ಬ್ರೇಕಿಂಗ್ ನ್ಯೂಸ್
01-04-25 03:49 pm Bangalore Correspondent ಕರ್ನಾಟಕ
ಬೆಂಗಳೂರು, ಎ.1 : ಜನತೆಗೆ ಬೆಲೆ ಏರಿಕೆ ಬರೆ ಹಾಕಿರುವ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಏ.2ರಿಂದ ಜನಾಕ್ರೋಶ ಯಾತ್ರೆ ನಡೆಸಲಾಗುತ್ತಿದ್ದು, ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿ, ಏ.2ರಂದು ಫ್ರೀಡಂಪಾರ್ಕ್ನಲ್ಲಿ ಬೆಲೆ ಏರಿಕೆ ವಿರುದ್ಧ ಬೆಳಗ್ಗೆಯಿಂದ ರಾತ್ರಿ ವರೆಗೂ ಧರಣಿ ನಡೆಸಲಾಗುವುದು. ಅಂದು ಅಹೋರಾತ್ರಿ ಧರಣಿ ನಡೆಸಲು ತೀರ್ಮಾನಿಸಲಾಗಿದೆ. ಬಿಜೆಪಿಯ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು, ಜಿಲ್ಲಾ ಅಧ್ಯಕ್ಷರು, ರಾಜ್ಯದ ಎಲ್ಲ ಪದಾಧಿಕಾರಿಗಳು ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಎ.4ರಂದು ಎಲ್ಲ ಕಡೆಯ ಜಿಲ್ಲಾ ಕೇಂದ್ರಗಳಲ್ಲಿ ಮತ್ತು ಏ.5ರಂದು ಎಲ್ಲ ಮಂಡಲಗಳಲ್ಲಿ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ಮಾಡಲಿದ್ದೇವೆ. ಪಕ್ಷದ ಎಲ್ಲ ಮುಖಂಡರು ಕುಳಿತು ಅನೇಕ ವಿಚಾರಗಳನ್ನು ಚರ್ಚಿಸಿದ್ದೇವೆ. ವಿಶೇಷವಾಗಿ ರಾಜ್ಯ ಸರ್ಕಾರವು ಜನರಿಗೆ ಬೆಲೆ ಏರಿಕೆಯ ಗ್ಯಾರಂಟಿ ನೀಡಿದೆ. ನೀರಿನ ದರ, ಪೆಟ್ರೋಲ್ ದರ ಹೆಚ್ಚಳ ಮಾಡಲಾಗಿದೆ. ಹಾಲಿನ ದರವನ್ನು ಮೂರನೇ ಬಾರಿಗೆ ಏರಿಕೆ ಮಾಡಲಾಗಿದೆ. ವಿದ್ಯುತ್ ದರವನ್ನೂ ಹೆಚ್ಚಿಸಲಾಗಿದೆ. ಬೆಲೆ ಏರಿಕೆ ಜನರಿಗೆ ಯುಗಾದಿ ಕೊಡುಗೆಯಂತಿದೆ ಎಂದು ವ್ಯಂಗ್ಯವಾಡಿದರು.
ಬೆಲೆ ಏರಿಕೆ ಮಾಡಿದ ಸರ್ಕಾರದ ವಿರುದ್ಧ ಜನಾಂದೋಲನ ಮಾಡಲಿದ್ದೇವೆ. ಜನರಲ್ಲಿ ಜಾಗೃತಿ ಮೂಡಿಸಲು ಸರ್ಕಾರದ ವಿರುದ್ಧ ಹೋರಾಟ ಮಾಡಲು ತೀರ್ಮಾನಿಸಲಾಗಿದೆ. ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರವು ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡಿದ್ದು, ಇದು ಒಂದು ಕಣ್ಣಿಗೆ ಸುಣ್ಣ, ಇನ್ನೊಂದು ಕಣ್ಣಿಗೆ ಬೆಣ್ಣೆಯಂತಿದೆ. ಹಿಂದೂಗಳಿಗೆ ಮಾಡಿದ ಈ ಅವಮಾನದ ವಿರುದ್ಧ ಜನಜಾಗೃತಿ ಮೂಡಿಸುತ್ತೇವೆ. ಈ ನಿಟ್ಟಿನಲ್ಲಿ ಎಲ್ಲ ಜಿಲ್ಲಾ ಕೇಂದ್ರಗಳಿಗೆ ಪ್ರವಾಸ ಮಾಡುತ್ತೇವೆ ಎಂದು ತಿಳಿಸಿದರು.
BJP State president B.Y. Vijayendra on Saturday announced an overnight sit-in protest against the Congress government’s price hikes, at Freedom Park in Bengaluru on April 2.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm