ಬ್ರೇಕಿಂಗ್ ನ್ಯೂಸ್
15-03-25 09:18 pm HK News Desk ಕರ್ನಾಟಕ
ಕೊಪ್ಪಳ, ಮಾ.15 : ಕನಕಗಿರಿ ಕ್ಷೇತ್ರದ ಮಾಜಿ ಶಾಸಕ, ಹಾಲಿ ಕೊಪ್ಪಳ ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ದಡೇಸೂಗೂರು ಸರ್ಕಾರದ ಮಹಿಳಾ ಅಧಿಕಾರಿಯನ್ನು ಎರಡನೇ ಮದುವೆಯಾಗಿದ್ದಾರೆಯೇ ಎಂಬ ಗುಸು ಗುಸು ಜಿಲ್ಲೆಯಲ್ಲಿ ಹಬ್ಬಿದೆ.
ಉಪ ಲೋಕಾಯುಕ್ತ ಬಿ.ವೀರಪ್ಪ ಅವರು ವಿಜಯನಗರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಗೆ ಭೇಟಿ ಕೊಟ್ಟಾಗ ಅಲ್ಲಿದ್ದ ಉಪ ನಿರ್ದೇಶಕಿ ಶ್ವೇತಾ ಅವರನ್ನು ನಿನ್ನ ಗಂಡ ಯಾರಮ್ಮಾ.. ಏನ್ ಮಾಡ್ತಾರೆ ಅವರು ಅಂತ ಪ್ರಶ್ನೆ ಮಾಡಿದ್ದಾರೆ. ಈ ವೇಳೆ, ನನ್ನ ಪತಿ Politician, ಕನಕಗಿರಿಯ ಮಾಜಿ ಶಾಸಕರು, ಬಸವರಾಜ್ ದಡೆಸೂಗೂರ್ ಅಂತ ಒಪ್ಪಿಕೊಂಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಮಾಧ್ಯಮದವರ ಎದುರಲ್ಲೇ ಈ ರೀತಿ ಉತ್ತರ ಕೊಟ್ಟಿದ್ದು ಮಾಜಿ ಶಾಸಕ ದಡೇಸುಗೂರು ಮತ್ತೊಂದು ಮದುವೆಯಾಗಿದ್ದಾರೆಯೇ ಎಂಬ ವದಂತಿ ಹಬ್ಬುವಂತಾಗಿದೆ.
ಈ ಹಿಂದೆ ದಡೇಸೂಗೂರ್ ಶಾಸಕರಾಗಿದ್ದ ವೇಳೆ ಈ ಮಹಿಳಾ ಅಧಿಕಾರಿಯ ಜೊತೆಗಿನ ಮಾತುಗಳ ಆಡಿಯೋ ವೈರಲ್ ಆಗಿತ್ತು. ಇದರಿಂದ ಇವರ ನಡುವಿನ ಸಂಬಂಧ ಬಗ್ಗೆ ಗುಸು ಗುಸು ಹರಡಿತ್ತು. ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಯೇ ತನ್ನ ಗಂಡ ಮಾಜಿ ಶಾಸಕರು ಅಂತ ಹೇಳಿಕೊಂಡಿದ್ದಾರೆ.
ಹೊಸಪೇಟೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಗೆ ಉಪ ಲೋಕಾಯುಕ್ತ ಭೇಟಿ ನೀಡಿದಾಗ ಈ ಘಟನೆ ನಡೆದಿದೆ. ಬಸವರಾಜ ದಡೇಸೂಗೂರು ಕೊಪ್ಪಳ ಜಿಲ್ಲೆಯ ಕನಕಗಿರಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾಗಿದ್ದು ಸದ್ಯ ಕೊಪ್ಪಳ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿದ್ದಾರೆ.
A woman officer has made a startling disclosure that she is married to BJP former #MLA from #Kanakagiri, #BasavarajDadesugur, who is currently the #Koppal district president of the party. This has now led to speculation that the BJP leader may have married a second time secretly. pic.twitter.com/CsOlejfj6T
— Headline Karnataka (@hknewsonline) March 15, 2025
A woman officer has made a startling disclosure that she is married to BJP former MLA from Kanakagiri, Basavaraj Dadesugur, who is currently the Koppal district president of the party. This has now led to speculation that the BJP leader may have married a second time secretly.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm