ಬ್ರೇಕಿಂಗ್ ನ್ಯೂಸ್
31-03-25 07:41 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.31 : ಕಳೆದ 11 ವರ್ಷಗಳಿಂದ ನೀವೇ ಅಧಿಕಾರದಲ್ಲಿ ಮೊಳೆ ಹೊಡೆದು ಕುಳಿತುಕೊಂಡಿದ್ದೀರಿ. ಇಷ್ಟು ದಿನ ನೀವು ಕಡಿದು ಕಟ್ಟೆ ಹಾಕಿರುವುದು ಏನು.? ಎಲ್ಲಾ ಸಮಸ್ಯೆಗಳಿಗೆ ಕಾಂಗ್ರೆಸ್ ಹಾಗೂ ನೆಹರು ಮೇಲೆ ಗೂಬೆ ಕೂರಿಸುವುದೇ ನಿಮ್ಮ ಕೆಲಸವೇ..? ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.
ಕಾಂಗ್ರೆಸ್ ನೀತಿಗಳಿಂದಾಗಿ ದಶಕಗಳಿಂದ ನಕ್ಸಲಿಸಂಗೆ ಪ್ರೋತ್ಸಾಹ ಸಿಕ್ಕಿದೆ ಎಂಬ ಮೋದಿಯವರ ಹೇಳಿಕೆ ವಿರುದ್ಧ ದಿನೇಶ್ ಗುಂಡೂರಾವ್ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ನಕ್ಸಲ್ ಸಮಸ್ಯೆಗೆ ಕಾಂಗ್ರೆಸ್ ನೀತಿ ಕಾರಣ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಪ್ರಧಾನಿ ಮೋದಿಯವರಿಗೆ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಒಂದು ಕಾಂಗ್ರೆಸ್ ಇರಬೇಕು ಇಲ್ಲವೆ ನೆಹರು ಇರಬೇಕು. ಇವರೆಡನ್ನು ಕನವರಿಸದೆ ಪ್ರಧಾನಿ ಜೀವಿಸಲಾರರು ಎಂದು ವ್ಯಂಗ್ಯವಾಡಿದ್ದಾರೆ.
ಮೋದಿಯವರ ವರಸೆ ಹೇಗಿದೆ ಎಂದರೆ, ದೇಶದ GDP ಕುಸಿದರೆ ಅದಕ್ಕೆ ಕಾಂಗ್ರೆಸ್ ಕಾರಣ ಎನ್ನುತ್ತಾರೆ ಇಲ್ಲವೆ ನೆಹರು ಕಾರಣ ಎನ್ನುತ್ತಾರೆ. ನಿರುದ್ಯೋಗ, ರೂಪಾಯಿ ಅಪಮೌಲ್ಯಕ್ಕೂ ಇದೆ ಕಾರಣ ಕೊಡುತ್ತಾರೆ. ಕೊನೆಗೆ ಮಳೆ ಜಾಸ್ತಿ ಬಂದರೂ ನೆಹರು ಕಾರಣ, ಮಳೆ ಬಾರದೆ ಇದ್ದರೂ ನೆಹರು ಕಾರಣ ಎನ್ನುತ್ತಾರೆ. ಇಂತಹವರಿಗೆ ಏನನ್ನಬೇಕು.
ಅಲ್ಲಾ ಸ್ವಾಮಿ ಮೋದಿಯವರೆ, ಕಳೆದ 11 ವರ್ಷಗಳಿಂದ ನೀವೆ ಅಧಿಕಾರದಲ್ಲಿ ಮೊಳೆ ಹೊಡೆದು ಕುಳಿತುಕೊಂಡಿದ್ದೀರಿ. ಇಷ್ಟಕ್ಕೂ ನೀವು ಕಡಿದು ಕಟ್ಟೆ ಹಾಕಿರುವುದು ಏನು.? ಎಲ್ಲಾ ಸಮಸ್ಯೆಗಳಿಗೆ ಕಾಂಗ್ರೆಸ್ ಹಾಗೂ ನೆಹರು ಮೇಲೆ ಗೂಬೆ ಕೂರಿಸುವುದೇ ನಿಮ್ಮ ಕೆಲಸವೆ..? ತಮ್ಮನ್ನು ತಾವು ಜೇಮ್ಸ್ ಬಾಂಡ್ ಎಂದು ಭಾವಿಸಿರುವ ನಿಮಗೆ ಕಳೆದ 11 ವರ್ಷಗಳಿಂದ ನಕ್ಸಲ್ ಸಮಸ್ಯೆ ಪರಿಹಾರ ಮಾಡಲು ಸಾಧ್ಯವಾಗಲಿಲ್ಲವೇ ? ಎಂದು ಪ್ರಶ್ನಿಸಿದ್ದಾರೆ.
Accountability in Power, Dinesh Gundurao Challenge to Prime Minister Modi.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm