ಬ್ರೇಕಿಂಗ್ ನ್ಯೂಸ್
23-03-25 11:01 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.23 : ಚಿನ್ನದ ರಿಕವರಿ ಹೆಸರಲ್ಲಿ ಚಿನ್ನದ ಗಟ್ಟಿ ಪಡೆದು ದುರ್ಬಳಕೆ ಮಾಡಿದ ಆರೋಪದಲ್ಲಿ ಪಿಎಸ್ಐ ಓರ್ವರನ್ನು ಅಮಾನತು ಮಾಡಿರುವ ಘಟನೆ ನಡೆದಿದೆ.
ಕಾಟನ್ ಪೇಟೆ ಠಾಣೆಯ ಪಿಎಸ್ಐ ಸಂತೋಷ್ ಅಮಾನತಾಗಿದ್ದು ಬೆಂಗಳೂರು ಪೊಲೀಸ್ ಕಮಿಷನರ್ ದಯಾನಂದ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಸಂತೋಷ್ ಅವರು 2022ರಲ್ಲಿ ಹೊಸೂರು ಗೇಟ್ ಠಾಣೆ ಪಿಎಸ್ಐ ಆಗಿದ್ದಾಗ ಪ್ರಕರಣ ಒಂದರಲ್ಲಿ ರಿಕವರಿ ಮಾಡಿದ್ದ ಚಿನ್ನವನ್ನು ದುರ್ಬಳಕೆ ಮಾಡಿಕೊಂಡಿದ್ದರು ಎಂಬ ಆರೋಪ ಕೇಳಿಬಂದಿದೆ.
ಚಿನ್ನದ ಅಂಗಡಿ ಮಾಲೀಕರೊಬ್ಬರ ಬಳಿ ರಿಕವರಿ ಚಿನ್ನ ತೋರಿಸಬೇಕಿದೆ ಎಂದು ಹೇಳಿ 950 ಗ್ರಾಂ ಚಿನ್ನದ ಗಟ್ಟಿ ಕೊಡು, ಫೋಟೋ ತೆಗೆಸಿ ಹಿಂದಿರುಗಿಸುತ್ತೇನೆ ಎಂದು ಹೇಳಿ ಚಿನ್ನದ ಗಟ್ಟಿ ಪಡೆದು ಎಸ್ಕೇಪ್ ಆಗಿದ್ದರು. ಬಳಿಕ ಅಂಗಡಿ ಮಾಲೀಕ ಚಿನ್ನ ಕೇಳಿದಾಗ ಹಣ ಕೊಡುತ್ತೇನೆಂದು ಚೆಕ್ ಕೊಟ್ಟಿದ್ದರು. ಆದರೆ ಚೆಕ್ ಬೌನ್ಸ್ ಆಗಿತ್ತು. ಮತ್ತೆ ಚಿನ್ನದ ಅಂಗಡಿ ಮಾಲೀಕ ಕೇಳಿದಾಗ ಬೆದರಿಕೆ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಪಿಎಸ್ ಐ ಮೇಲೆ ದೂರು ದಾಖಲಾಗಿತ್ತು. ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ಪಿಎಸ್ ಐ ಸಂತೋಷ್ ಅವರನ್ನು ಅಮಾನತು ಮಾಡಲಾಗಿದೆ.
ಚಿನ್ನದ ಅಂಗಡಿ ಮಾಲೀಕನಿಗೆ ಬೆದರಿಕೆ
ಈ ನಡುವೆ ಜಮೀನಿನ ಕರಾರು ಪತ್ರವನ್ನು ಚಿನ್ನದ ಅಂಗಡಿ ಮಾಲೀಕನಿಗೆ ಸಂತೋಷ್ ನೀಡಿದ್ದರು. ಆದರೆ ಆ ಜಾಗವನ್ನು ಬೇರೆಯವರಿಗೆ ಮಾರಾಟ ಮಾಡಿದ್ದರು. ಇದನ್ನು ಚಿನ್ನದ ಅಂಗಡಿ ಮಾಲೀಕ ಪ್ರಶ್ನಿಸಿದ ವೇಳೆ ಆತನಿಗೆ ಇನ್ಸ್ಪೆಕ್ಟರ್ ಸಂತೋಷ್ ಖಾಲಿ ಚೆಕ್ ನೀಡಿದ್ದರು. ನಂತರ, ಚೆಕ್ ಕೂಡ ಬೌನ್ಸ್ ಆಗಿತ್ತು. ಮತ್ತೆ ಹಣ ಅಥವಾ ಚಿನ್ನ ಕೇಳಿದಾಗ ಸಂತೋಷ್ ಅವರು ಚಿನ್ನದ ಅಂಗಡಿ ಮಾಲೀಕನಿಗೆ ಬೆದರಿಕೆ ಹಾಕಿದ್ದರು. ಹೀಗಾಗಿ, ಹಲಸೂರು ಗೇಟ್ ಠಾಣೆಯಲ್ಲಿ ಪಿಎಸ್ಐ ಸಂತೋಷ್ ವಿರುದ್ಧ ಅಧಿಕಾರ ದುರುಪಯೋಗ ಮತ್ತು ವಂಚನೆ ಪ್ರಕರಣ ದಾಖಲಾಗಿತ್ತು.
Bangalore 950 Grams of Gold Seized in Recovery Scam, Cottonpet Police station PSI Santosh Suspended Following FIR.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm