ಬ್ರೇಕಿಂಗ್ ನ್ಯೂಸ್
23-03-25 09:50 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.23: ರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್ ಪ್ರಕರಣ ಕೋಲಾಹಲ ಸೃಷ್ಟಿಸಿದೆ. ಇದರ ಬೆನ್ನಲ್ಲೇ ರಾಜಕಾರಣಿಗಳ ನಡೆಯ ಬಗ್ಗೆ ಬೇಸರಗೊಂಡು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ವಿಧಾನ ಪರಿಷತ್ ಉಪಸಭಾಪತಿ ಪ್ರಾಣೇಶ್ ಅವರಿಗೆ ಹೊರಟ್ಟಿ ರಾಜಿನಾಮೆ ಪತ್ರ ಕಳಿಸಿದ್ದಾರೆ ಎನ್ನಲಾಗುತ್ತಿದೆ.
ಆದರೆ ಹುಬ್ಬಳ್ಳಿಯಲ್ಲಿ ಮಾತನಾಡಿರುವ ಹೊರಟ್ಟಿ ರಾಜಿನಾಮೆಗೆ ನಿರ್ಧಾರ ಮಾಡಿದ್ದು ಸತ್ಯ, ಆದರೆ ನನ್ನ ಸಹಿ ಮಾಡಿರುವ ಪತ್ರವನ್ನು ಇನ್ನೂ ರವಾನೆ ಮಾಡಿಲ್ಲ. ಸ್ನೇಹಿತರು ರಾಜಿನಾಮೆ ಬಗ್ಗೆ ಪುನರ್ ವಿಮರ್ಶೆ ಮಾಡಲು ಹೇಳಿದ್ದಾರೆ. 2-3 ದಿನದಲ್ಲಿ ಯೋಚಿಸಿ ನಿರ್ಧಾರಕ್ಕೆ ಬರುತ್ತೇನೆ ಎಂದಿದ್ದಾರೆ.
ಬೆಳಗ್ಗೆ ಮಾತನಾಡಿದ್ದ ಹೊರಟ್ಟಿ ಅವರು, ಸದನದ ಗೌರವ ಕಳೆದು ಹೋಗಿ ಬಹಳ ದಿನ ಆಗಿದೆ. ಇಂತಹ ಸಮಯದಲ್ಲಿ ಸಭಾಪತಿಯಾಗಿ ಮುಂದುವರೆಯುವದೋ ಬೇಡವೋ ಎಂಬ ಗೊಂದಲ ಉಂಟಾಗಿದೆ. ಬಹುತೇಕ ಸದಸ್ಯರಿಗೆ ಸದನದ ಘನತೆ-ಗೌರವ ಗೊತ್ತಿಲ್ಲ. ಸದನದ ಸದಸ್ಯರ ವರ್ತನೆಯಿಂದ ಬೇಸತ್ತು ಹೋಗಿದೆ ಎಂದಿದ್ದರು.
ಸದನದಲ್ಲಿ ಮೊನ್ನೆ ನಡೆದ ಘಟನೆ ಮನಸ್ಸಿಗೆ ಬಹಳ ನೋವಾಗಿದೆ. ಕುರ್ಚಿ ಆಸೆಗೆ ಕೂರೋದು ಸರಿಯಲ್ಲ ಅಂತ ಅನ್ನಿಸಿದೆ. ನನ್ನ ಆಪ್ತರು ನನಗೆ ರಾಜೀನಾಮೆ ನೀಡಬೇಡಿ ಅಂತ ಒತ್ತಾಯ ಮಾಡ್ತಿದ್ದಾರೆ. ಹೀಗಾಗಿ ನಾನು ಸ್ವಲ್ಪ ವಿಚಾರ ಮಾಡ್ತೇನೆ. ಇನ್ನು ಮೂರ್ನಾಲ್ಕು ದಿನದಲ್ಲಿ ರಾಜೀನಾಮೆ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಬಸವರಾಜ ಹೊರಟ್ಟಿ ಅವರು ತಿಳಿಸಿದ್ದಾರೆ.
Basavaraj Horatti, Chairman of the Legislative Council said he was considering resigning from his post as he was upset with the fall in the standard of debate in the State legislature. “These are bad times. The quality of debates in the Council and Assembly is falling. Even the general behaviour of members is deteriorating. That issues like honey-trap are surfacing in the session demonstrate the quality of our debates.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
15-02-26 04:01 pm
HK Desk
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
15-02-26 08:52 pm
Mangalore Correspondent
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am