ಬ್ರೇಕಿಂಗ್ ನ್ಯೂಸ್
25-03-25 11:25 am Bangalore Correspondent ಕರ್ನಾಟಕ
ಬೆಂಗಳೂರು, ಮಾ 24: ಮುಸ್ಲಿಂ ಮೀಸಲಾತಿ ವಿಷಯದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಮತ್ತು ವಿಪಕ್ಷಗಳ ನಡುವೆ ತೀವ್ರ ಚರ್ಚೆ ಆರಂಭವಾಗಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇತ್ತೀಚೆಗೆ ಖಾಸಗಿ ಚಾನೆಲ್ ನ "ಇಂಡಿಯಾ ಡೈಮಂಡ್ ಸ್ಟೇಟ್ಸ್ ಸಮಿಟ್ 2025" ರಲ್ಲಿ ಭಾಗವಹಿಸಿ, ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ನೀಡುವ ವಿಚಾರದ ಬಗ್ಗೆ ಮಾತನಾಡುತ್ತಾ ಸಂವಿಧಾನ ಬದಲಾಗುವ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಸದ್ಯ ಈ ಹೇಳಿಕೆ ರಾಷ್ಟ್ರಮಟ್ಟದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಇದೀಗ ವಿಪಕ್ಷಗಳು ಡಿಕೆಶಿ ಹೇಳಿಕೆಯನ್ನು ವಿರೋಧಿಸಿದ್ದು, ಪ್ರತಿಭಟನೆಗೂ ಕರೆ ನೀಡಿದ್ದಾರೆ.
ಡಿಕೆ ಶಿವಕುಮಾರ್ ಸಂವಿಧಾನ ಬದಲಾವಣೆ ಹೇಳಿಕೆ ಸದ್ಯ ರಾಜ್ಯದಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಇದೀಗ ಕರ್ನಾಟಕ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ ರಾಜೀವ್ ಮಾತನಾಡಿದ್ದು, ಡಿಕೆಶಿ ಓಡಾಡುವ ಕಡೆ ಮುತ್ತಿಗೆ ಹಾಗು ಘೇರಾವ್ ಹಾಕಲು ಕರೆ ನೀಡಿದ್ದಾರೆ.
ಸಂವಿಧಾನಕ್ಕೆ ಅಗೌರವ ತರುವ ಕೆಲಸವನ್ನು ಯಾರು ಮಾಡಬಾರದು. ಡಿಸಿಎಂ ಡಿಕೆ ಶಿವಕುಮಾರ್ ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ. ಹಿಂದೆ ನಮ್ಮದೇ ಪಕ್ಷದಲ್ಲಿ ಒಬ್ಬರು ಈ ರೀತಿ ನಡೆದುಕೊಂಡಾಗ, ಅವರಿಗೆ ನಾವು ಟಿಕೆಟ್ ಕೊಟ್ಟಿಲ್ಲ. ಇವಾಗ ಅದೇ ರೀತಿಯಲ್ಲಿ ಕಾಂಗ್ರೆಸ್ ನ ಮಲ್ಲಿಕಾರ್ಜುನ್ ಖರ್ಗೆ, ಡಿಸಿಎಂ ಡಿಕೆಶಿ ಸದಸ್ಯತ್ವ ಅನರ್ಹ ಗೊಳಿಸುವ ಧೈರ್ಯ ತೋರಿಸಲಿ ಎಂದು ಹೇಳಿದ್ದಾರೆ.
ಡಿಕೆಶಿ ರಾಜೀನಾಮೇ ಕೊಡ್ಬೇಕು ; ಪಿ ರಾಜೀವ್
ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಸದಾ ಸಂವಿಧಾನದ ಬಗ್ಗೆ ಮಾತಾಡುವ ಪ್ರಿಯಾಂಕ ಖರ್ಗೆ ಇವಾಗ ಮಾತಾಡಬೇಕು. ರಾಜ್ಯದ ಜನರಿಗೆ ಡಿಸಿಎಂ ಡಿಕೆ ಶಿವಕುಮಾರ್ ಕ್ಷಮೆ ಕೇಳಬೇಕು. ಅವ್ರು ಕ್ಷಮೆ ಕೇಳುವ ತನಕ ನಾವಂತೂ ಸುಮ್ಮನೆ ಬಿಡಲ್ಲ. ಅವರು ಹೋದ ಕಡೆಗಳಲ್ಲಿ ಕಪ್ಪು ಪಟ್ಟಿ ಪ್ರದರ್ಶನ ಮಾಡುತ್ತೇವೆ. ಅವರಿಗೆ ದಲಿತ ಸಮಾಜದಿಂದ ಘೇರಾವ್ ಹಾಕುತ್ತೇವೆ ಎಂದು ಫ್ರೀಡಂ ಪಾರ್ಕ್ ನಲ್ಲಿ ಮಾಜಿ ಶಾಸಕ ಪಿ ರಾಜೀವ್ ಹೇಳಿದ್ದಾರೆ.
In a significant political development, the Bharatiya Janata Party (BJP) has ramped up its protests against Karnataka Congress leader DK Shivakumar, demanding formal recognition of his actions while opposing recent constitutional changes aimed at providing reservations for Muslims. The BJP has initiated a series of gherao protests, targeting areas wherever Shivakumar is scheduled to appear.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm