ಬ್ರೇಕಿಂಗ್ ನ್ಯೂಸ್
23-03-25 11:01 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.23 : ಚಿನ್ನದ ರಿಕವರಿ ಹೆಸರಲ್ಲಿ ಚಿನ್ನದ ಗಟ್ಟಿ ಪಡೆದು ದುರ್ಬಳಕೆ ಮಾಡಿದ ಆರೋಪದಲ್ಲಿ ಪಿಎಸ್ಐ ಓರ್ವರನ್ನು ಅಮಾನತು ಮಾಡಿರುವ ಘಟನೆ ನಡೆದಿದೆ.
ಕಾಟನ್ ಪೇಟೆ ಠಾಣೆಯ ಪಿಎಸ್ಐ ಸಂತೋಷ್ ಅಮಾನತಾಗಿದ್ದು ಬೆಂಗಳೂರು ಪೊಲೀಸ್ ಕಮಿಷನರ್ ದಯಾನಂದ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಸಂತೋಷ್ ಅವರು 2022ರಲ್ಲಿ ಹೊಸೂರು ಗೇಟ್ ಠಾಣೆ ಪಿಎಸ್ಐ ಆಗಿದ್ದಾಗ ಪ್ರಕರಣ ಒಂದರಲ್ಲಿ ರಿಕವರಿ ಮಾಡಿದ್ದ ಚಿನ್ನವನ್ನು ದುರ್ಬಳಕೆ ಮಾಡಿಕೊಂಡಿದ್ದರು ಎಂಬ ಆರೋಪ ಕೇಳಿಬಂದಿದೆ.
ಚಿನ್ನದ ಅಂಗಡಿ ಮಾಲೀಕರೊಬ್ಬರ ಬಳಿ ರಿಕವರಿ ಚಿನ್ನ ತೋರಿಸಬೇಕಿದೆ ಎಂದು ಹೇಳಿ 950 ಗ್ರಾಂ ಚಿನ್ನದ ಗಟ್ಟಿ ಕೊಡು, ಫೋಟೋ ತೆಗೆಸಿ ಹಿಂದಿರುಗಿಸುತ್ತೇನೆ ಎಂದು ಹೇಳಿ ಚಿನ್ನದ ಗಟ್ಟಿ ಪಡೆದು ಎಸ್ಕೇಪ್ ಆಗಿದ್ದರು. ಬಳಿಕ ಅಂಗಡಿ ಮಾಲೀಕ ಚಿನ್ನ ಕೇಳಿದಾಗ ಹಣ ಕೊಡುತ್ತೇನೆಂದು ಚೆಕ್ ಕೊಟ್ಟಿದ್ದರು. ಆದರೆ ಚೆಕ್ ಬೌನ್ಸ್ ಆಗಿತ್ತು. ಮತ್ತೆ ಚಿನ್ನದ ಅಂಗಡಿ ಮಾಲೀಕ ಕೇಳಿದಾಗ ಬೆದರಿಕೆ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಪಿಎಸ್ ಐ ಮೇಲೆ ದೂರು ದಾಖಲಾಗಿತ್ತು. ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ಪಿಎಸ್ ಐ ಸಂತೋಷ್ ಅವರನ್ನು ಅಮಾನತು ಮಾಡಲಾಗಿದೆ.
ಚಿನ್ನದ ಅಂಗಡಿ ಮಾಲೀಕನಿಗೆ ಬೆದರಿಕೆ
ಈ ನಡುವೆ ಜಮೀನಿನ ಕರಾರು ಪತ್ರವನ್ನು ಚಿನ್ನದ ಅಂಗಡಿ ಮಾಲೀಕನಿಗೆ ಸಂತೋಷ್ ನೀಡಿದ್ದರು. ಆದರೆ ಆ ಜಾಗವನ್ನು ಬೇರೆಯವರಿಗೆ ಮಾರಾಟ ಮಾಡಿದ್ದರು. ಇದನ್ನು ಚಿನ್ನದ ಅಂಗಡಿ ಮಾಲೀಕ ಪ್ರಶ್ನಿಸಿದ ವೇಳೆ ಆತನಿಗೆ ಇನ್ಸ್ಪೆಕ್ಟರ್ ಸಂತೋಷ್ ಖಾಲಿ ಚೆಕ್ ನೀಡಿದ್ದರು. ನಂತರ, ಚೆಕ್ ಕೂಡ ಬೌನ್ಸ್ ಆಗಿತ್ತು. ಮತ್ತೆ ಹಣ ಅಥವಾ ಚಿನ್ನ ಕೇಳಿದಾಗ ಸಂತೋಷ್ ಅವರು ಚಿನ್ನದ ಅಂಗಡಿ ಮಾಲೀಕನಿಗೆ ಬೆದರಿಕೆ ಹಾಕಿದ್ದರು. ಹೀಗಾಗಿ, ಹಲಸೂರು ಗೇಟ್ ಠಾಣೆಯಲ್ಲಿ ಪಿಎಸ್ಐ ಸಂತೋಷ್ ವಿರುದ್ಧ ಅಧಿಕಾರ ದುರುಪಯೋಗ ಮತ್ತು ವಂಚನೆ ಪ್ರಕರಣ ದಾಖಲಾಗಿತ್ತು.
Bangalore 950 Grams of Gold Seized in Recovery Scam, Cottonpet Police station PSI Santosh Suspended Following FIR.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am