ಬ್ರೇಕಿಂಗ್ ನ್ಯೂಸ್
25-03-25 08:37 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.25 : ರಾಜ್ಯ ರಾಜಕೀಯದಲ್ಲಿ ಭಾರೀ ಸದ್ದು ಮಾಡಿರುವ ಹನಿಟ್ರ್ಯಾಪ್ ವಿಚಾರದಲ್ಲಿ ಸಚಿವ ರಾಜಣ್ಣ ಅವರು ಗೃಹ ಸಚಿವರನ್ನು ಭೇಟಿಯಾಗಿ ಉನ್ನತ ಮಟ್ಟದ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ. ಬೆಂಗಳೂರಿನ ಸದಾಶಿವನಗರದ ಮನೆಯಲ್ಲಿ ಡಾ.ಜಿ. ಪರಮೇಶ್ವರ್ ಅವರನ್ನು ಭೇಟಿಯಾದ ರಾಜಣ್ಣ ಅವರು ತನಿಖೆ ನಡೆಸಲು ಕೋರಿದ್ದಾರೆ.
ಈ ವೇಳೆ ಮಾತನಾಡಿದ ಸಚಿವ ಪರಮೇಶ್ವರ್, ದೂರನ್ನು ಪೊಲೀಸ್ ಠಾಣೆಯಲ್ಲೇ ನೀಡಬೇಕಾಗುತ್ತದೆ. ನಾನು ದೂರು ಸ್ವೀಕರಿಸಲು ಬರುವುದಿಲ್ಲ. ತನಿಖೆ ಮಾಡಬೇಕೆಂಬ ರಾಜಣ್ಣ ಅವರ ಮನವಿಯನ್ನು ಪಡೆದಿದ್ದೇನೆ. ಈ ಬಗ್ಗೆ ಮುಖ್ಯಮಂತ್ರಿ ಜೊತೆಗೆ ಚರ್ಚಿಸಿ ಯಾವ ರೀತಿಯ ತನಿಖೆ ಆಗಬೇಕೆಂದು ನಿರ್ಧರಿಸುತ್ತೇನೆ ಎಂದು ಹೇಳಿದರು.
ಇದಕ್ಕೂ ಮುನ್ನ ತನ್ನ ಕಚೇರಿಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ರಾಜಣ್ಣ ಅವರು, 2-3 ದಿನಗಳಲ್ಲಿ ಗೃಹ ಸಚಿವರನ್ನು ಭೇಟಿಯಾಗಲು ಆಗಿರಲಿಲ್ಲ. ಇವತ್ತು ಅವರು ಎಲ್ಲಿದ್ದಾರೋ ಅಲ್ಲಿಗೆ ಹೋಗಿ ದೂರು ಕೊಡುತ್ತೇನೆ. ಈಗಾಗಲೇ ಮೂರು ಪುಟಗಳ ದೂರನ್ನು ಬರೆದಿಟ್ಟಿದ್ದೇನೆ. ದೂರಿನಲ್ಲಿ ಏನಿದೆ ಎನ್ನುವ ಬಗ್ಗೆ ಹೇಳಲು ಆಗುವುದಿಲ್ಲ ಎಂದರು. ಹೈಕೋರ್ಟ್ ವಕೀಲರು ಎಂದು ಹೇಳಿ ಯುವತಿಯೊಬ್ಬಳು ಬಂದಿದ್ದಳು, ಏನೋ ಗುಟ್ಟಿನಲ್ಲಿ ಮಾತನಾಡಲಿಕ್ಕಿದೆ ಎಂದು ಹೇಳಿದ್ದಳು. ಇನ್ನೊಬ್ಬ ಯುವಕ ಬಂದಿದ್ದ. ಆತ ಎರಡು ಬಾರಿ ಬಂದಿದ್ದ. ಒಟ್ಟು ವಿಚಾರದ ಬಗ್ಗೆ ದೂರಿನಲ್ಲಿ ಬರೆದಿದ್ದೇನೆ ಎಂದು ಹೇಳಿದರು.
ನೀವು ಅಧಿವೇಶನದಲ್ಲಿ ಪ್ರಸ್ತಾಪ ಮಾಡಬಾರದಿತ್ತು, ಸರಕಾರದ ಗಮನಕ್ಕೆ ತರಬೇಕಿತ್ತು ಎಂದು ಚರ್ಚೆಯಾಗುತ್ತಿದೆ ಎಂಬ ಪ್ರಶ್ನೆಗೆ, ನಾನು ಸದನದಲ್ಲಿ ಪ್ರಸ್ತಾಪ ಮಾಡಬೇಕೆಂದು ಇರಲಿಲ್ಲ. ವಿಪಕ್ಷದ ಯತ್ನಾಳ್, ಸುನಿಲ್ ನನ್ನ ಹೆಸರು ಪ್ರಸ್ತಾಪ ಮಾಡಿದ ಬಳಿಕ ಅದಕ್ಕೆ ಉತ್ತರ ಕೊಟ್ಟಿದ್ದೇನೆ. ನಾನು ಅಲ್ಲಿದ್ದುಕೊಂಡು ಮಾತನಾಡದೇ ಇದ್ದರೆ ಮೌನಂ ಸಮ್ಮತಿ ಲಕ್ಷಣಂ ಅಂದಾಗುತ್ತದೆ. ಅದಕ್ಕಾಗಿ ತನಿಖೆ ಆಗಬೇಕು ಎಂದು ಹೇಳಿದ್ದೆ. ಅದು ಬಿಟ್ಟು ಇದರಲ್ಲಿ ನ್ಯಾಯಾಧೀಶರು ಇದ್ದಾರೆ, ಅವರಿದ್ದಾರೆ, ಇವರಿದ್ದಾರೆ ಅಂತ ಏನೂ ಹೇಳಿಲ್ಲ. ಯಾರೋ ಒಬ್ಬ ಸಿಬಿಐ ತನಿಖೆ ಆಗಬೇಕೆಂದು ಪಿಐಎಲ್ ಹಾಕಿದ್ದಾನಂತೆ. ಅದಕ್ಕೂ ನನಗೂ ಸಂಬಂಧ ಇಲ್ಲ. ನಾನೇನೂ ಹಾಗೆ ಹೇಳಿಲ್ಲ ಎಂದರು. ಹುಡುಗಿ ಯಾರೆಂದು ನೋಡಿದರೆ ಗುರುತು ಹಿಡಿಯಬಲ್ಲೆ. ನನಗೇನೂ ಪರಿಚಯ ಇಲ್ಲ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದರು.
ಆದರೆ ಸಚಿವ ರಾಜಣ್ಣ ಅವರಾಗಲೀ, ಅವರ ಕುಟುಂಬಸ್ಥರಾಗಲೀ ಇನ್ನೂ ಅಧಿಕೃತವಾಗಿ ಪೊಲೀಸ್ ಇಲಾಖೆಯನ್ನು ಭೇಟಿಯಾಗಿ ಘಟನೆ ಬಗ್ಗೆ ತನಿಖೆ ಆಗಬೇಕೆಂದು ದೂರು ಕೊಟ್ಟಿಲ್ಲ. ಹೀಗಾಗಿ ಇದರ ಬಗ್ಗೆ ಎಫ್ಐಆರ್ ದಾಖಲು ಮಾಡಿಲ್ಲ. ಗೃಹ ಸಚಿವರು ಪಡೆದ ದೂರನ್ನೇ ಆಧರಿಸಿ ಪೊಲೀಸರು ರಾಜಣ್ಣ ಅವರನ್ನು ಭೇಟಿಯಾಗಿ ಹೇಳಿಕೆ ಪಡೆದು ದೂರು ದಾಖಲಿಸಿಕೊಳ್ಳಲು ಅವಕಾಶ ಇದೆ.
Minister Rajanna Confronts Home Minister Over Honeytrap Allegations Involving Impersonating Lawyer. Amid growing discussions in state and national politics regarding attempts to trap ministers and MLAs in honey traps, cooperation minister K N Rajanna on Tuesday disclosed that he was targeted twice.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm