ಬ್ರೇಕಿಂಗ್ ನ್ಯೂಸ್
24-03-25 09:24 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 24: ಲಾಂಗ್ ಹಿಡಿದು ರೀಲ್ಸ್ ಮಾಡಿದ್ದ ‘ಬಿಗ್ ಬಾಸ್’ ಖ್ಯಾತಿಯ ವಿನಯ್ ಗೌಡ ಹಾಗೂ ರಜತ್ ನನ್ನ ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ.
ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದ ವಿನಯ್ ಅಂಡ್ ರಜತ್ ಮೇಲೆ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಜತ್ ಮತ್ತು ವಿನಯ್ ಬಸವೇಶ್ವರ ನಗರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು. ವಿಚಾರಣೆಯ ನಂತರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ರೀಲ್ಸ್ನಲ್ಲಿ ವಿನಯ್ ಗೌಡ ಲಾಂಗ್ ಹಿಡಿದು, ಕಣ್ಣಿಗೆ ಕೂಲಿಂಗ್ ಗ್ಲಾಸ್ ಹಾಕಿಕೊಂಡು ದರ್ಶನ್ ಅವರ ‘ಕರಿಯ’ ಸಿನಿಮಾದ ಸ್ಟೈಲ್ನಲ್ಲಿ ಸ್ಲೋ ಮೋಷನ್ನಲ್ಲಿ ನಡೆಯುತ್ತಿರುತ್ತಾರೆ. ಈ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗ್ತಿದೆ.
ಇನ್ನು ರಜತ್ ಕಿಶನ್ ಶೂಟಿಂಗ್ನಲ್ಲಿದ್ದ ಕಾರಣ ಪತ್ನಿ ಅಕ್ಷಿತಾ ಪೊಲೀಸರ ಮುಂದೆ ಹಾಜರಾಗಿದ್ರು. ಅಲ್ಲದೇ, ಪತಿ ವಿಚಾರಣೆಗೆ ಹಾಜರಾಗಲು ಸ್ವಲ್ಪ ಟೈಂ ಕೇಳಿ ಹೊರಟ್ರಂತೆ. ಅತ್ತ, ವಿನಯ್ ಗೌಡ ಪೊಲೀಸರಿಗೆ ಪತ್ರದ ಮೂಲಕ ಕ್ಷಮೆಕೊರಿದ್ರು.
ಇಷ್ಟೆಲ್ಲಾ ಆದ್ಮೇಲೆ ಸಂಜೆ ಹೊತ್ತಿಗೆ ವಿನಯ್ ಗೌಡ, ರಜತ್ ಕಿಶನ್ ಇಬ್ಬರೂ ಬಸವೇಶ್ವರನಗರ ಠಾಣೆಗೆ ವಿಚಾರಣೆ ಹಾಜರಾಗಲು ಬಂದಿದ್ರು... ಈ ವೇಳೆ ಪೊಲೀಸರು ರಜತ್ ಹಾಗೂ ವಿನಯ್ ಇಬ್ಬರನ್ನೂ ಅರೆಸ್ಟ್ ಮಾಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ಗಂಟೆಗಟ್ಟಲೇ ಕೂರಿಸಿ ಖಡಕ್ ವಿಚಾರಣೆಯನ್ನು ನಡೆಸಿದ್ದಾರೆ.
ಈ ಲಾಂಗ್ ರೀಲ್ಸ್ ಗೀಳು ಇಬ್ಬರು ಸ್ಟಾರ್ಸ್ಗಳನ್ನ ಸಂಕಷ್ಟಕ್ಕೆ ತಳ್ಳಿಬಿಟ್ಟಿದೆ. ನಾಳೆ ಇಬ್ಬರನ್ನೂ ಕೋರ್ಟಿಗೆ ಹಾಜರು ಪಡಿಸೋ ಸಾದ್ಯತೆ ಇದೆ. ಸೆಲೆಬ್ರಿಟಿಗಳು ಅಂತ ಕರೆಸಿಕೊಳ್ಳೋ ಇವ್ರ ವಿರುದ್ಧ ಲಾಂಗ್ ಹಿಡಿದು ರೀಲ್ಸ್ ಮಾಡಿದ್ದಕ್ಕೆ ಪೊಲೀಸರು ತೆಗೆದುಕೊಂಡಿರೋ ಕ್ರಮ, ಎಲ್ಲರಿಗೂ ಒಂದು ಪಾಠ. ಮುಂದ್ಯಾರೂ ಇಂಥಾ ಶೋಕಿ ಮಾಡದಂತೆ ಎಚ್ಚರಿಕೆಯ ಗಂಟೆ.
Bigg Boss contestants Vinay Gowda and Rajat were arrested in Bangalore after a video featuring the duo wielding weapons for social media reels went viral. The clip, which raised serious concerns about public safety, prompted the Basaveshwar Nagar police to file an FIR against the two reality stars. When Vinay and Rajat arrived at the police station for questioning, they were promptly taken into custody. Authorities are now looking into the implications of their actions and whether they violated any laws regarding firearm use and public safety.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm