ಬ್ರೇಕಿಂಗ್ ನ್ಯೂಸ್
18-03-25 02:30 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.18: ರಸ್ತೆ ಕಾಮಗಾರಿ ವೇಳೆ ವಿದ್ಯುತ್ ಕಂಬ ಮುರಿದು ಬಿದ್ದು ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೈಯ್ಯಪ್ಪನಹಳ್ಳಿಯಲ್ಲಿ ನಡೆದಿದೆ. ಸುದ್ದಗುಂಟೆಪಾಳ್ಯ ನಿವಾಸಿಗಳಾದ ಸುಮತಿ (35) ಹಾಗೂ ಸೋನಿ ಕುಮಾರಿ (35) ಮೃತಪಟ್ಟಿದ್ದಾರೆ. ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ.
ಸುದ್ದಗುಂಟೆಪಾಳ್ಯ ಮುಖ್ಯರಸ್ತೆಯ ದುರಸ್ತಿ ಕಾಮಗಾರಿ ನಡೆಯುತ್ತಿದ್ದಾಗ ಜೆಸಿಬಿ ವಾಹನ ಹಿಮ್ಮುಖವಾಗಿ ಚಲಿಸುವಾಗ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಇದರಿಂದ ವಿದ್ಯುತ್ ಕಂಬ ಮುರಿದು ನಡೆದು ಬರುತ್ತಿದ್ದ ಇಬ್ಬರು ಮಹಿಳೆಯರ ಮೇಲೆ ಬಿದ್ದಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಓರ್ವ ಮಹಿಳೆ ನಾಲ್ಕು ತಿಂಗಳ ಗರ್ಭಿಣಿ:
ಬಿಹಾರದ ಸೋನಿ ಕುಮಾರಿ ಕಳೆದ ಎಂಟು ವರ್ಷಗಳಿಂದ ಇಬ್ಬರು ಮಕ್ಕಳೊಂದಿಗೆ ಬೆಂಗಳೂರಿನಲ್ಲಿ ನೆಲೆಸಿದ್ದರು. ಸದ್ಯ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದರು ಎಂದು ತಿಳಿದು ಬಂದಿದೆ. ತಮಿಳುನಾಡಿನ ಸುಮತಿ, ಪತಿ ಹಾಗೂ ಇಬ್ಬರು ಮಕ್ಕಳೊಂದಿಗೆ ಸುದ್ದಗುಂಟೆಪಾಳ್ಯದಲ್ಲಿ ನೆಲೆಸಿದ್ದರು. ಇಬ್ಬರೂ ಮಹಿಳೆಯರು ಸೋಮವಾರ ಸಂಜೆ ತಮ್ಮ ಮಕ್ಕಳನ್ನು ಟ್ಯೂಷನ್ನಿಂದ ಕರೆದುಕೊಂಡು ಬರುತ್ತಿದ್ದಾಗ ಅವಘಡ ಸಂಭವಿಸಿದೆ.
ರಸ್ತೆ ಕಾಮಗಾರಿಯ ವೇಳೆ ಜೆಸಿಬಿ ಡ್ರೈವರ್ ಕಿವಿಗೆ ಹೆಡ್ಫೋನ್ ಹಾಕಿಕೊಂಡು ಕೆಲಸ ಮಾಡುತ್ತಿದ್ದ. ಈ ವೇಳೆ ಲೈಟ್ ಕಂಬದಿಂದ ಮನೆಗೆ ಬೇರೆ ಕಡೆಗೆ ಕನೆಕ್ಟ್ ಮಾಡಿದ್ದ ವೈಯರ್ಗೆ ಜೆಸಿಬಿಯ ಮುಂಭಾಗ ಟಚ್ ಆಗಿದೆ. ಜನ ಜೋರಾಗಿ ಕೂಗಿಕೊಂಡರೂ ಡ್ರೈವರ್ ಕೇಳಿಸಿಕೊಳ್ಳದೇ ವೈಯರ್ ಎಳೆದಿರುವುದೇ ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ.
ಬೈಯ್ಯಪ್ಪನಹಳ್ಳಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ಜೆಸಿಬಿ ಯಂತ್ರವನ್ನು ಜಪ್ತಿ ಮಾಡಿದ್ದಾರೆ. ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಬೈಯಪ್ಪನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
JCB Driver Rams Into Electric Pole, Two killed Including Pregnant Woman in Bangalore at Sadduguntepalya.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm