ಬ್ರೇಕಿಂಗ್ ನ್ಯೂಸ್
01-04-25 03:49 pm Bangalore Correspondent ಕರ್ನಾಟಕ
ಬೆಂಗಳೂರು, ಎ.1 : ಜನತೆಗೆ ಬೆಲೆ ಏರಿಕೆ ಬರೆ ಹಾಕಿರುವ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಏ.2ರಿಂದ ಜನಾಕ್ರೋಶ ಯಾತ್ರೆ ನಡೆಸಲಾಗುತ್ತಿದ್ದು, ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿ, ಏ.2ರಂದು ಫ್ರೀಡಂಪಾರ್ಕ್ನಲ್ಲಿ ಬೆಲೆ ಏರಿಕೆ ವಿರುದ್ಧ ಬೆಳಗ್ಗೆಯಿಂದ ರಾತ್ರಿ ವರೆಗೂ ಧರಣಿ ನಡೆಸಲಾಗುವುದು. ಅಂದು ಅಹೋರಾತ್ರಿ ಧರಣಿ ನಡೆಸಲು ತೀರ್ಮಾನಿಸಲಾಗಿದೆ. ಬಿಜೆಪಿಯ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು, ಜಿಲ್ಲಾ ಅಧ್ಯಕ್ಷರು, ರಾಜ್ಯದ ಎಲ್ಲ ಪದಾಧಿಕಾರಿಗಳು ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಎ.4ರಂದು ಎಲ್ಲ ಕಡೆಯ ಜಿಲ್ಲಾ ಕೇಂದ್ರಗಳಲ್ಲಿ ಮತ್ತು ಏ.5ರಂದು ಎಲ್ಲ ಮಂಡಲಗಳಲ್ಲಿ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ಮಾಡಲಿದ್ದೇವೆ. ಪಕ್ಷದ ಎಲ್ಲ ಮುಖಂಡರು ಕುಳಿತು ಅನೇಕ ವಿಚಾರಗಳನ್ನು ಚರ್ಚಿಸಿದ್ದೇವೆ. ವಿಶೇಷವಾಗಿ ರಾಜ್ಯ ಸರ್ಕಾರವು ಜನರಿಗೆ ಬೆಲೆ ಏರಿಕೆಯ ಗ್ಯಾರಂಟಿ ನೀಡಿದೆ. ನೀರಿನ ದರ, ಪೆಟ್ರೋಲ್ ದರ ಹೆಚ್ಚಳ ಮಾಡಲಾಗಿದೆ. ಹಾಲಿನ ದರವನ್ನು ಮೂರನೇ ಬಾರಿಗೆ ಏರಿಕೆ ಮಾಡಲಾಗಿದೆ. ವಿದ್ಯುತ್ ದರವನ್ನೂ ಹೆಚ್ಚಿಸಲಾಗಿದೆ. ಬೆಲೆ ಏರಿಕೆ ಜನರಿಗೆ ಯುಗಾದಿ ಕೊಡುಗೆಯಂತಿದೆ ಎಂದು ವ್ಯಂಗ್ಯವಾಡಿದರು.
ಬೆಲೆ ಏರಿಕೆ ಮಾಡಿದ ಸರ್ಕಾರದ ವಿರುದ್ಧ ಜನಾಂದೋಲನ ಮಾಡಲಿದ್ದೇವೆ. ಜನರಲ್ಲಿ ಜಾಗೃತಿ ಮೂಡಿಸಲು ಸರ್ಕಾರದ ವಿರುದ್ಧ ಹೋರಾಟ ಮಾಡಲು ತೀರ್ಮಾನಿಸಲಾಗಿದೆ. ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರವು ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡಿದ್ದು, ಇದು ಒಂದು ಕಣ್ಣಿಗೆ ಸುಣ್ಣ, ಇನ್ನೊಂದು ಕಣ್ಣಿಗೆ ಬೆಣ್ಣೆಯಂತಿದೆ. ಹಿಂದೂಗಳಿಗೆ ಮಾಡಿದ ಈ ಅವಮಾನದ ವಿರುದ್ಧ ಜನಜಾಗೃತಿ ಮೂಡಿಸುತ್ತೇವೆ. ಈ ನಿಟ್ಟಿನಲ್ಲಿ ಎಲ್ಲ ಜಿಲ್ಲಾ ಕೇಂದ್ರಗಳಿಗೆ ಪ್ರವಾಸ ಮಾಡುತ್ತೇವೆ ಎಂದು ತಿಳಿಸಿದರು.
BJP State president B.Y. Vijayendra on Saturday announced an overnight sit-in protest against the Congress government’s price hikes, at Freedom Park in Bengaluru on April 2.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
15-02-26 04:01 pm
HK Desk
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
15-02-26 08:52 pm
Mangalore Correspondent
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am