ಬ್ರೇಕಿಂಗ್ ನ್ಯೂಸ್
31-03-25 07:41 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.31 : ಕಳೆದ 11 ವರ್ಷಗಳಿಂದ ನೀವೇ ಅಧಿಕಾರದಲ್ಲಿ ಮೊಳೆ ಹೊಡೆದು ಕುಳಿತುಕೊಂಡಿದ್ದೀರಿ. ಇಷ್ಟು ದಿನ ನೀವು ಕಡಿದು ಕಟ್ಟೆ ಹಾಕಿರುವುದು ಏನು.? ಎಲ್ಲಾ ಸಮಸ್ಯೆಗಳಿಗೆ ಕಾಂಗ್ರೆಸ್ ಹಾಗೂ ನೆಹರು ಮೇಲೆ ಗೂಬೆ ಕೂರಿಸುವುದೇ ನಿಮ್ಮ ಕೆಲಸವೇ..? ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.
ಕಾಂಗ್ರೆಸ್ ನೀತಿಗಳಿಂದಾಗಿ ದಶಕಗಳಿಂದ ನಕ್ಸಲಿಸಂಗೆ ಪ್ರೋತ್ಸಾಹ ಸಿಕ್ಕಿದೆ ಎಂಬ ಮೋದಿಯವರ ಹೇಳಿಕೆ ವಿರುದ್ಧ ದಿನೇಶ್ ಗುಂಡೂರಾವ್ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ನಕ್ಸಲ್ ಸಮಸ್ಯೆಗೆ ಕಾಂಗ್ರೆಸ್ ನೀತಿ ಕಾರಣ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಪ್ರಧಾನಿ ಮೋದಿಯವರಿಗೆ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಒಂದು ಕಾಂಗ್ರೆಸ್ ಇರಬೇಕು ಇಲ್ಲವೆ ನೆಹರು ಇರಬೇಕು. ಇವರೆಡನ್ನು ಕನವರಿಸದೆ ಪ್ರಧಾನಿ ಜೀವಿಸಲಾರರು ಎಂದು ವ್ಯಂಗ್ಯವಾಡಿದ್ದಾರೆ.
ಮೋದಿಯವರ ವರಸೆ ಹೇಗಿದೆ ಎಂದರೆ, ದೇಶದ GDP ಕುಸಿದರೆ ಅದಕ್ಕೆ ಕಾಂಗ್ರೆಸ್ ಕಾರಣ ಎನ್ನುತ್ತಾರೆ ಇಲ್ಲವೆ ನೆಹರು ಕಾರಣ ಎನ್ನುತ್ತಾರೆ. ನಿರುದ್ಯೋಗ, ರೂಪಾಯಿ ಅಪಮೌಲ್ಯಕ್ಕೂ ಇದೆ ಕಾರಣ ಕೊಡುತ್ತಾರೆ. ಕೊನೆಗೆ ಮಳೆ ಜಾಸ್ತಿ ಬಂದರೂ ನೆಹರು ಕಾರಣ, ಮಳೆ ಬಾರದೆ ಇದ್ದರೂ ನೆಹರು ಕಾರಣ ಎನ್ನುತ್ತಾರೆ. ಇಂತಹವರಿಗೆ ಏನನ್ನಬೇಕು.
ಅಲ್ಲಾ ಸ್ವಾಮಿ ಮೋದಿಯವರೆ, ಕಳೆದ 11 ವರ್ಷಗಳಿಂದ ನೀವೆ ಅಧಿಕಾರದಲ್ಲಿ ಮೊಳೆ ಹೊಡೆದು ಕುಳಿತುಕೊಂಡಿದ್ದೀರಿ. ಇಷ್ಟಕ್ಕೂ ನೀವು ಕಡಿದು ಕಟ್ಟೆ ಹಾಕಿರುವುದು ಏನು.? ಎಲ್ಲಾ ಸಮಸ್ಯೆಗಳಿಗೆ ಕಾಂಗ್ರೆಸ್ ಹಾಗೂ ನೆಹರು ಮೇಲೆ ಗೂಬೆ ಕೂರಿಸುವುದೇ ನಿಮ್ಮ ಕೆಲಸವೆ..? ತಮ್ಮನ್ನು ತಾವು ಜೇಮ್ಸ್ ಬಾಂಡ್ ಎಂದು ಭಾವಿಸಿರುವ ನಿಮಗೆ ಕಳೆದ 11 ವರ್ಷಗಳಿಂದ ನಕ್ಸಲ್ ಸಮಸ್ಯೆ ಪರಿಹಾರ ಮಾಡಲು ಸಾಧ್ಯವಾಗಲಿಲ್ಲವೇ ? ಎಂದು ಪ್ರಶ್ನಿಸಿದ್ದಾರೆ.
Accountability in Power, Dinesh Gundurao Challenge to Prime Minister Modi.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am