ಬ್ರೇಕಿಂಗ್ ನ್ಯೂಸ್
24-03-25 07:23 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.24: ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇಕಡ 4ರಷ್ಟು ಮೀಸಲಾತಿ ನೀಡುವುದಕ್ಕಾಗಿ ಸಂವಿಧಾನದಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ನೀಡಿದ್ದಾರೆನ್ನಲಾದ ಹೇಳಿಕೆ ತೀವ್ರ ವಿವಾದ ಹುಟ್ಟುಹಾಕಿದೆ. ಸಂಸತ್ತಿನ ಉಭಯ ಸದನಗಳಲ್ಲಿ ಪ್ರಸ್ತಾಪಗೊಂಡು ಕೋಲಾಹಲ ಸೃಷ್ಟಿಸಿದೆ.
ಈ ವಿಚಾರ ರಾಜಕೀಯ ಬಿರುಗಾಳಿ ಎಬ್ಬಿಸುತ್ತಿದ್ದಂತೆ ಕಾಂಗ್ರೆಸ್ ಹೈಕಮಾಂಡ್ ನಾಯಕರು ಡಿಸಿಎಂ ಡಿಕೆ ಶಿವಕುಮಾರ್ ಗೆ ಕರೆ ಮಾಡಿ ವಿವರಣೆ ಕೇಳಿದ್ದಾರೆ ಎನ್ನಲಾಗಿದೆ. ಡಿಕೆಶಿ ಹೇಳಿಕೆಯಿಂದ ಕಾಂಗ್ರೆಸ್ ಹೈಕಮಾಂಡ್ ಮುಜುಗರಕ್ಕೆ ಒಳಗಾಗಿದ್ದು ಈ ಬಗ್ಗೆ ಸಂಸತ್ತಿನಲ್ಲಿ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ಸಂವಿಧಾನ ಬದಲಿಸುವ ಬಗ್ಗೆ ನಾನು ಮಾತನಾಡಲಿಲ್ಲ. ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
'ನಾನು ಹಾಗೆ ಹೇಳಿಯೇ ಇಲ್ಲ, ನನ್ನ ಹೇಳಿಕೆಯನ್ನು ಬಿಜೆಪಿ ತಿರುಚಿದೆ. ಕಳೆದ 36 ವರ್ಷಗಳಿಂದ ಶಾಸಕನಾಗಿ ಇದ್ದೇನೆ. ಇಂತಹ ವಿಚಾರದಲ್ಲಿ ಜೆ.ಪಿ ನಡ್ಡಾ ಅವರಿಗಿಂತ ನಾನು ಹೆಚ್ಚು ಸೂಕ್ಷ್ಮತೆ ಹೊಂದಿದ್ದೇನೆ. ಆದರೆ ಬಿಜೆಪಿ ಜನಸಾಮಾನ್ಯರ ದಾರಿ ತಪ್ಪಿಸುತ್ತಿದೆ. ಸುಳ್ಳು ಹೇಳಿಕೆ ಸೃಷ್ಟಿಸಿ, ನನ್ನ ಹೆಸರನ್ನು ಎಳೆದು ತರಲಾಗುತ್ತಿದೆ. ನ್ಯಾಯಾಲಯಗಳ ತೀರ್ಪಿನ ಅನುಸಾರ ತಿದ್ದುಪಡಿ ತಂದಿರುವ ನಿದರ್ಶನವಿದೆ ಎಂದು ಹೇಳಿದ್ದೇನೆಯೇ ಹೊರತು, ಸಂವಿಧಾನವನ್ನು ಬದಲಾವಣೆ ಮಾಡುತ್ತೇವೆ ಎಂದು ಹೇಳಿಲ್ಲ.
ನನ್ನ ಹೇಳಿಕೆಯನ್ನು ತಿರುಚಿರುವ ಬಗ್ಗೆ ಕಾನೂನು ಹೋರಾಟ ಮಾಡುತ್ತೇನೆ. ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಏನೂ ಇಲ್ಲದೇ ಇರುವ ಕಾರಣಕ್ಕೆ ಬಿಜೆಪಿ ಈ ರೀತಿ ಇಲ್ಲಸಲ್ಲದ ವಿಚಾರವನ್ನು ಸಂಸತ್ತಿನಲ್ಲಿ ಪ್ರಸ್ತಾಪ ಮಾಡುತ್ತಿದೆ. ಇದೊಂದು ನನ್ನ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ಮುಂದುವರೆದ ರಾಜಕೀಯ ಪಿತೂರಿ ಎಂದು ಹೇಳಿದ್ದಾರೆ.
ಸಂಸತ್ತಿನಲ್ಲಿ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಮುಸ್ಲಿಮರಿಗೆ ಶೇ. 4 ರಷ್ಟು ಮೀಸಲಾತಿ ಒದಗಿಸಲು ಅನುಕೂಲವಾಗುವಂತೆ ಸಂವಿಧಾನವನ್ನು ಬದಲಾಯಿಸುವುದಾಗಿ ಸಾಂವಿಧಾನಿಕ ಹುದ್ದೆಯಲ್ಲಿ ಕುಳಿತಿರುವ ವ್ಯಕ್ತಿಯೊಬ್ಬರು ನೀಡಿರುವ ಹೇಳಿಕೆ ಒಪ್ಪಲಾಗದು ಎಂದು ಹೇಳಿದ್ದಾರೆ.
ಆ ವ್ಯಕ್ತಿಯನ್ನು ವಜಾಗೊಳಿಸುವ ಬಗ್ಗೆ ಕಾಂಗ್ರೆಸ್ ಅಧ್ಯಕ್ಷರು ಸ್ಪಷ್ಪಪಡಿಸಬೇಕು ಎಂದು ರಿಜಿಜು ಒತ್ತಾಯಿಸಿದ್ದು ಮುಸ್ಲಿಮರಿಗೆ ಮೀಸಲಾತಿ ನೀಡುವುದಾಗಿ ಹೇಳುವ ನೀವು, ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರ ಮತ್ತು ಸಂವಿಧಾನದ ಪ್ರತಿಯನ್ನು ಜೀಬಿನಲ್ಲಿಟ್ಟುಕೊಂಡು ನಾಟಕವಾಡುತ್ತೀರಿ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಈ ವೇಳೆ, ಕಾಂಗ್ರೆಸ್ ಸದಸ್ಯರು ಸಚಿವ ರಿಜಿಜು ವಿರುದ್ಧ ಮುಗಿಬಿದ್ದಾಗ ಸದನದಲ್ಲಿ ಗದ್ದಲ ಉಂಟಾಗಿದೆ.
The Parliament witnessed uproar on March 24 over the alleged remarks of Karnataka Deputy Chief Minister D.K. Shivakumar about “changing the Constitution” to provide reservation to Muslims.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm