ಬ್ರೇಕಿಂಗ್ ನ್ಯೂಸ್
01-04-25 09:35 pm Bangalore Correspondent ಕರ್ನಾಟಕ
ಬೆಂಗಳೂರು, ಏ 01: ಅನೇಕ ಬೆಲೆ ಏರಿಕೆಗಳೊಂದಿಗೆ ಜನರ ಮೇಲೆ ಬರೆ ಎಳೆದಿರುವ ರಾಜ್ಯ ಸರ್ಕಾರ, ಇದೀಗ ಮತ್ತೊಂದು ಬೆಲೆ ಏರಿಕೆಯ ಶಾಕ್ ನೀಡಿದೆ. ಡೀಸೆಲ್ ಬೆಲೆ 2 ರೂ. ಏರಿಸಿ ಸರ್ಕಾರ ರಾಜ್ಯದ ಜನರಿಗೆ ಮತ್ತೊಂದು ಬರೆ ಎಳೆದಿದೆ.
ಏಪ್ರಿಲ್ 1ರಿಂದ ಅನ್ವಯವಾಗುವಂತೆ ಈಗಾಗಲೇ ಹಾಲು, ವಿದ್ಯುತ್, ಟೋಲ್ ದರ ಏರಿಕೆ ಮಾಡಿರುವ ಸರ್ಕಾರ, ಇದೀಗ ಆ ಪಟ್ಟಿಗೆ ಡೀಸೆಲ್ ಅನ್ನು ಸೇರಿಸಿದೆ. ಡೀಸೆಲ್ ಬೆಲೆ ಮೇಲಿನ ಮಾರಾಟ ತೆರಿಗೆಯನ್ನು ಶೇ 18.44 ರಿಂದ ಶೇ 21.17 ಗೆ ಏರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆ ಮೂಲಕ 2 ರೂ. ಏರಿಕೆ ಮಾಡಿದೆ.
ಅದರಂತೆ, ರಾಜ್ಯದಲ್ಲಿ ಡೀಸೆಲ್ ದರ 91.02 ರೂ. ಆಗಲಿದೆ. ಈ ಮುಂಚೆ ಬೆಂಗಳೂರಲ್ಲಿ ಡೀಸೆಲ್ ದರ 89.02 ರೂ. ಇದೆ. ಪರಿಷ್ಕೃತ ದರ ಇಂದಿನಿಂದಲೇ ಅನ್ವಯವಾಗಲಿದೆ. ಡೀಸೆಲ್ ಬೆಲೆ ಏರಿಕೆಯಿಂದ ರಾಜ್ಯದ ಜನರ ಮೇಲೆ ಮತ್ತೆ ಹೊರೆ ಬೀಳಲಿದೆ. ಸರಕುಗಳು, ಹಣ್ಣು, ತರಕಾರಿಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ.
2021ರಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಪೆಟ್ರೋಲ್ ಮೇಲಿನ ಮಾರಾಟ ತೆರಿಗೆಯನ್ನು ಶೇ 25.92 ಕ್ಕೆ ಹಾಗೂ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಶೇ 14.34ಕ್ಕೆ ಇಳಿಕೆ ಮಾಡಿತ್ತು. ಬಳಿಕ 2024ರ ಜೂನ್ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಪೆಟ್ರೋಲ್ ಮೇಲಿನ ಮಾರಾಟ ತೆರಿಗೆಯನ್ನು 29.84%ಗೆ ಏರಿಕೆ ಮಾಡಿದ್ದರೆ, ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು 18.44%ಗೆ ಏರಿಕೆ ಮಾಡಿತ್ತು. ಇದೀಗ ರಾಜ್ಯ ಸರ್ಕಾರ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು 21.17%ಗೆ ಏರಿಕೆ ಮಾಡಿದೆ.
The Karnataka State Government increased the sales tax on diesel, resulting in a price hike of Rs 2 per litre. Effective from April 1, 2025, the Karnataka Sales Tax rate on diesel has been revised from 18.44 percent to 21.17 percent, bringing the new price to Rs 91.02 per litre in the state.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm