ಬ್ರೇಕಿಂಗ್ ನ್ಯೂಸ್
21-03-25 10:35 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.21 : ಬೆಳ್ತಂಗಡಿ ತಾಲೂಕಿನ ಉಜಿರೆಯ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಕುರಿತಂತೆ ಎಂ.ಡಿ. ಸಮೀರ್ ಎಂಬವರು ದೂತ ಹೆಸರಿನ ಯೂಟ್ಯೂಬ್ ಚಾನೆಲ್ ನಲ್ಲಿ ಪ್ರಸಾರ ಮಾಡಿದ್ದ ವಿಡಿಯೋವನ್ನು ತೆಗೆಯುವಂತೆ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಎ.ಎಸ್.ಸುಕೇಶ್ ಮತ್ತು ಶೀನಪ್ಪ ಎಂಬವರು ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ.
ಅಲ್ಲದೆ, ಪ್ರತಿವಾದಿ ಎಂ.ಡಿ.ಸಮೀರ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮತ್ತವರ ಕುಟುಂಬಸ್ಥರ ವಿರುದ್ಧವಾಗಿ ಯಾವುದೇ ಮಾದರಿಯಲ್ಲಿ ಆಧಾರ ರಹಿತ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ ನಿರ್ಬಂಧಕಾಜ್ಞೆ ವಿಧಿಸಿ ಆದೇಶಿಸಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ''ಸಮೀರ್ ಮಾಡಿರುವ ವಿಡಿಯೋಗೆ ಅರ್ಜಿದಾರರ ವಿರುದ್ಧವಾಗಿರುವವರು ಪ್ರಾಯೋಜಕತ್ವ ವಹಿಸಿದ್ದಾರೆ. ಸಂವಿಧಾನದ 19(1)(ಎ) ವಿಧಿಯಡಿ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಲಭ್ಯವಿದ್ದರೂ ಸಂವಿಧಾನದ 19(2)ನೇ ವಿಧಿಯಡಿ ಈ ಸ್ವಾತಂತ್ರ್ಯ ಪರಿಪೂರ್ಣವಲ್ಲ. ಸಕಾರಣಗಳಿದ್ದಾಗ ಅದರ ಮೇಲೆ ನಿರ್ಬಂಧ ವಿಧಿಸಬಹುದಾಗಿದ್ದು, ಮಾನಹಾನಿಯಂತಹ ಸಂದರ್ಭದಲ್ಲಿ ನಿರ್ಬಂಧ ಮಾಡಬಹುದಾಗಿದೆ. ಸಮೀರ್ ವಿಡಿಯೋದಲ್ಲಿನ ವಿಷಯವು ಸುಳ್ಳಾಗಿದ್ದು, ಅದು ಮಾನಹಾನಿ ಆಗುವ ರೀತಿಯಿದೆ ಎಂದು ಆಕ್ಷೇಪಿಸಿದ್ದರು.
ವಿಡಿಯೋ ಹಿನ್ನೆಲೆಯಲ್ಲಿ ಬಳ್ಳಾರಿ ಪೊಲೀಸರು ಯೂಟ್ಯೂಬರ್ ಸಮೀರ್ ವಿರುದ್ಧ ಪ್ರಕರಣ ದಾಖಲಿಸಿ, ನೋಟಿಸ್ ಜಾರಿ ಮಾಡಿದ್ದರು. ಬಳಿಕ ಪೊಲೀಸ್ ನೋಟಿಸ್ ಮತ್ತು ಎಫ್ಐಆರ್ಗೆ ಹೈಕೋರ್ಟ್ ತಡೆಯಾಜ್ಞೆ ವಿಧಿಸಿತ್ತು. ಈ ನಡುವೆ, ಕೊಲೆಯಾದ ವಿದ್ಯಾರ್ಥಿನಿ ಸೌಜನ್ಯಾಗೆ ನ್ಯಾಯ ಒದಗಿಸುವ ಹೆಸರಿನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ನಿರಾಕರಿಸಿದ್ದ ಸರ್ಕಾರದ ಕ್ರಮವನ್ನು ಬದಿಗಿರಿಸಿ, ಪ್ರತಿಭಟನೆಗೆ ಹೈಕೋರ್ಟ್ ಅನುಮತಿಸಿತ್ತು.
In a significant legal development, the first part of the video titled "Sowjanya" by Sameer MD has been removed from YouTube after a court issued an order for its deletion. The ruling comes in response to complaints regarding the content of the video, which has sparked considerable controversy and debate. Taking to Instagram, he informed his followers that the video is no longer accessible, and when users try to view it, YouTube displays the message: "This video is unavailable."
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm