ಬ್ರೇಕಿಂಗ್ ನ್ಯೂಸ್
19-03-25 12:44 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.19 : ''ಹೆಂಗಸರಿಗೆ ಮಾಸಿಕ 2 ಸಾವಿರ, ಓಡಾಟಕ್ಕೆ ಬಸ್ ಫ್ರೀ ಎಲ್ಲವನ್ನೂ ಕೊಟ್ಟಿದ್ದೀರಿ. ಇದಕ್ಕೆ ಕೊಡುತ್ತಿರುವುದು ಖಜಾನೆ ದುಡ್ಡು ಅಲ್ಲವೇ? ಹೆಂಗಸರಿಗೆ ಖುಷಿಪಡಿಸುವಂತೆ ಕುಡಿಯುವ ಗಂಡಸರಿಗೂ ವಾರಕ್ಕೆ ಎರಡು ಬಾಟಲಿ ಮದ್ಯ ಫ್ರೀ ಕೊಡಿ. ಸೊಸೈಟಿಗಳ ಮೂಲಕ ಇದನ್ನು ಹಂಚಿಕೆ ಮಾಡಿ. ಹೀಗೆಂದು ಜೆಡಿಎಸ್ ಶಾಸಕ ಎಂ.ಟಿ ಕೃಷ್ಣಪ್ಪ ಕಾಂಗ್ರೆಸ್ ಸರ್ಕಾರಕ್ಕೆ ಸಲಹೆ ಮಾಡಿದ್ದಾರೆ.
ಬಜೆಟ್ ಮೇಲಿನ ಚರ್ಚೆ ಸಂದರ್ಭದಲ್ಲಿ ಸರಕಾರ ಮದ್ಯ ಮಾರಾಟದ ಟಾರ್ಗೆಟ್ ಹೆಚ್ಚಿಸಿ, ಅಬಕಾರಿ ಆದಾಯವನ್ನು 40 ಸಾವಿರ ಕೋಟಿಗೆ ನಿಗದಿ ಮಾಡಿರುವುದು ಪಾಪದ ಕೆಲಸವಲ್ಲವೇ? ಹೆಂಗಸರಿಗೆ ಫ್ರೀ ಕೊಟ್ಟು ಗಂಡಸರಿಂದ ಹಣ ಪೀಕುವುದು ತಪ್ಪಲ್ಲವೇ? ಸಂಪೂರ್ಣ ಪಾನ ನಿಷೇಧ ಜಾರಿ ಏಕೆ ಸಾಧ್ಯವಿಲ್ಲ? ಇಂತಹ ಹಲವು ವಾದ -ಪ್ರತಿವಾದಗಳಿಗೆ ವಿಧಾನಸಭೆ ಸಾಕ್ಷಿಯಾಯ್ತು. ಈ ವೇಳೆ, ಜೆಡಿಎಸ್ ಶಾಸಕ ಎಂಟಿ ಕೃಷ್ಣಪ್ಪ ಮತ್ತು ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ್ ಅಬಕಾರಿ ಸುಂಕ ಹೆಚ್ಚಿಸಿ ಮದ್ಯದ ಮೂಲಕ ಆದಾಯ ಸಂಗ್ರಹಕ್ಕಿಳಿದಿರುವುದನ್ನು ವಿರೋಧಿಸಿದರು. ಅಲ್ಲದೆ, ಸಂಪೂರ್ಣ ಮದ್ಯ ನಿಷೇಧ ಯಾಕೆ ಸಾಧ್ಯವಿಲ್ಲ ಎಂದು ಪ್ರಶ್ನಿಸಿದರು.
ಕೃಷ್ಣಪ್ಪ ಮಾತಿಗೆ, ಮುಂದೆ ಚುನಾವಣೆಯಲ್ಲಿ ಗೆದ್ದು ಬಂದು ಮದ್ಯ ನಿಷೇಧ ಮಾಡಿ ಎಂದು ಸಚಿವ ಕೆ.ಜೆ.ಜಾರ್ಜ್ ಸಲಹೆ ಮಾಡಿದರು. ''ಈಗಲೇ ಈ ಸ್ಥಿತಿಯಾಗಿದೆ, ಇನ್ನು ಫ್ರೀ ಮದ್ಯ ಕೊಟ್ಟರೆ ಏನಾಗಬಹುದು? ಎಂದು ಸ್ಪೀಕರ್ ಹಾಸ್ಯ ಚಟಾಕಿ ಹಾರಿಸಿದರು. ತಮ್ಮ ವಾದವನ್ನು ಬಿಟ್ಟುಕೊಡದ ಕೃಷ್ಣಪ್ಪ, ''ಈಗೇನಾಗಿದೆ? ನಮ್ಮ 224 ಶಾಸಕರಲ್ಲಿ ಯಾರು ಕುಡಿಯಲ್ಲಾ ಹೇಳಿಬಿಡಲಿ ಎಂದು ಮರು ಪ್ರಶ್ನೆ ಹಾಕಿದರು. ಈ ಮಾತಿಗೆ ಜೆಡಿಎಸ್ ಗುಂಪಿನ ಉಪನಾಯಕಿ ಶಾರದಾ ನಾಯಕ್, 224 ಶಾಸಕರು ಎಂದು ನಮ್ಮನ್ನೂ ಯಾಕೆ ಸೇರಿಸಿಕೊಳ್ತೀರಿ ಎಂದು ಆಕ್ಷೇಪಿಸಿದರು.
ಆಡಳಿತಾರೂಢ ಕಾಂಗ್ರೆಸ್ನ ಬಿ.ಆರ್.ಪಾಟೀಲ್ ಮಾತನಾಡಿ, ನಮ್ಮ ಭಾಗದ ಮಹಿಳೆಯರು ಅನ್ನಭಾಗ್ಯ, ಗೃಹಲಕ್ಷ್ಮೀ ಸೇರಿ ಯಾವ ಉಚಿತ ಯೋಜನೆಯೂ ಬೇಡ ಸ್ವಾಮಿ.. ಮದ್ಯ ಮಾರಾಟ ಬಂದ್ ಮಾಡಿ. ನಮ್ಮ ಸಂಸಾರ ಉಳಿಸಿ ಎಂದು ಬೇಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೂ ತಂದಿದ್ದೇನೆ. ಆದರೆ, ಕೇಳಿಲ್ಲ ಎಂದು ಅಲವತ್ತುಕೊಂಡರು. ''ನನಗೊಂದು ವೇಳೆ ಸರ್ವಾಧಿಕಾರಿಯಾಗುವ ಅವಕಾಶ ಸಿಕ್ಕರೆ ಎರಡು ತಾಸಿನಲ್ಲಿ ಸಂಪೂರ್ಣ ಪಾನ ನಿಷೇಧ ಜಾರಿ ಮಾಡುತ್ತೇನೆ. ಪಾಪದ ಹಣದಿಂದ ಅಭಿವೃದ್ಧಿ ಮಾಡಬೇಕೇ? ಎಂದು ಪ್ರಶ್ನೆ ಮಾಡಿದರು.
Legislative Assembly Sparks Heated Debate Over Alcohol Ban. "Just like women are given free, give men two free bottles a week..." "Women are asking for no freebies, ban alcohol." Heated debate in the Legislative Assembly over alcohol ban. Make news tittle
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm