ಬ್ರೇಕಿಂಗ್ ನ್ಯೂಸ್
18-12-20 12:16 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.18: ವಿಧಾನ ಪರಿಷತ್ ಸದನದಲ್ಲಿ ಡಿ.15ರಂದು ನಡೆದ ಘಟನೆ ಹಿನ್ನೆಲೆಯಲ್ಲಿ ಮತ್ತು ಅಂದಿನ ಅಧಿವೇಶನ ಸಂದರ್ಭ ಬೇಜವಾಬ್ದಾರಿಯಿಂದ ವರ್ತಿಸಿದ ಆರೋಪದಲ್ಲಿ ವಿಧಾನ ಪರಿಷತ್ ಕಾರ್ಯದರ್ಶಿ ಕೆ.ಆರ್. ಮಹಾಲಕ್ಷ್ಮೀ ಅವರಿಗೆ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿಯವರು ಶೋಕಾಸ್ ನೋಟಿಸ್ ನೀಡಿದ್ದಾರೆ.
ಬುಧವಾರವೇ ನೋಟಿಸ್ ನೀಡಿರುವ ಸಭಾಪತಿ, ಸೂಕ್ತ ದಾಖಲೆಗಳೊಂದಿಗೆ 48 ಗಂಟೆಗಳೊಳಗೆ ಉತ್ತರ ನೀಡುವಂತೆ ಕಾರ್ಯದರ್ಶಿಗೆ ಸೂಚಿಸಿದ್ದಾರೆ. ‘‘ಡಿ.15ರಂದು ನಾನು ಸದನಕ್ಕೆ ಬರದಂತೆ ತಡೆದಿರುವುದು ಮತ್ತು ಕಲಾಪಗಳ ನಿಯಮಾವಳಿಗಳನ್ನು ಗಾಳಿಗೆ ತೂರಿ ವ್ಯತಿರಿಕ್ತವಾಗಿ ವರ್ತಿಸಿರುವ ಘಟನೆ ಕುರಿತು ಸಮೂಹ ಮಾಧ್ಯಮಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಈ ಘಟನೆಯಿಂದ ಶತಮಾನದ ಇತಿಹಾಸವುಳ್ಳ ವಿಧಾನ ಪರಿಷತ್ತಿನ ಗೌರವ, ಸಂಪ್ರದಾಯ ಮತ್ತು ಪರಂಪರೆಗೆ ಧಕ್ಕೆಯಾಗಿದೆ ಎಂದು ಸಭಾಪತಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.


ಡಿ.15ರಂದು ಕೋರಂ ಬೆಲ್ ಮುಗಿಯುವ ಮುನ್ನವೇ ಉಪ ಸಭಾಪತಿಯವರು ಸಭಾಪತಿ ಪೀಠ ಏರಿದ್ದರು. ನಾನು ಸದನಕ್ಕೆ ಬರದಂತೆ ಬಾಗಿಲು ಮುಚ್ಚಿ ಅಡ್ಡಿಪಡಿಸಲಾಗಿತ್ತು. ನಿಯಮಬಾಹಿರವಾಗಿ ಪೀಠದಲ್ಲಿ ಕುಳಿತಿದ್ದ ಉಪ ಸಭಾಪತಿಗೆ ದಾಖಲೆಗಳನ್ನು ಒದಗಿಸುವ ಮೂಲಕ, ಕಾನೂನಿಗೆ ವಿರುದ್ಧವಾಗಿ ಸದನ ನಡೆಸಲು ಪಿತೂರಿ ಮಾಡಿದ್ದನ್ನು ಹಲವು ಸಾಕ್ಷ್ಯಗಳಲ್ಲಿ ಗಮನಿಸಿರುತ್ತೇನೆ ಎಂದು ಸಭಾಪತಿ ನೋಟಿಸ್ ನಲ್ಲಿ ತಿಳಿಸಿದ್ದಾರೆ.
ನಿಯಮಬಾಹಿರ, ಕರ್ತವ್ಯ ನಿರ್ಲಕ್ಷ, ಬೇಜವಾಬ್ದಾರಿ ಮತ್ತು ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೆ ಅಧಿಕಾರ ವ್ಯಾಪ್ತಿ ಮೀರಿರುವ ನಿಮ್ಮ ವಿರುದ್ಧ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿ ಅಡಿಯಲ್ಲಿ ಏಕೆ ಕ್ರಮ ಜರುಗಿಸಬಾರದು?’’ ಎಂದು ನೋಟಿಸ್ನಲ್ಲಿ ಕೇಳಿದ್ದಾರೆ.

ಸಾರ್ವಜನಿಕ ಚರ್ಚೆ, ಟೀಕೆ, ಪತ್ರಿಕಾ ಸಂಪಾದಕೀಯಗಳು, ಸದನದ ಹಿಂದಿನ ಸಭಾಪತಿಯವರ ಅಭಿಪ್ರಾಯಗಳಿಗೆ ಸದನದ ಮುಖ್ಯಸ್ಥನಾದ ನಾನು ನೈಜ ಸಂಗತಿಗಳ ಆಧಾರದಲ್ಲಿ ವಿವರಣೆ ನೀಡಬೇಕಿದೆ. ಆದ್ದರಿಂದ ನಾನು ಸದನಕ್ಕೆ ಬಂದು ಕಲಾಪವನ್ನು ಮುಂದೂಡುವ ವರೆಗೆ ನನ್ನ ಅನುಪಸ್ಥಿತಿಯಲ್ಲಿ ಮತ್ತು ಕಲಾಪ ಮುಂದೂಡಿ ನಿರ್ಗಮಿಸಿದ ಬಳಿಕ ನಡೆದ ಘಟನಾವಳಿಗಳಿಗೆ ನೀವು ಪ್ರತ್ಯಕ್ಷದರ್ಶಿಯಾಗಿದ್ದಿರಿ. ಈ ಘಟನೆಗಳಿಗೆ ಸಂಬಂಧಿಸಿದ ಸಂಕ್ಷಿಪ್ತ ವರದಿಯನ್ನು ಕೂಡಲೇ ಸಲ್ಲಿಸಬೇಕು ಎಂದು ಪತ್ರದಲ್ಲಿ ಸಭಾಪತಿ ಸೂಚಿಸಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm