ಬ್ರೇಕಿಂಗ್ ನ್ಯೂಸ್
18-12-20 01:19 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.18: ಕೊರೊನಾ ಸೋಂಕಿನ ಕಾರಣದಿಂದ ಸ್ಥಗಿತಗೊಂಡಿರುವ ಶಾಲೆಗಳನ್ನು ಹೊಸ ವರ್ಷಕ್ಕೆ ಆರಂಭಿಸಲು ಶಿಕ್ಷಣ ಇಲಾಖೆ ತಯಾರಿ ನಡೆಸಿದೆ. ಈಗಾಗ್ಲೇ ಪ್ರಾಥಮಿಕ ಶಾಲೆಗಳ ವಿದ್ಯಾಗಮ ಯೋಜನೆಗೆ ಗ್ರೀನ್ ಸಿಗ್ನಲ್ ನೀಡಿರುವ ಶಿಕ್ಷಣ ಇಲಾಖೆ, ಜ.1ರಿಂದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ತರಗತಿಗಳನ್ನು ಆರಂಭಿಸಲು ನಿರ್ಧರಿಸಿದೆ.
ಕೊರೊನಾ ಸೋಂಕಿನ ಪ್ರಮಾಣ ತಗ್ಗಿರುವುದು ಮತ್ತು 2ನೇ ಅಲೆಯ ತೀವ್ರತೆ ಕಡಿಮೆ ಇರುವ ಕಾರಣ ಬೋರ್ಡ್ ಪರೀಕ್ಷೆ ಇರುವ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ಜನವರಿ ಆರಂಭದಲ್ಲಿಯೇ ಆರಂಭಿಸಲು ಶಿಕ್ಷಣ ಇಲಾಖೆಗೆ ಕೊರೊನಾ ಸಲಹಾ ಮಂಡಳಿ ಸರಕಾರಕ್ಕೆ ವರದಿ ನೀಡಿದೆ. ಅಲ್ಲದೆ, 15 ದಿನಗಳ ಬಳಿಕ 9ನೇ ತರಗತಿ ಮತ್ತು ಮೊದಲ ಪಿಯು ತರಗತಿಗಳನ್ನೂ ಆರಂಭಿಸುವಂತೆ ಸಲಹೆ ಮಾಡಿದೆ. ಇದಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೂಡ ಒಪ್ಪಿಗೆ ನೀಡಿದ್ದು ಮುಖ್ಯಮಂತ್ರಿ ಜೊತೆ ಚರ್ಚಿಸಿ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದಾರೆ.


ಕೊರೊನಾ ತಾಂತ್ರಿಕ ಮತ್ತು ಸಲಹಾ ಸಮಿತಿ ತಜ್ಞರು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸುರೇಶ್ ಕುಮಾರ್ ಸಭೆ ನಡೆಸಿದ್ದು, ಅಧಿಕಾರಿಗಳ ಅಭಿಪ್ರಾಯ ಪಡೆದಿದ್ದಾರೆ. ಕೊರೊನಾ ಸೋಂಕಿನ ಪ್ರಮಾಣ, ಮರಣದ ಪ್ರಮಾಣ, ಹರಡುವಿಕೆ ಇತ್ಯಾದಿ ವಿಷಯಗಳ ಬಗ್ಗೆ ಸಚಿವರು ವರದಿ ತರಿಸಿಕೊಂಡಿದ್ದಾರೆ. ಅಲ್ಲದೆ, ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ದೃಷ್ಟಿಯಿಂದ ಶೀಘ್ರದಲ್ಲೇ ಶಾಲೆ ಆರಂಭಿಸುವುದು ಸೂಕ್ತ ಎಂದು ಅಧಿಕಾರಿಗಳು ಅಭಿಪ್ರಾಯ ನೀಡಿದ್ದಾರೆ. ಮಕ್ಕಳ ಆರೋಗ್ಯದ ದೃಷ್ಟಿಯಿಂದ 1ರಿಂದ 5ನೇ ತರಗತಿ ವರೆಗಿನ ಮಕ್ಕಳಿಗೆ ವಿದ್ಯಾಗಮ ನಡೆಸುವುದು ಬೇಡ ಎಂದು ತಜ್ಞರು ವರದಿ ನೀಡಿದ್ದಾರೆ. 6ರಿಂದ 8ನೇ ತರಗತಿ ವರೆಗಿನ ಮಕ್ಕಳಿಗೆ ಸುರಕ್ಷತಾ ಕ್ರಮಗಳೊಂದಿಗೆ ವಿದ್ಯಾಗಮ ನಡೆಸುವುದು ಉತ್ತಮ ಎಂದು ಸಲಹೆ ಮಾಡಿದ್ದಾರೆ.
The Karnataka Education Department is making its preparations to commence SSLC and PUC in 2021 which was halted after coronavirus lockdown.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm