ಬ್ರೇಕಿಂಗ್ ನ್ಯೂಸ್
31-03-25 07:41 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.31 : ಕಳೆದ 11 ವರ್ಷಗಳಿಂದ ನೀವೇ ಅಧಿಕಾರದಲ್ಲಿ ಮೊಳೆ ಹೊಡೆದು ಕುಳಿತುಕೊಂಡಿದ್ದೀರಿ. ಇಷ್ಟು ದಿನ ನೀವು ಕಡಿದು ಕಟ್ಟೆ ಹಾಕಿರುವುದು ಏನು.? ಎಲ್ಲಾ ಸಮಸ್ಯೆಗಳಿಗೆ ಕಾಂಗ್ರೆಸ್ ಹಾಗೂ ನೆಹರು ಮೇಲೆ ಗೂಬೆ ಕೂರಿಸುವುದೇ ನಿಮ್ಮ ಕೆಲಸವೇ..? ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.
ಕಾಂಗ್ರೆಸ್ ನೀತಿಗಳಿಂದಾಗಿ ದಶಕಗಳಿಂದ ನಕ್ಸಲಿಸಂಗೆ ಪ್ರೋತ್ಸಾಹ ಸಿಕ್ಕಿದೆ ಎಂಬ ಮೋದಿಯವರ ಹೇಳಿಕೆ ವಿರುದ್ಧ ದಿನೇಶ್ ಗುಂಡೂರಾವ್ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ನಕ್ಸಲ್ ಸಮಸ್ಯೆಗೆ ಕಾಂಗ್ರೆಸ್ ನೀತಿ ಕಾರಣ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಪ್ರಧಾನಿ ಮೋದಿಯವರಿಗೆ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಒಂದು ಕಾಂಗ್ರೆಸ್ ಇರಬೇಕು ಇಲ್ಲವೆ ನೆಹರು ಇರಬೇಕು. ಇವರೆಡನ್ನು ಕನವರಿಸದೆ ಪ್ರಧಾನಿ ಜೀವಿಸಲಾರರು ಎಂದು ವ್ಯಂಗ್ಯವಾಡಿದ್ದಾರೆ.
ಮೋದಿಯವರ ವರಸೆ ಹೇಗಿದೆ ಎಂದರೆ, ದೇಶದ GDP ಕುಸಿದರೆ ಅದಕ್ಕೆ ಕಾಂಗ್ರೆಸ್ ಕಾರಣ ಎನ್ನುತ್ತಾರೆ ಇಲ್ಲವೆ ನೆಹರು ಕಾರಣ ಎನ್ನುತ್ತಾರೆ. ನಿರುದ್ಯೋಗ, ರೂಪಾಯಿ ಅಪಮೌಲ್ಯಕ್ಕೂ ಇದೆ ಕಾರಣ ಕೊಡುತ್ತಾರೆ. ಕೊನೆಗೆ ಮಳೆ ಜಾಸ್ತಿ ಬಂದರೂ ನೆಹರು ಕಾರಣ, ಮಳೆ ಬಾರದೆ ಇದ್ದರೂ ನೆಹರು ಕಾರಣ ಎನ್ನುತ್ತಾರೆ. ಇಂತಹವರಿಗೆ ಏನನ್ನಬೇಕು.
ಅಲ್ಲಾ ಸ್ವಾಮಿ ಮೋದಿಯವರೆ, ಕಳೆದ 11 ವರ್ಷಗಳಿಂದ ನೀವೆ ಅಧಿಕಾರದಲ್ಲಿ ಮೊಳೆ ಹೊಡೆದು ಕುಳಿತುಕೊಂಡಿದ್ದೀರಿ. ಇಷ್ಟಕ್ಕೂ ನೀವು ಕಡಿದು ಕಟ್ಟೆ ಹಾಕಿರುವುದು ಏನು.? ಎಲ್ಲಾ ಸಮಸ್ಯೆಗಳಿಗೆ ಕಾಂಗ್ರೆಸ್ ಹಾಗೂ ನೆಹರು ಮೇಲೆ ಗೂಬೆ ಕೂರಿಸುವುದೇ ನಿಮ್ಮ ಕೆಲಸವೆ..? ತಮ್ಮನ್ನು ತಾವು ಜೇಮ್ಸ್ ಬಾಂಡ್ ಎಂದು ಭಾವಿಸಿರುವ ನಿಮಗೆ ಕಳೆದ 11 ವರ್ಷಗಳಿಂದ ನಕ್ಸಲ್ ಸಮಸ್ಯೆ ಪರಿಹಾರ ಮಾಡಲು ಸಾಧ್ಯವಾಗಲಿಲ್ಲವೇ ? ಎಂದು ಪ್ರಶ್ನಿಸಿದ್ದಾರೆ.
Accountability in Power, Dinesh Gundurao Challenge to Prime Minister Modi.
08-03-26 10:17 pm
HK News Staffer
ಟ್ರಂಪ್ ತಾಳಕ್ಕೆ ತಕ್ಕಂತೆ ಕುಣಿಯುವ ಗುಲಾಮ ಮೋದಿ ; ಇ...
08-03-26 07:51 pm
ಯುಪಿಎಸ್ಸಿ ಪರೀಕ್ಷೆಯಲ್ಲಿ ಒಟ್ಟು 958 ಮಂದಿ ತೇರ್ಗಡೆ...
08-03-26 07:38 pm
ಅಮಾನುಷ ಕೃತ್ಯ ; 90 ವರ್ಷದ ಅಜ್ಜಿಯನ್ನೂ ಬಿಡದ ಕಾಮುಕ...
08-03-26 04:47 pm
ಮಾನಹಾನಿ ಸುದ್ದಿಗಳ ಜಾಲತಾಣ ಲಿಂಕ್ ತೆರವು ಕೋರಿ ಕರ್ನ...
08-03-26 03:41 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm