Yatnal, BJP, Karnataka Congress Twitter: ಈಗ 'ಸಂತೋಷ' ವಾಯಿತೇ? ಆ ಜೀ ಈ ಜೀ ಗಳ ಮಾತುಕೇಳಿ ರಾಜಕೀಯ ಜೀವನ ಹಾಳು ಮಾಡಿಕೊಂಡ ಯತ್ನಾಳ್! ಬಿಜೆಪಿ ಬೆಳವಣಿಗೆ ಬಗ್ಗೆ ಕಟು ಪದಗಳಲ್ಲಿ ಕಾಂಗ್ರೆಸ್ ಟ್ವೀಟ್ 

27-03-25 02:03 pm       Bangalore Correspondent   ಕರ್ನಾಟಕ

ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಚಾಟನೆಯಾದ ರೆಬಲ್ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಕರ್ನಾಟಕ ಕಾಂಗ್ರೆಸ್‌ ಕಟು ಮಾತುಗಳಲ್ಲಿ ಕಿಚಾಯಿಸಿದ್ದು ಸರಣಿ ಟ್ವೀಟ್ ಮೂಲಕ ಕರ್ನಾಟಕ ಬಿಜೆಪಿ, ಆರೆಸ್ಸೆಸ್ ಮತ್ತು ಯತ್ನಾಳ್ ಅವರನ್ನು ವ್ಯಂಗ್ಯವಾಗಿ ಟೀಕಿಸಿದೆ.

ಬೆಂಗಳೂರು, ಮಾ.27 : ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಚಾಟನೆಯಾದ ರೆಬಲ್ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಕರ್ನಾಟಕ ಕಾಂಗ್ರೆಸ್‌ ಕಟು ಮಾತುಗಳಲ್ಲಿ ಕಿಚಾಯಿಸಿದ್ದು ಸರಣಿ ಟ್ವೀಟ್ ಮೂಲಕ ಕರ್ನಾಟಕ ಬಿಜೆಪಿ, ಆರೆಸ್ಸೆಸ್ ಮತ್ತು ಯತ್ನಾಳ್ ಅವರನ್ನು ವ್ಯಂಗ್ಯವಾಗಿ ಟೀಕಿಸಿದೆ.

ಈ ಬಗ್ಗೆ ಟ್ವಿಟರ್ ನಲ್ಲಿ ಪೋಸ್ಟ್‌ ಹಾಕಿರುವ ಕಾಂಗ್ರೆಸ್‌, ಈಗ ‘ಸಂತೋಷ’ ವಾಯಿತೇ? ಆ ಜೀ ಈ ಜೀ ಗಳ ಮಾತುಕೇಳಿ ರಾಜಕೀಯ ಜೀವನ ಹಾಳು ಮಾಡಿಕೊಂಡ ಯತ್ನಾಳ್ ಎಂದು ಕಾಲೆಳೆದಿದೆ.  

ಭ್ರಷ್ಟ ಅಪ್ಪ ಮಕ್ಕಳ ಸೂಟ್ ಕೇಸ್ ರಾಜಕೀಯಕ್ಕೆ ಬಗ್ಗಿದ ಬಿಜೆಪಿ ಹೈಕಮಾಂಡ್. ನಾಗಪುರದ ಬಿಜೆಪಿಯನ್ನು ಸೋಲಿಸಿದ ಕರ್ನಾಟಕ ಬಿಜೆಪಿ! ಇಂದು ಇಲಿಯಾದ ಯತ್ನಾಳ್! ಎಂದು ಕಾಂಗ್ರೆಸ್‌ ಲೇವಡಿ ಮಾಡಿದೆ.

'ಹಿಂದೂ ಹುಲಿ ಇಲಿಯಾದ ಕಥೆ’, ‘ಯತ್ನಾಳ್‌ಗೆ ಬಿಲ ತೋಡಿ ಮಣ್ಣು ಮುಚ್ಚಿದ ವಿಜಯೇಂದ್ರ’, ‘ಭ್ರಷ್ಟ ಅಪ್ಪ ಮಕ್ಕಳ ಸೂಟ್‌ಕೇಸ್‌ ರಾಜಕೀಯಕ್ಕೆ ಬಗ್ಗಿದ ಹೈಕಮಾಂಡ್‌’ ಎಂಬ ಬರಹಗಳ ಜೊತೆಗೆ ಯಡಿಯೂರಪ್ಪ, ವಿಜಯೇಂದ್ರ ಮತ್ತು ಯತ್ನಾಳ್‌ ಫೋಟೊಗಳಿರುವ ಪೋಸ್ಟರ್‌ ಅನ್ನು ಕಾಂಗ್ರೆಸ್‌ ಹಂಚಿಕೊಂಡು ಟೀಕೆ ಮಾಡಿದೆ. ಇದಲ್ಲದೆ, ಬಿಜೆಪಿ ಭ್ರಷ್ಟ, ದುಷ್ಟ, ಸುಳ್ಳುಗಾರರ ಪಕ್ಷ! ಎನ್ನುವ ಯತ್ನಾಳ್ ಅವರು ಸ್ಲೇಟ್ ಹಿಡಿದುಕೊಂಡು ನಿಂತಿರುವ ಎಡಿಟೆಡ್ ಫೋಟೋವನ್ನು ಹಾಕಿ ಮತ್ತೊಂದು ಟ್ವೀಟ್ ಮಾಡಿದೆ. ಮಲ್ಲೇಶ್ವರದ ಜಗನ್ನಾಥ ಭವನದ ಮುಂದೆ ಯತ್ನಾಳ್ ಅವರು ನಿಂತಿರುವ ಫೋಟೋವನ್ನು ಹಾಕಲಾಗಿದೆ. 

ಟ್ವೀಟ್ ನಲ್ಲಿ, ’ನಾಗಪುರದ ಬಿಜೆಪಿಯನ್ನು ಸೋಲಿಸಿದ ಕರ್ನಾಟಕ ಬಿಜೆಪಿ! ಇಂದು ಇಲಿಯಾದ ಯತ್ನಾಳ್!’ ’ಈಗ 'ಸಂತೋಷ' ವಾಯಿತೇ? ಆ ಜೀ ಈ ಜೀ ಗಳ ಮಾತುಕೇಳಿ ರಾಜಕೀಯ ಜೀವನ ಹಾಳು ಮಾಡಿಕೊಂಡ ಯತ್ನಾಳ್! ’ ಎನ್ನುವ ಪದಗಳನ್ನು ಬಳಸಿ ಕೆಪಿಸಿಸಿ ಟೀಕೆ ಮಾಡಿದೆ.

In a scathing attack, the Karnataka Congress party has criticized BJP MLA Yatnal for his recent leadership decisions, accusing him of seeking advice from a multitude of sources that have ultimately led to a decline in his political career.