ಬ್ರೇಕಿಂಗ್ ನ್ಯೂಸ್
29-03-25 09:19 pm HK News Desk ಕರ್ನಾಟಕ
ಕಾರವಾರ, ಮಾ.29 : ಅಡಿಕೆ ಸುಲಿಯುವ ಕೆಲಸ ನಡೆಯುತ್ತಿದ್ದಾಗ ಯಂತ್ರಕ್ಕೆ ಸೀರೆ ಸಿಲುಕಿ ಮಹಿಳೆಯೊಬ್ಬರು ದಾರುಣ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಜಿಪಂ ಮಾಜಿ ಸದಸ್ಯ ವೆಂಕಟೇಶ ಹೆಗಡೆ ಹೊಸಬಾಳೆ ಅವರ ಪತ್ನಿ ಶೋಭ ಹೊಸಬಾಳೆ ಮೃತ ದುರ್ದೈವಿ. ಮನೆಯಲ್ಲಿ ಅಡಿಕೆ ಸುಲಿಯುವ ಕೆಲಸಕ್ಕೆ ಕೆಲಸದವರನ್ನು ನೇಮಕ ಮಾಡಿಕೊಂಡಿದ್ದರು. ಕೆಲಸ ಹೇಗೆ ನಡೀತಿದೆ ಎಂದು ನೋಡಲು ಹೋದಾಗ, ಮೆಷಿನ್ಗೆ ಸೀರೆ ಸಿಲುಕಿದ್ದು ನೆಲಕ್ಕೆ ಬಿದ್ದ ಮಹಿಳೆಯ ತಲೆ ಯಂತ್ರಕ್ಕೆ ಬಡಿದಿದೆ. ಘಟನೆಯಲ್ಲಿ ತೀವ್ರ ರಕ್ತಸ್ರಾವಗೊಂಡು ಮಹಿಳೆ ಮೃತಪಟ್ಟಿದ್ದಾರೆ.
ಕೆಲಸಗಾರರು ಸ್ಥಳದಲ್ಲಿ ಇದ್ದರೂ ಕ್ಷಣಾರ್ಧದಲ್ಲಿ ಘಟನೆ ಸಂಭವಿಸಿದೆ. ಕಳೆದ ಮೂರು ವರ್ಷಗಳಿಂದ ಚಾಲಿ ಅಡಿಕೆ ಸುಲಿಯುವ ವೇಳೆ ಶೋಭಾ ಹೆಗಡೆ ಅವರೇ ಎಲ್ಲವನ್ನೂ ನೋಡಿಕೊಳ್ಳುತ್ತಿದ್ದರು. ಆದರೆ, ಈ ಬಾರಿ ವಿಧಿ ಕೈಕೊಟ್ಟಿದ್ದು, ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ. ಈ ಕುರಿತು ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶೋಭಾ ಹೆಗಡೆ ತನ್ನ ಪತಿಯ ಪ್ರತಿ ಕಾರ್ಯಕ್ಕೂ ಬೆನ್ನೆಲುಬಾಗಿ ನಿಂತಿದ್ದರು. ದಿಢೀರ್ ಎದುರಾದ ಘಟನೆಯಿಂದ ಪರಿಸರದಲ್ಲಿ ದುಃಖ ಮಡುಗಟ್ಟಿದೆ.
Tragic Accident, Woman Dies After Saree Caught in Areca Nut Peeling Machine in Sirsi.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am