಿಸ್ಟಾ !?ದರೋಡೆಕೋರನಾ !? ಡಿಸಿ, ಎಸ್.ಪಿ. ಯವರೇ ನಿಮ್ಮ ಮನೆಯಲ್ಲೂ ಹೆಣ್ಣುಮಕ್ಕಳಿದ್ದಾರೆ. ಇದನ್ನು ಪೊಲೀಸರು ನೆನಪಿನಲ್ಲಿಟ್ಟುಕೊಳ್ಳಬೇಕು. ನನಗೆ ತಡೆಯುವ ಉದ್ದೇಶವಾದರೂ ಏನಿತ್ತು ಎಂದು ಸಮಾಜಕ್ಕೆ ಹೇಳಬೇಕು ಎಂದು ಹೇಳಿದರು.
ಹಿಂದೂ ಹುಡುಗರು ಮುಸ್ಲಿಂ ಹುಡುಗಿಯರಿಗೆ ಪ್ರೀತಿ ಮಾಡಿದರೆ ತಪ್ಪಿಲ್ಲ. ನಮ್ಮ ಹುಡುಗರು ದೇಶದ್ರೋಹ ಮಾಡಲ್ಲ. ಎಲ್ಲಿಯೂ ಆ ಹೆಣ್ಣು ಮಕ್ಕಳಿಗೆ ಸೂಟ್ ಕೇಸ್ ನಲ್ಲಿ ತುಂಬಲ್ಲ. ನಮ್ಮ ಹಿಂದೂ ಹುಡುಗರು ನಿಜವಾದ ಪ್ರೀತಿ ಮಾಡುತ್ತಾರೆ. ಹೀಗಾಗಿ ಚಕ್ರವರ್ತಿ ಸೂಲಿಬೆಲೆ ಹೇಳಿಕೆಯನ್ನು ನಾನು ಬೆಂಬಲಿಸುತ್ತೇನೆ ಎಂದು ಸೂಲಿಬೆಲೆ ನೀಡಿದ್ದ ಹೇಳಿಕೆಯನ್ನು ಸಮರ್ಥಿಸಿದರು.
Hindu Girls at Risk, Pramod Muthalik Highlights Trafficking Concerns Amid Alarming Love jihad Marriage Statistics.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm