ಬ್ರೇಕಿಂಗ್ ನ್ಯೂಸ್
21-03-25 05:46 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.21 : ವಿಧಾನಸಭೆಯಲ್ಲಿ ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ 18 ಮಂದಿ ಬಿಜೆಪಿ ಶಾಸಕರನ್ನು ಸ್ಪೀಕರ್ ಯುಟಿ ಖಾದರ್ ಮುಂದಿನ 6 ತಿಂಗಳ ಅವಧಿಗೆ ಕಲಾಪದಿಂದ ಅಮಾನತು ಮಾಡಿದ್ದಾರೆ.
ಬಿಜೆಪಿ ಶಾಸಕರಾದ ಭೈರತಿ ಬಸವರಾಜ, ಡಾ. ಶೈಲೇಂದ್ರ ಬೆಲ್ದಾಳೆ, ಮುನಿರತ್ನ, ಧೀರಜ್ ಮುನಿರತ್ನ, ಬಿಪಿ ಹರೀಶ್, ಡಾ. ಭರತ್ ಶೆಟ್ಟಿ, ಚಂದ್ರು ಲಮಾಣಿ, ಉಮಾನಾಥ ಕೋಟ್ಯಾನ್, ರಾಮಮೂರ್ತಿ, ದೊಡ್ಡನಗೌಡ ಪಾಟೀಲ್, ಡಾ. ಅಶ್ವತ್ಥ್ ನಾರಾಯಣ, ಯಶಪಾಲ್ ಸುವರ್ಣ, ಬಿ. ಸುರೇಶ್ ಗೌಡ, ಶರಣು ಸಲಗರ, ಚನ್ನಬಸಪ್ಪ, ಬಸವರಾಜ ಮತ್ತಿಮೂಡ, ಎಸ್.ಆರ್ ವಿಶ್ವನಾಥ್ ಅವರನ್ನು ಪತ್ತೆಹಚ್ಚಿ ಆರು ತಿಂಗಳ ಕಾಲ ಸದನಕ್ಕೆ ಬಾರದಂತೆ ತಡೆಹಿಡಿದು ಸ್ಪೀಕರ್ ಯುಟಿ ಖಾದರ್ ವಿಧಾನಸಭೆ ನಡವಳಿಕೆ ನಿಯಮಾವಳಿ ಪ್ರಕಾರ ಆದೇಶ ಮಾಡಿದ್ದಾರೆ.




48 ಮಂದಿ ಜನಪ್ರತಿನಿಧಿಗಳ ಹನಿಟ್ರ್ಯಾಪ್ ಆಗಿರುವ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಸದಸ್ಯರು ಧರಣಿ ನಡೆಸಿದ್ದರು. ಈ ಸಂದರ್ಭದಲ್ಲಿ ಸ್ಪೀಕರ್ ಪೀಠದ ಮೇಲೆ ಏರಿ ಗದ್ದಲ ಉಂಟು ಮಾಡಿದ್ದರು. ಬಜೆಟ್ ಪ್ರತಿಗಳನ್ನು ಹರಿದು ಸ್ಪೀಕರ್ ಪೀಠಕ್ಕೆ ಎಸೆದಿದ್ದರು. ಬಳಿಕ ಸದನವನ್ನು ಮುಂದೂಡಲಾಗಿತ್ತು. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ, ಸ್ಪೀಕರ್ ಖಾದರ್ ಮತ್ತು ಹಿರಿಯ ಸಚಿವರು ಕುಳಿತು ಸಭೆ ನಡೆಸಿದ್ದು ಅಮಾನತು ನಿರ್ಧಾರ ಕೈಗೊಂಡಿದ್ದಾರೆ. ಭೋಜನ ವಿರಾಮ ಬೆನ್ನಲ್ಲೇ ಸ್ಪೀಕರ್, ಬಿಜೆಪಿ ಶಾಸಕರ ಅಮಾನತು ನಿರ್ಣಯ ಪ್ರಕಟಿಸಿದ್ದಾರೆ.
ಅಮಾನತು ಅವಧಿಯಲ್ಲಿ ವಿಧಾನಸಭೆ ಸಭಾಂಗಣ, ಗ್ಯಾಲರಿ ಪ್ರವೇಶಿಸುವಂತಿಲ್ಲ. ಸ್ಥಾಯಿ ಸಮಿತಿ ಸಭೆಗಳಲ್ಲಿ ಪಾಲ್ಗೊಳ್ಳುವಂತಿಲ್ಲ. ಅಮಾನತು ಸಂದರ್ಭದಲ್ಲಿ ಯಾವುದೇ ಸಮಿತಿಯ ಚುನಾವಣೆಯಲ್ಲಿ ಭಾಗವಹಿಸುವಂತಿಲ್ಲ. ಯಾವುದೇ ದಿನ ಭತ್ಯೆಯನ್ನು ಪಡೆಯಲು ಅರ್ಹರಿರುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
A huge uproar in the Karnataka assembly led to the suspension of 18 BJP MLAs, who were demanding a judicial probe into the alleged "honey-trap" attempt involving a minister and other politician. The opposition BJP and JD(S) created a ruckus in the assembly on Friday, prompting speaker UT Khader to suspend them for six months for "disrespecting" the Chair.
After Khader's order, all the suspended MLAs were forcefully carried out of the House.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm