ಬ್ರೇಕಿಂಗ್ ನ್ಯೂಸ್
01-04-25 09:35 pm Bangalore Correspondent ಕರ್ನಾಟಕ
ಬೆಂಗಳೂರು, ಏ 01: ಅನೇಕ ಬೆಲೆ ಏರಿಕೆಗಳೊಂದಿಗೆ ಜನರ ಮೇಲೆ ಬರೆ ಎಳೆದಿರುವ ರಾಜ್ಯ ಸರ್ಕಾರ, ಇದೀಗ ಮತ್ತೊಂದು ಬೆಲೆ ಏರಿಕೆಯ ಶಾಕ್ ನೀಡಿದೆ. ಡೀಸೆಲ್ ಬೆಲೆ 2 ರೂ. ಏರಿಸಿ ಸರ್ಕಾರ ರಾಜ್ಯದ ಜನರಿಗೆ ಮತ್ತೊಂದು ಬರೆ ಎಳೆದಿದೆ.
ಏಪ್ರಿಲ್ 1ರಿಂದ ಅನ್ವಯವಾಗುವಂತೆ ಈಗಾಗಲೇ ಹಾಲು, ವಿದ್ಯುತ್, ಟೋಲ್ ದರ ಏರಿಕೆ ಮಾಡಿರುವ ಸರ್ಕಾರ, ಇದೀಗ ಆ ಪಟ್ಟಿಗೆ ಡೀಸೆಲ್ ಅನ್ನು ಸೇರಿಸಿದೆ. ಡೀಸೆಲ್ ಬೆಲೆ ಮೇಲಿನ ಮಾರಾಟ ತೆರಿಗೆಯನ್ನು ಶೇ 18.44 ರಿಂದ ಶೇ 21.17 ಗೆ ಏರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆ ಮೂಲಕ 2 ರೂ. ಏರಿಕೆ ಮಾಡಿದೆ.
ಅದರಂತೆ, ರಾಜ್ಯದಲ್ಲಿ ಡೀಸೆಲ್ ದರ 91.02 ರೂ. ಆಗಲಿದೆ. ಈ ಮುಂಚೆ ಬೆಂಗಳೂರಲ್ಲಿ ಡೀಸೆಲ್ ದರ 89.02 ರೂ. ಇದೆ. ಪರಿಷ್ಕೃತ ದರ ಇಂದಿನಿಂದಲೇ ಅನ್ವಯವಾಗಲಿದೆ. ಡೀಸೆಲ್ ಬೆಲೆ ಏರಿಕೆಯಿಂದ ರಾಜ್ಯದ ಜನರ ಮೇಲೆ ಮತ್ತೆ ಹೊರೆ ಬೀಳಲಿದೆ. ಸರಕುಗಳು, ಹಣ್ಣು, ತರಕಾರಿಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ.
2021ರಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಪೆಟ್ರೋಲ್ ಮೇಲಿನ ಮಾರಾಟ ತೆರಿಗೆಯನ್ನು ಶೇ 25.92 ಕ್ಕೆ ಹಾಗೂ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಶೇ 14.34ಕ್ಕೆ ಇಳಿಕೆ ಮಾಡಿತ್ತು. ಬಳಿಕ 2024ರ ಜೂನ್ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಪೆಟ್ರೋಲ್ ಮೇಲಿನ ಮಾರಾಟ ತೆರಿಗೆಯನ್ನು 29.84%ಗೆ ಏರಿಕೆ ಮಾಡಿದ್ದರೆ, ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು 18.44%ಗೆ ಏರಿಕೆ ಮಾಡಿತ್ತು. ಇದೀಗ ರಾಜ್ಯ ಸರ್ಕಾರ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು 21.17%ಗೆ ಏರಿಕೆ ಮಾಡಿದೆ.
The Karnataka State Government increased the sales tax on diesel, resulting in a price hike of Rs 2 per litre. Effective from April 1, 2025, the Karnataka Sales Tax rate on diesel has been revised from 18.44 percent to 21.17 percent, bringing the new price to Rs 91.02 per litre in the state.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am