ಬ್ರೇಕಿಂಗ್ ನ್ಯೂಸ್
14-03-25 08:30 pm HK News Desk ಕರ್ನಾಟಕ
ಬಾಗಲಕೋಟೆ, ಮಾ.14 : ಡ್ಯೂಟಿಯಲ್ಲಿದ್ದ ಪೋಲಿಸರು ಹಣ ಪಡೆದು ವ್ಯಕ್ತಿಯೊಬ್ಬರ ಕಾಲಿಗೆ ಬಿದ್ದು ನಮಸ್ಕಾರ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ವಿಡಿಯೋ ರಾಜ್ಯಾದ್ಯಂತ ವೈರಲ್ ಆಗಿದ್ದು ಇದ್ಯಾರಪ್ಪಾ.. ಈ ರೀತಿ ರಾಜಾರೋಷವಾಗೇ ಖಾಕಿ ಡ್ರೆಸ್ಸಲ್ಲಿದ್ದವರು ಕಾಲಿಗೆ ಬೀಳುತ್ತಿದ್ದಾರಲ್ವಾ ಎಂದು ಜನರು ಪ್ರಶ್ನೆ ಮಾಡಿದ್ದರು.
ಈ ಬಗ್ಗೆ ಪೊಲೀಸರಿಗೆ ಹಣ ಕೊಟ್ಟು ಆಶೀರ್ವಾದ ಮಾಡಿದ್ದ ಸಿದ್ದನಕೊಳ್ಳ ಶಿವಕುಮಾರ ಸ್ವಾಮೀಜಿ ಸ್ಪಷ್ಟನೆ ನೀಡಿದ್ದಾರೆ. ಪೊಲೀಸರು ದುಡ್ಡು ಪಡೆದು ಕಾಲಿಗೆ ನಮಸ್ಕಾರ ಮಾಡೋದನ್ನು ವೈರಲ್ ಮಾಡಿದಾರೆ. ಅದರಲ್ಲಿ ಯಾವುದೇ ರೀತಿ ಅನ್ಯಥಾ ಭಾವಿಸಬಾರದು. ನಮ್ಮ ಮಠದ್ದು ಮೊದಲಿಂದಲೂ ದುಡ್ಡು ಕೊಟ್ಟು ಆಶೀರ್ವಾದ ಮಾಡುವ ಪರಂಪರೆ ಇದೆ. ನಾವು ದಿವಸದ ದಾಸೋಹಕ್ಕೆ ಎಷ್ಟು ಹಣ ಬೇಕು ಅಷ್ಟು ಇಟ್ಕೊಂಡು ಉಳಿದ ಹಣವನ್ನು ನಾವು ಭಕ್ತರಿಗೆ ಕೊಡುತ್ತೇವೆ. ಇದು ಭಕ್ತರನ್ನು ಬೆಳೆಸುವ ಮಠವಾಗಿದೆ.


ಬಾದಾಮಿಯಲ್ಲಿ ಒಂದು ಕಾರ್ಯಕ್ರಮಕ್ಕೆ ಹೊರಟಾಗ ಆ ಹುಡುಗ ಮೊದಲು ಕಾಲು ಬಿದ್ದವ ಏನಿದಾನೆ ಆತ ಮೊದಲಿಂದಲೂ ಹತ್ತು ವರ್ಷದಿಂದಲೂ ಮಠಕ್ಕೆ ಬರ್ತಾ ಇದ್ದ. ಆತನನ್ನು ನೋಡಿ ನಾನು ಗಾಡಿ ನಿಲ್ಲಿಸಿದೆ. ಅಷ್ಟರಲ್ಲಿ ಅವರೆಲ್ಲಾ ಯಥಾರೀತಿ ಗುರುಗಳು ಅಂತ ನಮಸ್ಕಾರ ಮಾಡಿದ್ರು. ನಾ ದುಡ್ಡು ಕೊಟ್ಡಿದ್ದೇನೆ ಅನ್ಯಥಾ ಭಾವಿಸಬಾರದು. ಇದನ್ನು ದೊಡ್ಡ ಇಶ್ಯು ಮಾಡಿ ವೈರಲ್ ಮಾಡೋದರಲ್ಲಿ ಅರ್ಥವಿಲ್ಲ. ಯಾಕೆಂದರೆ ನಾವು ಅವರಿಗೆ ಲಂಚ ಕೊಟ್ಟಿಲ್ಲ. ಮೊದಲಿಂದಲೂ ಅವರು ನಮ್ಮ ಮಠಕ್ಕೆ ನಡಕೊಂಡು ಬಂದಿದ್ದಾರೆ. ಅವರು ಒಬ್ಬರಿಗೆ ನಾವು ದುಡ್ಡು ಕೊಟ್ಟಿಲ್ಲ. ಈ ರಾಜ್ಯದ ಮುಖ್ಯಮಂತ್ರಿಯಿಂದ ಹಿಡಿದು ಎಲ್ಲರಿಗೂ ದುಡ್ಡು ಕೊಟ್ಟಿದ್ದೇವೆ. ಸಿದ್ದರಾಮಯ್ಯ ಅವರಿಗೂ ದುಡ್ಡು ಕೊಟ್ಟು ಆಶೀರ್ವಾದ ಮಾಡಿದ್ದೇವೆ. ಯಡಿಯೂರಪ್ಪ ಅವರಿಗೂ ದುಡ್ಡು ಕೊಟ್ಟು ಆಶೀರ್ವಾದ ಮಾಡಿದ್ದೇವೆ.
ಅನೇಕ ಜನ ರಾಜಕಾರಣಿಗಳಿಂದ ಹಿಡಿದು ಪೊಲೀಸ್ ಇಲಾಖೆ, ಬಡವರಿಂದ ಹಿಡಿದು ದೊಡ್ಡವರಿಗೂ ಆಶೀರ್ವಾದ ಮಾಡ್ತಾ ಬಂದಿದ್ದೇವೆ. ಆ ಹಣವನ್ನು ಭಕ್ತರು ಮನೆಯಲ್ಲಿಟ್ಟು ಪೂಜೆ ಮಾಡ್ತಾರೆ. ಆ ರೀತಿ ಪರಂಪರೆ ಇದೆ, ಅದರಲ್ಲಿ ಈ ರೀತಿ ವೈರಲ್ ಮಾಡಿ ಪೊಲೀಸ್ ಇಲಾಖೆಗೆ ಕಳಂಕ ತರುವ ಕೆಲಸ ಮಾಡಬಾರದು. ಇದು ನಮ್ಮ ಮನವಿ ಎಂದು ಇಳಕಲ್ ತಾಲ್ಲೂಕಿನ ಸಿದ್ದನಕೊಳ್ಳ ಮಠದ ಶಿವಕುಮಾರ ಸ್ವಾಮೀಜಿ ಸ್ಪಷ್ಟನೆ ನೀಡಿದ್ದಾರೆ.
ಕಾಲಿಗೆ ಬಿದ್ದವರಿಗೆ ವರ್ಗಾವಣೆ ಶಿಕ್ಷೆ
ಸ್ವಾಮೀಜಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದ ಪೊಲೀಸರನ್ನು ಬಾಗಲಕೋಟೆ ಎಸ್ಪಿ ಅಮರನಾಥ್ ರೆಡ್ಡಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಖಾಕಿ ಸಮವಸ್ತ್ರದಲ್ಲಿ ಆಶೀರ್ವಾದ ಪಡೆದಿದ್ದ ಆರು ಜನ ಪೊಲೀಸರನ್ನು ಬೇರೆ ಬೇರೆ ಕಡೆ ವರ್ಗಾವಣೆ ಮಾಡಲಾಗಿದೆ. ದುಡ್ಡು ಪಡೆದು ಸ್ವಾಮೀಜಿ ಆಶೀರ್ವಾದ ಪಡೆಯುವ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಭಾರಿ ವೈರಲ್ ಆಗಿದ್ದರಿಂದ ಸಾರ್ವಜನಿಕ ವಲಯದಲ್ಲಿ ಕೇವಲ ಇನ್ನೂರು ರೂ.ಗೆ ಈ ರೀತಿ ಕಾಲಿಗೆ ಬೀಳುತ್ತಾರೆಯೇ, ಛೀ ಥೂ ಎಂದು ವಿಷಯದ ಅರಿವಿಲ್ಲದ ಜನರು ಉಗಿದಿದ್ದರು.
A video showing police officers in uniform bowing down to Siddanakolla Shivakumar Swamiji and accepting money has gone viral on social media, sparking widespread discussions. While police officers paying respects to a Swamiji in uniform is one matter, accepting money in uniform… pic.twitter.com/tmqpkIRIMJ
— Karnataka Portfolio (@karnatakaportf) March 14, 2025
A video circulating on social media shows a group of policemen in Bagalkot, Karnataka, bowing and falling at the feet of a revered Swamiji after receiving cash gifts from him. The footage has sparked a wave of reactions online, with many expressing shock and curiosity about the tradition behind the act.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
15-02-26 04:01 pm
HK Desk
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
15-02-26 08:52 pm
Mangalore Correspondent
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am