ಬ್ರೇಕಿಂಗ್ ನ್ಯೂಸ್
31-03-25 07:41 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.31 : ಕಳೆದ 11 ವರ್ಷಗಳಿಂದ ನೀವೇ ಅಧಿಕಾರದಲ್ಲಿ ಮೊಳೆ ಹೊಡೆದು ಕುಳಿತುಕೊಂಡಿದ್ದೀರಿ. ಇಷ್ಟು ದಿನ ನೀವು ಕಡಿದು ಕಟ್ಟೆ ಹಾಕಿರುವುದು ಏನು.? ಎಲ್ಲಾ ಸಮಸ್ಯೆಗಳಿಗೆ ಕಾಂಗ್ರೆಸ್ ಹಾಗೂ ನೆಹರು ಮೇಲೆ ಗೂಬೆ ಕೂರಿಸುವುದೇ ನಿಮ್ಮ ಕೆಲಸವೇ..? ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.
ಕಾಂಗ್ರೆಸ್ ನೀತಿಗಳಿಂದಾಗಿ ದಶಕಗಳಿಂದ ನಕ್ಸಲಿಸಂಗೆ ಪ್ರೋತ್ಸಾಹ ಸಿಕ್ಕಿದೆ ಎಂಬ ಮೋದಿಯವರ ಹೇಳಿಕೆ ವಿರುದ್ಧ ದಿನೇಶ್ ಗುಂಡೂರಾವ್ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ನಕ್ಸಲ್ ಸಮಸ್ಯೆಗೆ ಕಾಂಗ್ರೆಸ್ ನೀತಿ ಕಾರಣ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಪ್ರಧಾನಿ ಮೋದಿಯವರಿಗೆ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಒಂದು ಕಾಂಗ್ರೆಸ್ ಇರಬೇಕು ಇಲ್ಲವೆ ನೆಹರು ಇರಬೇಕು. ಇವರೆಡನ್ನು ಕನವರಿಸದೆ ಪ್ರಧಾನಿ ಜೀವಿಸಲಾರರು ಎಂದು ವ್ಯಂಗ್ಯವಾಡಿದ್ದಾರೆ.
ಮೋದಿಯವರ ವರಸೆ ಹೇಗಿದೆ ಎಂದರೆ, ದೇಶದ GDP ಕುಸಿದರೆ ಅದಕ್ಕೆ ಕಾಂಗ್ರೆಸ್ ಕಾರಣ ಎನ್ನುತ್ತಾರೆ ಇಲ್ಲವೆ ನೆಹರು ಕಾರಣ ಎನ್ನುತ್ತಾರೆ. ನಿರುದ್ಯೋಗ, ರೂಪಾಯಿ ಅಪಮೌಲ್ಯಕ್ಕೂ ಇದೆ ಕಾರಣ ಕೊಡುತ್ತಾರೆ. ಕೊನೆಗೆ ಮಳೆ ಜಾಸ್ತಿ ಬಂದರೂ ನೆಹರು ಕಾರಣ, ಮಳೆ ಬಾರದೆ ಇದ್ದರೂ ನೆಹರು ಕಾರಣ ಎನ್ನುತ್ತಾರೆ. ಇಂತಹವರಿಗೆ ಏನನ್ನಬೇಕು.
ಅಲ್ಲಾ ಸ್ವಾಮಿ ಮೋದಿಯವರೆ, ಕಳೆದ 11 ವರ್ಷಗಳಿಂದ ನೀವೆ ಅಧಿಕಾರದಲ್ಲಿ ಮೊಳೆ ಹೊಡೆದು ಕುಳಿತುಕೊಂಡಿದ್ದೀರಿ. ಇಷ್ಟಕ್ಕೂ ನೀವು ಕಡಿದು ಕಟ್ಟೆ ಹಾಕಿರುವುದು ಏನು.? ಎಲ್ಲಾ ಸಮಸ್ಯೆಗಳಿಗೆ ಕಾಂಗ್ರೆಸ್ ಹಾಗೂ ನೆಹರು ಮೇಲೆ ಗೂಬೆ ಕೂರಿಸುವುದೇ ನಿಮ್ಮ ಕೆಲಸವೆ..? ತಮ್ಮನ್ನು ತಾವು ಜೇಮ್ಸ್ ಬಾಂಡ್ ಎಂದು ಭಾವಿಸಿರುವ ನಿಮಗೆ ಕಳೆದ 11 ವರ್ಷಗಳಿಂದ ನಕ್ಸಲ್ ಸಮಸ್ಯೆ ಪರಿಹಾರ ಮಾಡಲು ಸಾಧ್ಯವಾಗಲಿಲ್ಲವೇ ? ಎಂದು ಪ್ರಶ್ನಿಸಿದ್ದಾರೆ.
Accountability in Power, Dinesh Gundurao Challenge to Prime Minister Modi.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am