ಬ್ರೇಕಿಂಗ್ ನ್ಯೂಸ್
27-03-25 02:03 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.27 : ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಚಾಟನೆಯಾದ ರೆಬಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಕರ್ನಾಟಕ ಕಾಂಗ್ರೆಸ್ ಕಟು ಮಾತುಗಳಲ್ಲಿ ಕಿಚಾಯಿಸಿದ್ದು ಸರಣಿ ಟ್ವೀಟ್ ಮೂಲಕ ಕರ್ನಾಟಕ ಬಿಜೆಪಿ, ಆರೆಸ್ಸೆಸ್ ಮತ್ತು ಯತ್ನಾಳ್ ಅವರನ್ನು ವ್ಯಂಗ್ಯವಾಗಿ ಟೀಕಿಸಿದೆ.
ಈ ಬಗ್ಗೆ ಟ್ವಿಟರ್ ನಲ್ಲಿ ಪೋಸ್ಟ್ ಹಾಕಿರುವ ಕಾಂಗ್ರೆಸ್, ಈಗ ‘ಸಂತೋಷ’ ವಾಯಿತೇ? ಆ ಜೀ ಈ ಜೀ ಗಳ ಮಾತುಕೇಳಿ ರಾಜಕೀಯ ಜೀವನ ಹಾಳು ಮಾಡಿಕೊಂಡ ಯತ್ನಾಳ್ ಎಂದು ಕಾಲೆಳೆದಿದೆ.
ಭ್ರಷ್ಟ ಅಪ್ಪ ಮಕ್ಕಳ ಸೂಟ್ ಕೇಸ್ ರಾಜಕೀಯಕ್ಕೆ ಬಗ್ಗಿದ ಬಿಜೆಪಿ ಹೈಕಮಾಂಡ್. ನಾಗಪುರದ ಬಿಜೆಪಿಯನ್ನು ಸೋಲಿಸಿದ ಕರ್ನಾಟಕ ಬಿಜೆಪಿ! ಇಂದು ಇಲಿಯಾದ ಯತ್ನಾಳ್! ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.
'ಹಿಂದೂ ಹುಲಿ ಇಲಿಯಾದ ಕಥೆ’, ‘ಯತ್ನಾಳ್ಗೆ ಬಿಲ ತೋಡಿ ಮಣ್ಣು ಮುಚ್ಚಿದ ವಿಜಯೇಂದ್ರ’, ‘ಭ್ರಷ್ಟ ಅಪ್ಪ ಮಕ್ಕಳ ಸೂಟ್ಕೇಸ್ ರಾಜಕೀಯಕ್ಕೆ ಬಗ್ಗಿದ ಹೈಕಮಾಂಡ್’ ಎಂಬ ಬರಹಗಳ ಜೊತೆಗೆ ಯಡಿಯೂರಪ್ಪ, ವಿಜಯೇಂದ್ರ ಮತ್ತು ಯತ್ನಾಳ್ ಫೋಟೊಗಳಿರುವ ಪೋಸ್ಟರ್ ಅನ್ನು ಕಾಂಗ್ರೆಸ್ ಹಂಚಿಕೊಂಡು ಟೀಕೆ ಮಾಡಿದೆ. ಇದಲ್ಲದೆ, ಬಿಜೆಪಿ ಭ್ರಷ್ಟ, ದುಷ್ಟ, ಸುಳ್ಳುಗಾರರ ಪಕ್ಷ! ಎನ್ನುವ ಯತ್ನಾಳ್ ಅವರು ಸ್ಲೇಟ್ ಹಿಡಿದುಕೊಂಡು ನಿಂತಿರುವ ಎಡಿಟೆಡ್ ಫೋಟೋವನ್ನು ಹಾಕಿ ಮತ್ತೊಂದು ಟ್ವೀಟ್ ಮಾಡಿದೆ. ಮಲ್ಲೇಶ್ವರದ ಜಗನ್ನಾಥ ಭವನದ ಮುಂದೆ ಯತ್ನಾಳ್ ಅವರು ನಿಂತಿರುವ ಫೋಟೋವನ್ನು ಹಾಕಲಾಗಿದೆ.
ಟ್ವೀಟ್ ನಲ್ಲಿ, ’ನಾಗಪುರದ ಬಿಜೆಪಿಯನ್ನು ಸೋಲಿಸಿದ ಕರ್ನಾಟಕ ಬಿಜೆಪಿ! ಇಂದು ಇಲಿಯಾದ ಯತ್ನಾಳ್!’ ’ಈಗ 'ಸಂತೋಷ' ವಾಯಿತೇ? ಆ ಜೀ ಈ ಜೀ ಗಳ ಮಾತುಕೇಳಿ ರಾಜಕೀಯ ಜೀವನ ಹಾಳು ಮಾಡಿಕೊಂಡ ಯತ್ನಾಳ್! ’ ಎನ್ನುವ ಪದಗಳನ್ನು ಬಳಸಿ ಕೆಪಿಸಿಸಿ ಟೀಕೆ ಮಾಡಿದೆ.
ಈಗ 'ಸಂತೋಷ' ವಾಯಿತೇ?
— Karnataka Congress (@INCKarnataka) March 26, 2025
ಆ ಜೀ ಈ ಜೀ ಗಳ ಮಾತುಕೇಳಿ ರಾಜಕೀಯ ಜೀವನ ಹಾಳು ಮಾಡಿಕೊಂಡ ಯತ್ನಾಳ್! pic.twitter.com/io9QllyIEV
In a scathing attack, the Karnataka Congress party has criticized BJP MLA Yatnal for his recent leadership decisions, accusing him of seeking advice from a multitude of sources that have ultimately led to a decline in his political career.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm