ಬ್ರೇಕಿಂಗ್ ನ್ಯೂಸ್
26-03-25 06:07 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.26 : ಬಿಜೆಪಿಯಲ್ಲಿ ರೆಬೆಲ್ ಶಾಸಕನೆಂದೇ ಗುರುತಿಸಲ್ಪಟ್ಟು ರಾಜ್ಯ ಬಿಜೆಪಿಗೆ ಬಿಸಿ ತುಪ್ಪವಾಗಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ. ಇದೇ ವೇಳೆ, ಯತ್ನಾಳ್ ಜೊತೆಗೆ ಗುರುತಿಸಿಕೊಂಡಿದ್ದ ಶಾಸಕ ಬಿಪಿ ಹರೀಶ್ ಮತ್ತು ಕೆಲವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ.
ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಅವಧಿಗೆ ಉಚ್ಚಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಆದೇಶ ಹೊರಡಿಸಿದೆ. ಕೇಂದ್ರ ಶಿಸ್ತು ಸಮಿತಿ ಎರಡು ಬಾರಿ ಶೋಕಾಸ್ ನೋಟಿಸ್ ನೀಡಿದ್ದರೂ ಪದೇ ಪದೇ ಪಕ್ಷದ ಶಿಸ್ತು ಉಲ್ಲಂಘನೆ ಮಾಡುತ್ತಿದ್ದರು. ಕೊನೆಗೆ ಫೆಬ್ರವರಿ 10 ರಂದು ಶೋಕಾಸ್ ನೋಟಿಸ್ಗೆ ಯತ್ನಾಳ್ ಉತ್ತರ ನೀಡಿದ್ದರು.
ಆನಂತರ, ಆರೆಸ್ಸೆಸ್ ಹಿರಿಯ ನಾಯಕರು ಯತ್ನಾಳ್ ಮತ್ತು ಅವರ ಬಳಗದ ಜೊತೆಗೆ ಕುಳಿತು ಮಾತನಾಡಿ ಹೊಂದಾಣಿಕೆಯಲ್ಲಿ ಹೋಗುವಂತೆ ಮನವೊಲಿಕೆ ಮಾಡಿದ್ದರು.ಆದರೂ ವಿಜಯೇಂದ್ರ ಮತ್ತು ಯಡಿಯೂರಪ್ಪ ವಿರುದ್ಧ ಹೇಳಿಕೆ ನೀಡುವುದನ್ನು ನಿಲ್ಲಿಸಿರಲಿಲ್ಲ. ಹೀಗಾಗಿ ಪಕ್ಷದ ಕೇಂದ್ರ ಶಿಸ್ತು ಸಮಿತಿ ದಿಢೀರ್ ನಿರ್ಧಾರ ಕೈಗೊಂಡಿದೆ. ಈ ಮೂಲಕ ರಾಜ್ಯ ಬಿಜೆಪಿಯಲ್ಲಿನ ಬಣ ಬಡಿದಾಟಕ್ಕೆ ಬ್ರೇಕ್ ಹಾಕುವ ಯತ್ನ ಮಾಡಿದೆ. ಅಲ್ಲದೇ ಇತರೆ ರೆಬೆಲ್ ನಾಯಕರಿಗೂ ಪರೋಕ್ಷ ಎಚ್ಚರಿಕೆ ಸಂದೇಶ ರವಾನಿಸಿದೆ.
ಯತ್ನಾಳ್ ಕಳೆದ ಒಂದು ವರ್ಷದಲ್ಲಿ ರಾಜ್ಯ ಬಿಜೆಪಿಗೆ ಎದುರಾಗಿ ತಮ್ಮದೇ ತಂಡ ಕಟ್ಟಿಕೊಂಡು ಪ್ರತ್ಯೇಕ ಸಭೆ ಮಾಡುತ್ತಿದ್ದರು. ಈ ಸಂಬಂಧ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿತ್ತು. ಆದರೂ ಯತ್ನಾಳ್ ಸೈಲೆಂಟ್ ಆಗಿರಲಿಲ್ಲ. ಹೀಗಾಗಿ ಇತ್ತೀಚೆಗೆಷ್ಟೇ ಮತ್ತೊಂದು ಶೋಕಾಸ್ ನೀಡಲಾಗಿತ್ತು. ಇದೀಗ ವಿಜಯೇಂದ್ರ ಮತ್ತು ಯಡಿಯೂರಪ್ಪ ದೆಹಲಿಯಲ್ಲಿ ಇರುವಾಗಲೇ ಉಚ್ಚಾಟನೆ ಆದೇಶ ಹೊರಡಿಸಲಾಗಿದೆ.
ನೀವು ಪಕ್ಷದ ಶಿಸ್ತನ್ನು ಉಲ್ಲಂಘಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಆದ್ದರಿಂದ, ನಿಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ 6 ವರ್ಷಗಳ ಅವಧಿಗೆ ಉಚ್ಚಾಟಿಸಲು ನಿರ್ಧರಿಸಲಾಗಿದೆ. ಹಾಗೇ ನೀವು ಇಲ್ಲಿಯವರೆಗೆ ಹೊಂದಿದ್ದ ಪಕ್ಷದ ಜವಾಬ್ದಾರಿಯಿಂದ ನಿಮ್ಮನ್ನು ತೆಗೆದುಹಾಕಲಾಗಿದೆ ಎಂದು ಬಿಜೆಪಿ ಕೇಂದ್ರ ಶಿಸ್ತು ಸಮಿತಿಯ ಕಾರ್ಯದರ್ಶಿ ಓಂ ಪಾಠಕ್ ನೀಡಿರುವ ಆದೇಶದಲ್ಲಿ ತಿಳಿಸಿದ್ದಾರೆ.
Basangouda Patil Yatnal, BJP MLA from Bijapur City, Karnataka, has been expelled from the party for six years for his statements against the party and senior leader BS Yediyurappa.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am