ಬ್ರೇಕಿಂಗ್ ನ್ಯೂಸ್
18-03-25 02:30 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.18: ರಸ್ತೆ ಕಾಮಗಾರಿ ವೇಳೆ ವಿದ್ಯುತ್ ಕಂಬ ಮುರಿದು ಬಿದ್ದು ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೈಯ್ಯಪ್ಪನಹಳ್ಳಿಯಲ್ಲಿ ನಡೆದಿದೆ. ಸುದ್ದಗುಂಟೆಪಾಳ್ಯ ನಿವಾಸಿಗಳಾದ ಸುಮತಿ (35) ಹಾಗೂ ಸೋನಿ ಕುಮಾರಿ (35) ಮೃತಪಟ್ಟಿದ್ದಾರೆ. ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ.
ಸುದ್ದಗುಂಟೆಪಾಳ್ಯ ಮುಖ್ಯರಸ್ತೆಯ ದುರಸ್ತಿ ಕಾಮಗಾರಿ ನಡೆಯುತ್ತಿದ್ದಾಗ ಜೆಸಿಬಿ ವಾಹನ ಹಿಮ್ಮುಖವಾಗಿ ಚಲಿಸುವಾಗ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಇದರಿಂದ ವಿದ್ಯುತ್ ಕಂಬ ಮುರಿದು ನಡೆದು ಬರುತ್ತಿದ್ದ ಇಬ್ಬರು ಮಹಿಳೆಯರ ಮೇಲೆ ಬಿದ್ದಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಓರ್ವ ಮಹಿಳೆ ನಾಲ್ಕು ತಿಂಗಳ ಗರ್ಭಿಣಿ:
ಬಿಹಾರದ ಸೋನಿ ಕುಮಾರಿ ಕಳೆದ ಎಂಟು ವರ್ಷಗಳಿಂದ ಇಬ್ಬರು ಮಕ್ಕಳೊಂದಿಗೆ ಬೆಂಗಳೂರಿನಲ್ಲಿ ನೆಲೆಸಿದ್ದರು. ಸದ್ಯ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದರು ಎಂದು ತಿಳಿದು ಬಂದಿದೆ. ತಮಿಳುನಾಡಿನ ಸುಮತಿ, ಪತಿ ಹಾಗೂ ಇಬ್ಬರು ಮಕ್ಕಳೊಂದಿಗೆ ಸುದ್ದಗುಂಟೆಪಾಳ್ಯದಲ್ಲಿ ನೆಲೆಸಿದ್ದರು. ಇಬ್ಬರೂ ಮಹಿಳೆಯರು ಸೋಮವಾರ ಸಂಜೆ ತಮ್ಮ ಮಕ್ಕಳನ್ನು ಟ್ಯೂಷನ್ನಿಂದ ಕರೆದುಕೊಂಡು ಬರುತ್ತಿದ್ದಾಗ ಅವಘಡ ಸಂಭವಿಸಿದೆ.
ರಸ್ತೆ ಕಾಮಗಾರಿಯ ವೇಳೆ ಜೆಸಿಬಿ ಡ್ರೈವರ್ ಕಿವಿಗೆ ಹೆಡ್ಫೋನ್ ಹಾಕಿಕೊಂಡು ಕೆಲಸ ಮಾಡುತ್ತಿದ್ದ. ಈ ವೇಳೆ ಲೈಟ್ ಕಂಬದಿಂದ ಮನೆಗೆ ಬೇರೆ ಕಡೆಗೆ ಕನೆಕ್ಟ್ ಮಾಡಿದ್ದ ವೈಯರ್ಗೆ ಜೆಸಿಬಿಯ ಮುಂಭಾಗ ಟಚ್ ಆಗಿದೆ. ಜನ ಜೋರಾಗಿ ಕೂಗಿಕೊಂಡರೂ ಡ್ರೈವರ್ ಕೇಳಿಸಿಕೊಳ್ಳದೇ ವೈಯರ್ ಎಳೆದಿರುವುದೇ ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ.
ಬೈಯ್ಯಪ್ಪನಹಳ್ಳಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ಜೆಸಿಬಿ ಯಂತ್ರವನ್ನು ಜಪ್ತಿ ಮಾಡಿದ್ದಾರೆ. ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಬೈಯಪ್ಪನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
JCB Driver Rams Into Electric Pole, Two killed Including Pregnant Woman in Bangalore at Sadduguntepalya.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm