ಬ್ರೇಕಿಂಗ್ ನ್ಯೂಸ್
27-03-25 02:03 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.27 : ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಚಾಟನೆಯಾದ ರೆಬಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಕರ್ನಾಟಕ ಕಾಂಗ್ರೆಸ್ ಕಟು ಮಾತುಗಳಲ್ಲಿ ಕಿಚಾಯಿಸಿದ್ದು ಸರಣಿ ಟ್ವೀಟ್ ಮೂಲಕ ಕರ್ನಾಟಕ ಬಿಜೆಪಿ, ಆರೆಸ್ಸೆಸ್ ಮತ್ತು ಯತ್ನಾಳ್ ಅವರನ್ನು ವ್ಯಂಗ್ಯವಾಗಿ ಟೀಕಿಸಿದೆ.
ಈ ಬಗ್ಗೆ ಟ್ವಿಟರ್ ನಲ್ಲಿ ಪೋಸ್ಟ್ ಹಾಕಿರುವ ಕಾಂಗ್ರೆಸ್, ಈಗ ‘ಸಂತೋಷ’ ವಾಯಿತೇ? ಆ ಜೀ ಈ ಜೀ ಗಳ ಮಾತುಕೇಳಿ ರಾಜಕೀಯ ಜೀವನ ಹಾಳು ಮಾಡಿಕೊಂಡ ಯತ್ನಾಳ್ ಎಂದು ಕಾಲೆಳೆದಿದೆ.
ಭ್ರಷ್ಟ ಅಪ್ಪ ಮಕ್ಕಳ ಸೂಟ್ ಕೇಸ್ ರಾಜಕೀಯಕ್ಕೆ ಬಗ್ಗಿದ ಬಿಜೆಪಿ ಹೈಕಮಾಂಡ್. ನಾಗಪುರದ ಬಿಜೆಪಿಯನ್ನು ಸೋಲಿಸಿದ ಕರ್ನಾಟಕ ಬಿಜೆಪಿ! ಇಂದು ಇಲಿಯಾದ ಯತ್ನಾಳ್! ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.


'ಹಿಂದೂ ಹುಲಿ ಇಲಿಯಾದ ಕಥೆ’, ‘ಯತ್ನಾಳ್ಗೆ ಬಿಲ ತೋಡಿ ಮಣ್ಣು ಮುಚ್ಚಿದ ವಿಜಯೇಂದ್ರ’, ‘ಭ್ರಷ್ಟ ಅಪ್ಪ ಮಕ್ಕಳ ಸೂಟ್ಕೇಸ್ ರಾಜಕೀಯಕ್ಕೆ ಬಗ್ಗಿದ ಹೈಕಮಾಂಡ್’ ಎಂಬ ಬರಹಗಳ ಜೊತೆಗೆ ಯಡಿಯೂರಪ್ಪ, ವಿಜಯೇಂದ್ರ ಮತ್ತು ಯತ್ನಾಳ್ ಫೋಟೊಗಳಿರುವ ಪೋಸ್ಟರ್ ಅನ್ನು ಕಾಂಗ್ರೆಸ್ ಹಂಚಿಕೊಂಡು ಟೀಕೆ ಮಾಡಿದೆ. ಇದಲ್ಲದೆ, ಬಿಜೆಪಿ ಭ್ರಷ್ಟ, ದುಷ್ಟ, ಸುಳ್ಳುಗಾರರ ಪಕ್ಷ! ಎನ್ನುವ ಯತ್ನಾಳ್ ಅವರು ಸ್ಲೇಟ್ ಹಿಡಿದುಕೊಂಡು ನಿಂತಿರುವ ಎಡಿಟೆಡ್ ಫೋಟೋವನ್ನು ಹಾಕಿ ಮತ್ತೊಂದು ಟ್ವೀಟ್ ಮಾಡಿದೆ. ಮಲ್ಲೇಶ್ವರದ ಜಗನ್ನಾಥ ಭವನದ ಮುಂದೆ ಯತ್ನಾಳ್ ಅವರು ನಿಂತಿರುವ ಫೋಟೋವನ್ನು ಹಾಕಲಾಗಿದೆ.
ಟ್ವೀಟ್ ನಲ್ಲಿ, ’ನಾಗಪುರದ ಬಿಜೆಪಿಯನ್ನು ಸೋಲಿಸಿದ ಕರ್ನಾಟಕ ಬಿಜೆಪಿ! ಇಂದು ಇಲಿಯಾದ ಯತ್ನಾಳ್!’ ’ಈಗ 'ಸಂತೋಷ' ವಾಯಿತೇ? ಆ ಜೀ ಈ ಜೀ ಗಳ ಮಾತುಕೇಳಿ ರಾಜಕೀಯ ಜೀವನ ಹಾಳು ಮಾಡಿಕೊಂಡ ಯತ್ನಾಳ್! ’ ಎನ್ನುವ ಪದಗಳನ್ನು ಬಳಸಿ ಕೆಪಿಸಿಸಿ ಟೀಕೆ ಮಾಡಿದೆ.
ಈಗ 'ಸಂತೋಷ' ವಾಯಿತೇ?
— Karnataka Congress (@INCKarnataka) March 26, 2025
ಆ ಜೀ ಈ ಜೀ ಗಳ ಮಾತುಕೇಳಿ ರಾಜಕೀಯ ಜೀವನ ಹಾಳು ಮಾಡಿಕೊಂಡ ಯತ್ನಾಳ್! pic.twitter.com/io9QllyIEV
In a scathing attack, the Karnataka Congress party has criticized BJP MLA Yatnal for his recent leadership decisions, accusing him of seeking advice from a multitude of sources that have ultimately led to a decline in his political career.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm