ಬ್ರೇಕಿಂಗ್ ನ್ಯೂಸ್
18-12-20 11:56 am Headline Karnataka News Network ಕರ್ನಾಟಕ
ಬೆಂಗಳೂರು, ಡಿ.17: ಕೋವಿಡ್-19 ಹಿನ್ನೆಲೆಯಲ್ಲಿ ಕ್ರಿಸ್ಮಸ್ ಹಬ್ಬ ಮತ್ತು ಹೊಸ ವರ್ಷಾಚರಣೆ ಸಂದರ್ಭದಲ್ಲಿ ಪಾರ್ಟಿ ಮಾಡುವುದನ್ನು ನಿಷೇಧಿಸಲಾಗಿದೆ. ಚರ್ಚ್ ಹಾಗೂ ಹೊಟೇಲ್, ಮಾಲ್ ಮುಂತಾದ ಸಾರ್ವಜನಿಕ ಸ್ಥಳಗಳಲ್ಲಿ ಪಾರ್ಟಿ ಮಾಡುವಂತಿಲ್ಲ ಎಂದಿರುವ ರಾಜ್ಯ ಸರಕಾರ ಸರಕಾರ ಅದಕ್ಕಾಗಿ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
ಚರ್ಚ್ ಗಳಲ್ಲಿ ಪ್ರಾರ್ಥನೆ ವೇಳೆ ಒಂದೇ ಬಾರಿಗೆ ಹೆಚ್ಚು ಜನ ಸೇರದಂತೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಹಬ್ಬದ ಸಂದರ್ಭದಲ್ಲಿ ಹಸ್ತಲಾಘವ ಮತ್ತು ಆಲಿಂಗನ ಮಾಡುವಂತಿಲ್ಲ. ಡಿ.30 ರಿಂದ ಜ.2 ರವರೆಗೆ ಕ್ಲಬ್, ಪಬ್, ರೆಸ್ಟೋರೆಂಟ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪಾರ್ಟಿ ಮಾಡಲು ಅವಕಾಶ ಇಲ್ಲ. ಸಾಮಾಜಿಕ ಅಂತರವಿಲ್ಲದೇ ಹೆಚ್ಚು ಜನರು ಸೇರುವ, ಯಾವುದೇ ವಿಶೇಷ ಕಾರ್ಯಕ್ರಮಗಳಿಗೆ ಅವಕಾಶ ಇಲ್ಲ.


ಅಲ್ಲದೆ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳ, ಮುಖ್ಯ ರಸ್ತೆಗಳಲ್ಲಿ ದೈಹಿಕ ಅಂತವಿಲ್ಲದೇ ಜನರ ಸೇರುವಿಕೆಯನ್ನು ಹಾಗೂ ಸಂಭ್ರಮಾಚರಣೆಯನ್ನು ನಿಷೇಧಿಸಲಾಗಿದೆ. ಸರಕಾರದ ಮಾರ್ಗಸೂಚಿಯಂತೆ ಹಿರಿಯರು, ಮಕ್ಕಳು ಮನೆಯಲ್ಲಿಯೇ ಇರಬೇಕು. ಹಾಗೂ ಕ್ಲಬ್, ಮಾಲ್, ರೆಸ್ಟೋರೆಂಟ್ ಹಾಗೂ ಹೊಟೇಲ್ಗಳಲ್ಲಿ ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸರ್ ಕಡ್ಡಾಯವಾಗಿ ಮಾಡಬೇಕು ಹಾಗೂ ಜನರು ಹೆಚ್ಚು ಸೇರದಂತೆ ಜಾಗೃತಿ ವಹಿಸಬೇಕು. ಪ್ರಾಂಗಣ, ಕಟ್ಟಡ ಸಮುಚ್ಛಯದಲ್ಲಿ ಕಡ್ಡಾಯವಾಗಿ ದೈಹಿಕ ಅಂತರವನ್ನು ಪಾಲಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆಯ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಉಲ್ಲಂಘಿಸಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Christmas New Year 2020 government issues guidelines prohibit shaking of hands and hug. State chief secretary T M Vjay Bhaskar, has issued a circular containing the new guidelines. The guidelines say that the organisers should take steps to ensure that on Christmas, not too big crowd comes together in churches.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm