ಬ್ರೇಕಿಂಗ್ ನ್ಯೂಸ್
18-12-20 12:16 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.18: ವಿಧಾನ ಪರಿಷತ್ ಸದನದಲ್ಲಿ ಡಿ.15ರಂದು ನಡೆದ ಘಟನೆ ಹಿನ್ನೆಲೆಯಲ್ಲಿ ಮತ್ತು ಅಂದಿನ ಅಧಿವೇಶನ ಸಂದರ್ಭ ಬೇಜವಾಬ್ದಾರಿಯಿಂದ ವರ್ತಿಸಿದ ಆರೋಪದಲ್ಲಿ ವಿಧಾನ ಪರಿಷತ್ ಕಾರ್ಯದರ್ಶಿ ಕೆ.ಆರ್. ಮಹಾಲಕ್ಷ್ಮೀ ಅವರಿಗೆ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿಯವರು ಶೋಕಾಸ್ ನೋಟಿಸ್ ನೀಡಿದ್ದಾರೆ.
ಬುಧವಾರವೇ ನೋಟಿಸ್ ನೀಡಿರುವ ಸಭಾಪತಿ, ಸೂಕ್ತ ದಾಖಲೆಗಳೊಂದಿಗೆ 48 ಗಂಟೆಗಳೊಳಗೆ ಉತ್ತರ ನೀಡುವಂತೆ ಕಾರ್ಯದರ್ಶಿಗೆ ಸೂಚಿಸಿದ್ದಾರೆ. ‘‘ಡಿ.15ರಂದು ನಾನು ಸದನಕ್ಕೆ ಬರದಂತೆ ತಡೆದಿರುವುದು ಮತ್ತು ಕಲಾಪಗಳ ನಿಯಮಾವಳಿಗಳನ್ನು ಗಾಳಿಗೆ ತೂರಿ ವ್ಯತಿರಿಕ್ತವಾಗಿ ವರ್ತಿಸಿರುವ ಘಟನೆ ಕುರಿತು ಸಮೂಹ ಮಾಧ್ಯಮಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಈ ಘಟನೆಯಿಂದ ಶತಮಾನದ ಇತಿಹಾಸವುಳ್ಳ ವಿಧಾನ ಪರಿಷತ್ತಿನ ಗೌರವ, ಸಂಪ್ರದಾಯ ಮತ್ತು ಪರಂಪರೆಗೆ ಧಕ್ಕೆಯಾಗಿದೆ ಎಂದು ಸಭಾಪತಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.


ಡಿ.15ರಂದು ಕೋರಂ ಬೆಲ್ ಮುಗಿಯುವ ಮುನ್ನವೇ ಉಪ ಸಭಾಪತಿಯವರು ಸಭಾಪತಿ ಪೀಠ ಏರಿದ್ದರು. ನಾನು ಸದನಕ್ಕೆ ಬರದಂತೆ ಬಾಗಿಲು ಮುಚ್ಚಿ ಅಡ್ಡಿಪಡಿಸಲಾಗಿತ್ತು. ನಿಯಮಬಾಹಿರವಾಗಿ ಪೀಠದಲ್ಲಿ ಕುಳಿತಿದ್ದ ಉಪ ಸಭಾಪತಿಗೆ ದಾಖಲೆಗಳನ್ನು ಒದಗಿಸುವ ಮೂಲಕ, ಕಾನೂನಿಗೆ ವಿರುದ್ಧವಾಗಿ ಸದನ ನಡೆಸಲು ಪಿತೂರಿ ಮಾಡಿದ್ದನ್ನು ಹಲವು ಸಾಕ್ಷ್ಯಗಳಲ್ಲಿ ಗಮನಿಸಿರುತ್ತೇನೆ ಎಂದು ಸಭಾಪತಿ ನೋಟಿಸ್ ನಲ್ಲಿ ತಿಳಿಸಿದ್ದಾರೆ.
ನಿಯಮಬಾಹಿರ, ಕರ್ತವ್ಯ ನಿರ್ಲಕ್ಷ, ಬೇಜವಾಬ್ದಾರಿ ಮತ್ತು ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೆ ಅಧಿಕಾರ ವ್ಯಾಪ್ತಿ ಮೀರಿರುವ ನಿಮ್ಮ ವಿರುದ್ಧ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿ ಅಡಿಯಲ್ಲಿ ಏಕೆ ಕ್ರಮ ಜರುಗಿಸಬಾರದು?’’ ಎಂದು ನೋಟಿಸ್ನಲ್ಲಿ ಕೇಳಿದ್ದಾರೆ.

ಸಾರ್ವಜನಿಕ ಚರ್ಚೆ, ಟೀಕೆ, ಪತ್ರಿಕಾ ಸಂಪಾದಕೀಯಗಳು, ಸದನದ ಹಿಂದಿನ ಸಭಾಪತಿಯವರ ಅಭಿಪ್ರಾಯಗಳಿಗೆ ಸದನದ ಮುಖ್ಯಸ್ಥನಾದ ನಾನು ನೈಜ ಸಂಗತಿಗಳ ಆಧಾರದಲ್ಲಿ ವಿವರಣೆ ನೀಡಬೇಕಿದೆ. ಆದ್ದರಿಂದ ನಾನು ಸದನಕ್ಕೆ ಬಂದು ಕಲಾಪವನ್ನು ಮುಂದೂಡುವ ವರೆಗೆ ನನ್ನ ಅನುಪಸ್ಥಿತಿಯಲ್ಲಿ ಮತ್ತು ಕಲಾಪ ಮುಂದೂಡಿ ನಿರ್ಗಮಿಸಿದ ಬಳಿಕ ನಡೆದ ಘಟನಾವಳಿಗಳಿಗೆ ನೀವು ಪ್ರತ್ಯಕ್ಷದರ್ಶಿಯಾಗಿದ್ದಿರಿ. ಈ ಘಟನೆಗಳಿಗೆ ಸಂಬಂಧಿಸಿದ ಸಂಕ್ಷಿಪ್ತ ವರದಿಯನ್ನು ಕೂಡಲೇ ಸಲ್ಲಿಸಬೇಕು ಎಂದು ಪತ್ರದಲ್ಲಿ ಸಭಾಪತಿ ಸೂಚಿಸಿದ್ದಾರೆ.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 03:10 pm
HK News Staffer
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm