ಬ್ರೇಕಿಂಗ್ ನ್ಯೂಸ್
13-03-25 12:32 pm HK News Desk ಕರ್ನಾಟಕ
ಕಾರವಾರ, ಮಾ.13 : ಹೊನ್ನಾವರದಲ್ಲಿ ನಡೆದ ಗರ್ಭ ಧರಿಸಿದ್ದ ಗೋ ಹತ್ಯೆ ಪ್ರಕರಣವನ್ನು ಭೇದಿಸುವಲ್ಲಿ ಉತ್ತರ ಕನ್ನಡ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. ಕಳೆದ 46 ದಿನಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳಿಗಾಗಿ ಬಹುಮಾನ ಘೋಷಿಸಿದ್ದ ಪೊಲೀಸ್ ಇಲಾಖೆ, ತೀವ್ರ ಹುಡುಕಾಟದ ಬಳಿಕ ಮುಂಬೈ ಹಾಗೂ ಭಟ್ಕಳದಲ್ಲಿ ಇಬ್ಬರನ್ನು ಬಂಧಿಸಿದೆ.
ಕಳೆದ ಜನವರಿ 19ರಂದು ಹೊನ್ನಾವರ ತಾಲೂಕಿನ ಕೊಂಡಕುಳಿ ಗ್ರಾಮದಲ್ಲಿ ಗರ್ಭ ಧರಿಸಿದ್ದ ಹಸುವಿನ ಹತ್ಯೆ ನಡೆದಿದ್ದು ಪ್ರಕರಣ ಇಡೀ ರಾಜ್ಯದಲ್ಲಿ ಸದ್ದು ಮಾಡಿತ್ತು. ಆರೋಪಿಗಳನ್ನು ಬಂಧಿಸುವಂತೆ ಸಾಕಷ್ಟು ಹೋರಾಟಗಳು ನಡೆದಿದ್ದವು. ಪ್ರಕರಣದ ಹಿಂದೆ ಬಿದ್ದಿದ್ದ ಉತ್ತರ ಕನ್ನಡ ಜಿಲ್ಲಾ ಪೊಲೀಸರು ಆರೋಪಿಗಳನ್ನು ಕಡೆಗೂ ಸೆರೆ ಹಿಡಿದಿದ್ದಾರೆ.



ಸುಮಾರು 400ಕ್ಕೂ ಅಧಿಕ ಜನರನ್ನು ವಿಚಾರಣೆ ನಡೆಸಿ, ಹಸು ಕೊಂದವರನ್ನು ಗುರುತಿಸಿದ್ದ ಪೊಲೀಸರು ಆರೋಪಿಗಳನ್ನು ಹುಡುಕಿಕೊಟ್ಟವರಿಗೆ 50 ಸಾವಿರ ರೂ. ಬಹುಮಾನ ಕೊಡಲಾಗುವುದು ಎಂದಿದ್ದರು. ಪ್ರಮುಖ ಆರೋಪಿಯಾಗಿದ್ದ ವಾಸೀಂ ಎಂಬಾತನನ್ನು ಮುಂಬೈನಲ್ಲಿ ಹಾಗೂ ಇನ್ನೋರ್ವ ಆರೋಪಿ ಮುಜಾಮಿಲ್ ಎನ್ನುವಾತನನ್ನು ಭಟ್ಕಳದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾಲ್ಕು ತಂಡಗಳಿಂದ ಕಾರ್ಯಾಚರಣೆ
ಕೃತ್ಯಕ್ಕೆ ಸಹಕರಿಸಿದ್ದ ಇಬ್ಬರು ಆರೋಪಿಗಳನ್ನೂ ಈ ಹಿಂದೆಯೇ ಪೊಲೀಸರು ಬಂಧಿಸಿದ್ದರು. ಈ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಫೈಜಾನ್ ಎನ್ನುವ ಆರೋಪಿ ಕಾಲಿಗೆ ಗುಂಡು ಹಾರಿಸಲಾಗಿತ್ತು. ಇದಾದ ನಂತರ ವಾಸೀಂ ಹಾಗೂ ಮುಜಾಮಿಲ್ ಇಬ್ಬರು ಧಾರವಾಡಕ್ಕೆ ತೆರಳಿ, ಅಲ್ಲಿಂದ ಮುಂಬೈ ಕಡೆ ಹೋಗಿ ತಪ್ಪಿಸಿಕೊಂಡಿದ್ದರು. ಎಸ್ಪಿ ಎಂ.ನಾರಾಯಣ ಪ್ರಕರಣ ಭೇದಿಸಲು, 4 ವಿಶೇಷ ತಂಡಗಳನ್ನು ರಚಿಸಿದ್ದರು. ಆರೋಪಿಗಳು ಮುಂಬೈಗೆ ತೆರಳಿರುವುದು ಗೊತ್ತಾಗಿ ಪೊಲೀಸರು ಮಹಾರಾಷ್ಟ್ರಕ್ಕೆ ತೆರಳಿದ್ದರು. ವಾಸಿಂ ಬಂಧನದ ಬಳಿಕ, ಮುಜಾಮಿಲ್ ವಾಪಸ್ ಭಟ್ಕಳದತ್ತ ಬಂದಿರುವ ಮಾಹಿತಿ ತಿಳಿದು, ಆತನನ್ನೂ ಬಂಧನ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬಂಧಿತ ಆರೋಪಿಗಳು ಕೊಂಡುಕುಳಿ ಗ್ರಾಮದಲ್ಲಿ ಹಸು ಹಾಗೂ ಕರುವನ್ನು ಕೊಂದು ಮಾಂಸ ಮಾಡಿ ಭಟ್ಕಳದ ಮದುವೆ ಸಮಾರಂಭಕ್ಕೆ ನೀಡಿ, ಹಣ ಪಡೆದಿದ್ದರು. ಗೂಗಲ್ ಪೇ ಮೂಲಕ ಹಣ ಹಾಕಿಸಿಕೊಂಡ ದಾಖಲೆ ಪೊಲೀಸರಿಗೆ ಲಭ್ಯವಾಗಿದ್ದರಿಂದ ಪ್ರಕರಣ ಬೇಧಿಸುವಲ್ಲಿ ಸುಲಭವಾಯಿತು. ಪೊಲೀಸ್ ತಂಡಗಳು 46 ದಿನಗಳ ಕಾಲ 5 ರಾಜ್ಯಗಳಲ್ಲಿ ಒಟ್ಟು 11 ಸಾವಿರ ಕಿ.ಮೀ ಸುತ್ತಾಡಿ ಹುಡುಕಾಟ ನಡೆಸಿದ್ದರು. ಜೊತೆಗೆ, 130 ಸ್ಥಳಗಳಲ್ಲಿ ಸಿಸಿಟಿವಿ, 350ಕ್ಕೂ ಹೆಚ್ಚು ಜನರ ವಿಚಾರಣೆ ಹಾಗೂ 800 ಮೊಬೈಲ್ ನಂಬರ್ಗಳ ಪರಿಶೀಲನೆ ನಡೆಸಲಾಗಿದೆ. ಗುಪ್ತ ಮಾಹಿತಿದಾರರಿಗೆ ಇಲಾಖೆಯಿಂದ 50 ಸಾವಿರ ಹಾಗೂ ಮಾಹಿತಿ ನೀಡಿದ್ದ ಮತ್ತಿಬ್ಬರು ಖಾಸಗಿ ವ್ಯಕ್ತಿಗಳಿಗೆ ತಲಾ 50 ಸಾವಿರ ಬಹುಮಾನ ನೀಡಲಾಗಿದೆ' ಎಂದು ಎಸ್ಪಿ ಎಂ.ನಾರಾಯಣ ಮಾಹಿತಿ ನೀಡಿದ್ದಾರೆ.
After an operation spanning 45 days, covering 11,000 km in five States, the Uttara Kannada Police have finally arrested two more accused who were absconding after brutally killing a cow in Kondakuli village of Honnavar taluk. With their arrest, all the four involved in the brutal killing are behind bars now.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
15-02-26 04:01 pm
HK Desk
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
15-02-26 08:52 pm
Mangalore Correspondent
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am